Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

14 ರಿಂದ ರಂಗಾಯಣ ದಲ್ಲಿ ಬಹುಭಾಷಾ ನಾಟಕೋತ್ಸವ



ಧಾರವಾಡ: ಫೆ. 14ರಿಂದ 19ರ ವರೆಗೆ ಆರು ದಿನ ಪಂ. ಬಸವರಾಜ ರಾಜಗುರು ಬಯಲು ರಂಗಮಂದಿರದಲ್ಲಿ ಬಹುಭಾಷಾ ನಾಟಕೋತ್ಸವ ಆಯೋಜಿಸಿದೆ ಎಂದು ರಂಗಾಯಣದ ನಿರ್ದೇಶಕ ರಾಜು ತಾಳಿಕೋಟಿ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಕನ್ನಡದ ಜತೆಗೆ ಹಿಂದಿ, ಮರಾಠಿ, ಮಲೆಯಾಳಂ ಭಾಷೆಯ ನಾಟಕಗಳ ಮೂಲಕ ಹೆಣ್ಣಿನ ಅಸ್ಮಿತೆಯ ಹೋರಾಟ, ಕಲಾವಿದನ ಅಸ್ಮಿತೆಯ ಬಿಕ್ಕಟ್ಟು, ಮನುಷ್ಯ ನಾಗುವುದೆಂದರೆ ಸಹಜ-ಸರಳ ವಾಗಿರುವುದು ಎಂಬ ಸಂದೇಶ ನೀಡುವ ನಾಟಕಗಳನ್ನು ಆಯ್ತುಗೊಳ್ಳಲಾಗಿದೆ. ನಾಟಕೋತ್ಸವಕ್ಕೆ ಖ್ಯಾತ ನಾಟಕಕಾರ, ಸಾಹಿತಿ ಡಾ. ಸಿದ್ದಲಿಂಗ ಪಟ್ಟಣಶೆಟ್ಟಿ ಫೆ. 14ರಂದು ಸಂಜೆ 6ಕ್ಕೆ ಉದ್ಘಾಟಿಸಲಿದ್ದಾರೆ ಎಂದರು.


ಜಡಭರತ ಎಂದ ಖ್ಯಾತನಾಮ ಜಿ.ಬಿ. ಜೋಶಿ ಅವರು ಕನ್ನಡ ಪ್ರಮುಖ ನಾಟಕಕಾರರಲ್ಲಿ ಒಬ್ಬರು. ಅವರ ಸತ್ತವರ ನೆರಳು ನಾಟಕವನ್ನು ಬಿ.ವಿ. ಕಾರಂತರು ಹೊರತುಪಡಿಸಿ ಮತ್ತಾರು ನಿರ್ದೇಶಿಸಲು ಸಾಧ್ಯವಾಗಿಲ್ಲ. ಈ ನಾಟಕವನ್ನು ಇದೀಗ ಕಾರಂತರ ಶಿಷ್ಯರಲ್ಲಿ ಒಬ್ಬರಾದ ತಾವು ಪ್ರಯತ್ನಿಸಿ ದ್ದೇವೆ. ರಂಗಾಯಣದ ಬಹುಭಾಷಾ ನಾಟಕೋತ್ಸವದಲ್ಲಿ ಫೆ. 17ರಂದು ಈ ನಾಟಕ ಪ್ರದರ್ಶನವಿದ್ದರೂ ಇದಕ್ಕೂ ಮುಂಚೆ ಫೆ. 8ರಂದು ಸೃಜನಾ ರಂಗ ಮಂ ದಿರದಲ್ಲಿ ಸಂಜೆ 6ಕ್ಕೆ ಆಯೋಜಿ ಸಲಾಗಿದೆ. ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಒಟ್ಟು 20 ಪ್ರದರ್ಶನ ಹಮ್ಮಿಕೊಳ್ಳಲು ಯೋಜಿಸಲಾಗಿದೆ ಎಂದು ಹುಲುಗಪ್ಪ ಕಟ್ಟಿಮನಿ ಮಾಹಿತಿ ನೀಡಿದರು.


ಮತ್ತು ಶ್ವೇತಾ ಶ್ರೀನಿವಾಸ ನಿರ್ದೇಶನದ ಇದ್ದಾಗ ನಿನ್ನು ಕದ್ದಾಗ ನಮ್ಮು ಕನ್ನಡ ನಾಟಕವನ್ನು ಬೆಂಗಳೂರಿನ ಶ್ರೀನಿವಾಸ ತಂಡವು ಪ್ರದರ್ಶಿಸಲಿದೆ. ಫೆ. 19ರಂದು ಸಿದ್ಧಲಿಂಗ ಪಟ್ಟಣಶೆಟ್ಟಿ ಅವರ ಆಶೀಫ್ ಕ್ಷತ್ರೀಯ ಮತ್ತು ಶ್ವೇತಾ ಶ್ರೀನಿವಾಸ ನಿರ್ದೇಶ ನದ ಧರ್ಮನಟಿ ಕನ್ನಡ ನಾಟಕವನ್ನು ಬೆಂಗ ಳೂರಿನ ರಂಗರಥ ಟ್ರಸ್ಟ್ ಪ್ರಸ್ತುತಪಡಿಸಲಿದೆ

ಎಂದು ತಾಳಿಕೋಟಿ ತಿಳಿಸಿದರು.


ರಂಗಾಯಣದ ಆಡಳಿತಾಧಿಕಾರಿ ಶಶಿಕಲಾ ಹುಡೇದ ಮಾತನಾಡಿ, ನಾಟಕ ಕಟ್ಟುವಲ್ಲಿ ಬಹುದೊಡ್ಡ ಶ್ರಮವಿದೆ. ಆದ್ದರಿಂದ ಪ್ರತಿ ನಾಟಕಕ್ಕೂ 100 ಪ್ರವೇಶ ದರ ಹಾಗೂ

ಆರೂ ನಾಟಕಗಳಿಗಾಗಿ * 500 ದರ ನಿಗದಿ ಪಡಿಸಲಾಗಿದೆ. ಎಲ್ಲ ನಾಟಕಗಳು ಪ್ರತಿದಿನ ಸಂಜೆ 6.30ಕ್ಕೆ ಪ್ರದರ್ಶನಗೊಳ್ಳಲಿವೆ. ನಾಟಕ ದ ಪೂರ್ವದಲ್ಲಿ ಪ್ರತಿದಿನ ಮಧುರವೇಣಿ ನೃತ್ಯಾಲಯ ವಿದ್ಯಾರ್ಥಿಗಳಿಂದ ಶಾಸ್ತ್ರೀಯ ನೃತ್ಯ ಪ್ರದರ್ಶನವಿರುತ್ತದೆ ಎಂಬ ಮಾಹಿತಿ

ನೀಡಿದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ