LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Crime News

ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಬಹುಕೋಟಿ ಹಗರಣ; 8 ಕಡೆ ಏಕಕಾಲಕ್ಕೆ ಇ.ಡಿ ಅಧಿಕಾರಿಗಳು ದಾಳಿ

ಬೆಂಗಳೂರು, ಜೂನ್​ 11: ಮುಡಾ ಅಕ್ರಮ ಸೈಟ್​ ಹಂಚಿಕೆ ಮಾಡಿದ್ದ ಪ್ರಕರಣದಲ್ಲಿ ನಿನ್ನೆ ಇ.ಡಿ 100 ಕೋಟಿ ರೂ ಮೌಲ್ಯದ 92 ನಿವೇಶನಗಳನ್ನು ಮುಟ್ಟುಗೋಲು ಹಾಕಿತ್ತು. ಇದರ ಬೆನ್ನಲ್ಲೇ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಬಹುಕೋಟಿ ಹಗರಣ ಪ್ರಕರಣಕ್ಕೆ  ಸಂಬಂಧಿಸಿದಂತೆ ಇಂದು ಕರ್ನಾಟಕದ ಒಟ್ಟು 8 ಕಡೆ ಏಕಕಾಲಕ್ಕೆ ಇ.ಡಿ ಅಧಿಕಾರಿಗಳು ದಾಳಿ  ಮಾಡಿದ್ದಾರೆ. ಕೆಲ ಸಂಸದರು, ಶಾಸಕರ ಮನೆ ಮೇಲೆ ಇ.ಡಿ ದಾಳಿ ಮಾಡಿ ಪರಿಶೀಲನೆ ನಡೆಸಿದೆ. ಲೋಕಸಭಾ ಚುನಾವಣೆ ಸಂದರ್ಭದಲ್ಲಿ ನಿಗಮದ ಹಣ ದುರ್ಬಳಕೆಯಾಗಿದೆ ಎಂಬ ಆರೋಪ ಹಿನ್ನೆಲೆ ದಾಳಿ ಮಾಡಲಾಗಿದೆ.

ಬಳ್ಳಾರಿಯಲ್ಲಿ 5 ಸ್ಥಳ, ಬೆಂಗಳೂರಿನಲ್ಲಿ 3 ಕಡೆ ಇಡಿ ದಾಳಿ ನಡೆದಿದ್ದು, ಬಳ್ಳಾರಿ ಸಂಸದ ಇ.ತುಕಾರಾಂ, ಕಂಪ್ಲಿ ಕ್ಷೇತ್ರದ ಶಾಸಕ ಜೆ.ಎನ್​.ಗಣೇಶ್, ಬಳ್ಳಾರಿ ನಗರ ವಿಧಾನಸಭಾ ಕ್ಷೇತ್ರದ ಶಾಸಕ ನಾರಾಭರತ್ ರೆಡ್ಡಿ, ಬಳ್ಳಾರಿ ಗ್ರಾಮಾಂತರ ಶಾಸಕ ಬಿ.ನಾಗೇಂದ್ರ ಮತ್ತು ಕೂಡ್ಲಿಗಿ ಶಾಸಕ ಶ್ರೀನಿವಾಸ್​ ಮನೆ ಮೇಲೆ ದಾಳಿ ನಡೆಸಿ ಪರಿಶೀಲನೆ ಮಾಡಲಾಗುತ್ತಿದೆ.

ಸಂಡೂರಿನಲ್ಲಿರುವ ಸಂಸದ ಇ.ತುಕಾರಾಂ ನಿವಾಸದ ಮೇಲೆ ಜಾರಿ ನಿರ್ದೇಶನಾಲಯದ 10ಕ್ಕೂ ಹೆಚ್ಚು ಅಧಿಕಾರಿಗಳಿಂದ ದಾಳಿ ಮಾಡಲಾಗಿದೆ. ಮನೆಯಿಂದ 2 ಕಿ.ಮೀ. ದೂರದಲ್ಲಿ ರಸ್ತೆಗೆ ಬ್ಯಾರಿಕೇಡ್ ಅವಳಡಿಕೆ ಮಾಡಲಾಗಿದೆ.

ಲೋಕಸಭಾ ಚುನಾವಣೆ ವೇಳೆ ಹಣ ಹಂಚಿಕೆ ಬಗ್ಗೆ ಇಡಿ ವಿಚಾರಣೆ ನಡೆಸಿದ್ದು, ಅಧಿಕಾರಿಗಳ ಪ್ರಶ್ನೆಗಳಿಗೆ ಸಂಸದ ತುಕಾರಾಂ ಕಕ್ಕಾಬಿಕ್ಕಿಯಾಗಿದ್ದಾರೆ. ಬಿ.ನಾಗೇಂದ್ರ ಪಿಎ ಬಳಿ ಸಿಕ್ಕ ಡೈರಿ ಆಧಾರವಾಗಿಟ್ಟುಕೊಂಡು ಪ್ರಶ್ನೆ ಮಾಡಲಾಗಿದ್ದು, ಅಧಿಕಾರಿಗಳ ಪ್ರಶ್ನೆಗಳಿಗೆ ತನಗೇನೂ ಗೊತ್ತಿಲ್ಲ ಎನ್ನುತ್ತಿದ್ದಾರೆ.

ಕಂಪ್ಲಿ ಶಾಸಕ ಜೆಎನ್​ ಗಣೇಶ್ ನಿವಾಸ ಮತ್ತು ಕಚೇರಿಯಲ್ಲಿ 10 ಕ್ಕೂ ಹೆಚ್ಚು ಅಧಿಕಾರಿಗಳಿಂದ ಶೋಧ ಮಾಡಲಾಗುತ್ತಿದ್ದು, ಹಣ ಹಂಚಿಕೆ ಬಗ್ಗೆ ಅಧಿಕಾರಿಗಳು ಮಾಹಿತಿ ಕಲೆ ಹಾಕುತ್ತಿದ್ದಾರೆ. ಅದೇ ರೀತಿಯಾಗಿ ಬಳ್ಳಾರಿ ನಗರ ವಿಧಾನಸಭಾ ಕ್ಷೇತ್ರದ ಶಾಸಕ ಭರತ್ ರೆಡ್ಡಿ ಮತ್ತು ಕೂಡ್ಲಿಗಿ ಶಾಸಕ ಶ್ರೀನಿವಾಸ್​ ಮನೆ ಮೇಲೂ ದಾಳಿ ನಡೆಸಿ ಪರಿಶೀಲನೆ ಮಾಡಲಾಗುತ್ತಿದೆ.

ಇನ್ನು ಈಗಾಗಲೇ ಪ್ರಕರಣದಲ್ಲಿ ಅರೆಸ್ಟ್ ಆಗಿ ಬೇಲ್​ ಪಡೆದಿರುವ ಬಳ್ಳಾರಿ ಗ್ರಾಮಾಂತರ ಶಾಸಕ ಬಿ.ನಾಗೇಂದ್ರ ನಿವಾಸದ ಮೇಲೆ ಕೂಡ ರೇಡ್ ಮಾಡಲಾಗಿದೆ. ಬಿ.ನಾಗೇಂದ್ರಗೆ ಸೇರಿದ ಬೆಂಗಳೂರಿನಲ್ಲಿ ಶಾಸಕರ ಭವನದ ಕೊಠಡಿ ನಂಬರ್ 360ರಲ್ಲಿ ಮೇಲೂ ದಾಳಿ ಮಾಡಿ ಪರಿಶೀಲನೆ ಮಾಡಲಾಗುತ್ತಿದೆ. ತನಿಖೆ ಮುಗಿದಿದೆ ಎನ್ನುವ ಹೊತ್ತಿನಲ್ಲೇ ಮತ್ತೆ ದಾಳಿ ಮಾಡಲಾಗಿದೆ.

ಕಾಂಗ್ರೆಸ್ ಸಂಸದರು,​​ ಶಾಸಕರ ಮನೆಗಳ ಮೇಲೆ ಇಡಿ ದಾಳಿ ವಿಚಾರವಾಗಿ ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರಲ್ಲಿ ಸಿಎಂ ಸಿದ್ದರಾಮಯ್ಯ ಹೇಳಿಕೆ ನೀಡಿದ್ದು, ಯಾರೇ ಆಗಲಿ ತಪ್ಪು ಮಾಡಿದ್ದರೆ ಕ್ರಮಕೈಗೊಳ್ಳಲಿ. ಯಾವುದೇ ಕಾರಣಕ್ಕೂ ತಪ್ಪುಗಳನ್ನು ನಾವು ಬೆಂಬಲಿಸುವುದಿಲ್ಲ ಎಂದು ಹೇಳಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್