Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಬಹುಕೋಟಿ ಹಗರಣ; 8 ಕಡೆ ಏಕಕಾಲಕ್ಕೆ ಇ.ಡಿ ಅಧಿಕಾರಿಗಳು ದಾಳಿ

ಬೆಂಗಳೂರು, ಜೂನ್​ 11: ಮುಡಾ ಅಕ್ರಮ ಸೈಟ್​ ಹಂಚಿಕೆ ಮಾಡಿದ್ದ ಪ್ರಕರಣದಲ್ಲಿ ನಿನ್ನೆ ಇ.ಡಿ 100 ಕೋಟಿ ರೂ ಮೌಲ್ಯದ 92 ನಿವೇಶನಗಳನ್ನು ಮುಟ್ಟುಗೋಲು ಹಾಕಿತ್ತು. ಇದರ ಬೆನ್ನಲ್ಲೇ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಬಹುಕೋಟಿ ಹಗರಣ ಪ್ರಕರಣಕ್ಕೆ  ಸಂಬಂಧಿಸಿದಂತೆ ಇಂದು ಕರ್ನಾಟಕದ ಒಟ್ಟು 8 ಕಡೆ ಏಕಕಾಲಕ್ಕೆ ಇ.ಡಿ ಅಧಿಕಾರಿಗಳು ದಾಳಿ  ಮಾಡಿದ್ದಾರೆ. ಕೆಲ ಸಂಸದರು, ಶಾಸಕರ ಮನೆ ಮೇಲೆ ಇ.ಡಿ ದಾಳಿ ಮಾಡಿ ಪರಿಶೀಲನೆ ನಡೆಸಿದೆ. ಲೋಕಸಭಾ ಚುನಾವಣೆ ಸಂದರ್ಭದಲ್ಲಿ ನಿಗಮದ ಹಣ ದುರ್ಬಳಕೆಯಾಗಿದೆ ಎಂಬ ಆರೋಪ ಹಿನ್ನೆಲೆ ದಾಳಿ ಮಾಡಲಾಗಿದೆ.

ಬಳ್ಳಾರಿಯಲ್ಲಿ 5 ಸ್ಥಳ, ಬೆಂಗಳೂರಿನಲ್ಲಿ 3 ಕಡೆ ಇಡಿ ದಾಳಿ ನಡೆದಿದ್ದು, ಬಳ್ಳಾರಿ ಸಂಸದ ಇ.ತುಕಾರಾಂ, ಕಂಪ್ಲಿ ಕ್ಷೇತ್ರದ ಶಾಸಕ ಜೆ.ಎನ್​.ಗಣೇಶ್, ಬಳ್ಳಾರಿ ನಗರ ವಿಧಾನಸಭಾ ಕ್ಷೇತ್ರದ ಶಾಸಕ ನಾರಾಭರತ್ ರೆಡ್ಡಿ, ಬಳ್ಳಾರಿ ಗ್ರಾಮಾಂತರ ಶಾಸಕ ಬಿ.ನಾಗೇಂದ್ರ ಮತ್ತು ಕೂಡ್ಲಿಗಿ ಶಾಸಕ ಶ್ರೀನಿವಾಸ್​ ಮನೆ ಮೇಲೆ ದಾಳಿ ನಡೆಸಿ ಪರಿಶೀಲನೆ ಮಾಡಲಾಗುತ್ತಿದೆ.

ಸಂಡೂರಿನಲ್ಲಿರುವ ಸಂಸದ ಇ.ತುಕಾರಾಂ ನಿವಾಸದ ಮೇಲೆ ಜಾರಿ ನಿರ್ದೇಶನಾಲಯದ 10ಕ್ಕೂ ಹೆಚ್ಚು ಅಧಿಕಾರಿಗಳಿಂದ ದಾಳಿ ಮಾಡಲಾಗಿದೆ. ಮನೆಯಿಂದ 2 ಕಿ.ಮೀ. ದೂರದಲ್ಲಿ ರಸ್ತೆಗೆ ಬ್ಯಾರಿಕೇಡ್ ಅವಳಡಿಕೆ ಮಾಡಲಾಗಿದೆ.

ಲೋಕಸಭಾ ಚುನಾವಣೆ ವೇಳೆ ಹಣ ಹಂಚಿಕೆ ಬಗ್ಗೆ ಇಡಿ ವಿಚಾರಣೆ ನಡೆಸಿದ್ದು, ಅಧಿಕಾರಿಗಳ ಪ್ರಶ್ನೆಗಳಿಗೆ ಸಂಸದ ತುಕಾರಾಂ ಕಕ್ಕಾಬಿಕ್ಕಿಯಾಗಿದ್ದಾರೆ. ಬಿ.ನಾಗೇಂದ್ರ ಪಿಎ ಬಳಿ ಸಿಕ್ಕ ಡೈರಿ ಆಧಾರವಾಗಿಟ್ಟುಕೊಂಡು ಪ್ರಶ್ನೆ ಮಾಡಲಾಗಿದ್ದು, ಅಧಿಕಾರಿಗಳ ಪ್ರಶ್ನೆಗಳಿಗೆ ತನಗೇನೂ ಗೊತ್ತಿಲ್ಲ ಎನ್ನುತ್ತಿದ್ದಾರೆ.

ಕಂಪ್ಲಿ ಶಾಸಕ ಜೆಎನ್​ ಗಣೇಶ್ ನಿವಾಸ ಮತ್ತು ಕಚೇರಿಯಲ್ಲಿ 10 ಕ್ಕೂ ಹೆಚ್ಚು ಅಧಿಕಾರಿಗಳಿಂದ ಶೋಧ ಮಾಡಲಾಗುತ್ತಿದ್ದು, ಹಣ ಹಂಚಿಕೆ ಬಗ್ಗೆ ಅಧಿಕಾರಿಗಳು ಮಾಹಿತಿ ಕಲೆ ಹಾಕುತ್ತಿದ್ದಾರೆ. ಅದೇ ರೀತಿಯಾಗಿ ಬಳ್ಳಾರಿ ನಗರ ವಿಧಾನಸಭಾ ಕ್ಷೇತ್ರದ ಶಾಸಕ ಭರತ್ ರೆಡ್ಡಿ ಮತ್ತು ಕೂಡ್ಲಿಗಿ ಶಾಸಕ ಶ್ರೀನಿವಾಸ್​ ಮನೆ ಮೇಲೂ ದಾಳಿ ನಡೆಸಿ ಪರಿಶೀಲನೆ ಮಾಡಲಾಗುತ್ತಿದೆ.

ಇನ್ನು ಈಗಾಗಲೇ ಪ್ರಕರಣದಲ್ಲಿ ಅರೆಸ್ಟ್ ಆಗಿ ಬೇಲ್​ ಪಡೆದಿರುವ ಬಳ್ಳಾರಿ ಗ್ರಾಮಾಂತರ ಶಾಸಕ ಬಿ.ನಾಗೇಂದ್ರ ನಿವಾಸದ ಮೇಲೆ ಕೂಡ ರೇಡ್ ಮಾಡಲಾಗಿದೆ. ಬಿ.ನಾಗೇಂದ್ರಗೆ ಸೇರಿದ ಬೆಂಗಳೂರಿನಲ್ಲಿ ಶಾಸಕರ ಭವನದ ಕೊಠಡಿ ನಂಬರ್ 360ರಲ್ಲಿ ಮೇಲೂ ದಾಳಿ ಮಾಡಿ ಪರಿಶೀಲನೆ ಮಾಡಲಾಗುತ್ತಿದೆ. ತನಿಖೆ ಮುಗಿದಿದೆ ಎನ್ನುವ ಹೊತ್ತಿನಲ್ಲೇ ಮತ್ತೆ ದಾಳಿ ಮಾಡಲಾಗಿದೆ.

ಕಾಂಗ್ರೆಸ್ ಸಂಸದರು,​​ ಶಾಸಕರ ಮನೆಗಳ ಮೇಲೆ ಇಡಿ ದಾಳಿ ವಿಚಾರವಾಗಿ ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರಲ್ಲಿ ಸಿಎಂ ಸಿದ್ದರಾಮಯ್ಯ ಹೇಳಿಕೆ ನೀಡಿದ್ದು, ಯಾರೇ ಆಗಲಿ ತಪ್ಪು ಮಾಡಿದ್ದರೆ ಕ್ರಮಕೈಗೊಳ್ಳಲಿ. ಯಾವುದೇ ಕಾರಣಕ್ಕೂ ತಪ್ಪುಗಳನ್ನು ನಾವು ಬೆಂಬಲಿಸುವುದಿಲ್ಲ ಎಂದು ಹೇಳಿದ್ದಾರೆ.

Advertisement
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ನದಾಫ್-ಪಿಂಜಾರ ಸಂಘ ತಾಲೂಕ ಘಟಕದ ಕಚೇರಿ ಉದ್ಘಾಟನೆ ಟ್ರಕ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ : ಅಕ್ಕ-ತಮ್ಮ ದಾರುಣ ಸಾವುತಾಲೂಕಾ ಅಧಿಕಾರಿಗಳ ಸಾಮಾನ್ಯ ಸಭೆ; ರೈತರಿಗೆ ಬೀಜ, ಗೊಬ್ಬರ ಕೊರತೆಯಾಗದಂತೆ ನೋಡಿಕೊಳ್ಳಿ: ಬಸವರಾಜ್ ಅಡವಿಮಠ್ ಸೂಚನೆಕೊಪ್ಪಳ ಕಾರ್ಯನಿರತ ಪತ್ರಕರ್ತರ ಸಂಘದ ಸಭೆನೂತನ ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಅಭಿನಂದಿಸಿದ ಲಕ್ಷ್ಮೀ  ಹೆಬ್ಬಾಳಕರ.ಸಿದ್ದರಾಮಯ್ಯ ಭೇಟಿ ಮಾಡಿ ಧನ್ಯವಾದ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಸತ್ಕರಿಸಿದ ಯುವ ಮುಖಂಡ  ರಾಹುಲ  ಜಾರಕಿಹೊಳಿ.ಸಚಿವ ಸತೀಶ ಜಾರಕಿಹೊಳಿ, ಕೆಪಿಸಿಸಿ ಅಧ್ಯಕ್ಷ ಹರಿಪ್ರಸಾದ ಬೇಟಿ ಪರಸ್ಪರ ಶುಭ ಕೋರಿಕೆಗ್ಲೋಬಲ್ ಕ್ಯಾಪೆಬಿಲಿಟಿ ಸೆಂಟರ್‌ಗಳ ಬೆಳವಣಿಗೆಗೆ ಉತ್ತೇಜನ*ಶರಣು ಕಾರ್ಯಾಲಯ ಆರಂಭಿಸುವ ಮೂಲಕ ಬಡವರ ಕಣ್ಣಿರು ಒರೆಸುವ ಕಾರ್ಯಕ್ಕೆ ಮುಂದಾಗಿರುವುದು ಶ್ಲಾಘನೀಯ : ಬಳಗಾನೂರು ಶ್ರೀಗಳು,,*