ಸಿದ್ದರಾಮಯ್ಯ ಮತ್ತು ಪಾರ್ವತಿ ವಿರುದ್ಧದ ಆರೋಪ ಸಂಬಂಧ ಲೋಕಾಯುಕ್ತರು ತನಿಖೆ ನಡೆಸುತ್ತಿದ್ದಾರೆ. ಇತ್ತೀಚೆಗೆ, ಹೈಕೋರ್ಟ್ನ ಏಕಸದಸ್ಯ ಪೀಠವು ಸಿಎಂ ವಿರುದ್ಧದ ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿ ಆದೇಶ ನೀಡಿತ್ತು. ಇದನ್ನು ಪ್ರಶ್ನಿಸಿ ಮುಖ್ಯಮಂತ್ರಿಗಳು ಹೈಕೋರ್ಟ್ ದ್ವಿಸದಸ್ಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಿದ್ದರು. ಮೇಲ್ಮನವಿಯು ಶನಿವಾರದಂದು ವಿಚಾರಣೆಗೆ ಬರಲಿದೆ. ಹೀಗಾಗಿ ಮುಖ್ಯಮಂತ್ರಿಗಳು ತಮ್ಮ ವಕೀಲ ಅಭಿಷೇಕ್ ಮನುಸಿಂಘ್ವಿ ಜತೆ ಮುಂಬರುವ ಕಾನೂನು ಹೋರಾಟದ ಕಾರ್ಯತಂತ್ರಗಳ ಬಗ್ಗೆ ಸಮಾಲೋಚನೆ ನಡೆಸಿದ್ದಾರೆ.
ದೆಹಲಿಯಲ್ಲಿ ನಂದಿನಿ ಉತ್ಪನ್ನಗಳ ಮಾರಾಟಕ್ಕೆ ಚಾಲನೆ ನೀಡುವ ಕಾರ್ಯಕ್ರಮಕ್ಕೆ ತೆರಳುವುದಕ್ಕೂ ಮುನ್ನ ಸಿಎಂ ಅವರು ಸಿಂಘ್ವಿಯನ್ನು ಭೇಟಿಯಾಗಿದ್ದಾರೆ.