Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ನಗರಸಭೆ ಅಧ್ಯಕ್ಷ ಈಶ್ವರ ವಾಳೆಣ್ಣವರ ಪದಗ್ರಹಣ; ಸರ್ಕಾರ ದಿಂದ ಎಲ್ಲ ಸಹಕಾರ - ಆನಂದ ನ್ಯಾಮಗೌಡ

ಹಸಿರು ಕ್ರಾಂತಿ ವರದಿ , ಜಮಖಂಡಿ;ನಗರದ ಅಭಿವೃದ್ಧಿ ಹಾಗೂ ಇಲ್ಲಿ ಮೂಲ ಭೂತ ಸೌಕರ್ಯಗಳನ್ನು ಕಲ್ಪಿಸಿಕೊಡಲು ಸರ್ಕಾರ ದಿಂದ ಎಲ್ಲಾ ರೀತಿಯ ಸಹಕಾರ ಮಾಡುವದಾಗಿ ಮಾಜಿ ಶಾಸಕ ಆನಂದ ನ್ಯಾಮಗೌಡ ತಿಳಿಸಿದರು. ಸೋಮವಾರ ನಗರಸಭೆಯ ನೂತನ ಅಧ್ಯಕ್ಷರ ಪದಗ್ರಹಣ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ರಾಜ್ಯದ ಕಾಂಗ್ರೆಸ್‌ ಸರ್ಕಾರ ನುಡಿದಂತೆ ನಡೆಯುತ್ತಿದೆ. ನಮ್ಮದೇ ಸರ್ಕಾರ ಇರುವದ ರಿಂದ ನಗರಕ್ಕೆ ಬೇಕಾಗುವ ಮೂಲ ಭೂತ ಸೌಲಭ್ಯಗಳು ಹಾಗೂ ಅಭಿವೃದ್ಧಿ ಕಾಮಗಾರಿಗಳಿಗೆ ಬೇಕಾಗುವ ಅನುದಾನವನ್ನು ಸರ್ಕಾರ ದಿಂದ ತರಿಸಿಕೊಡುವ ಪ್ರಾಮಾಣಿಕ ಪ್ರಯತ್ನ ಮಾಡುವದಾಗಿ ತಿಳಿಸಿದರು. ನಗರದ ಅಭಿವೃದ್ಧಿ ಮೂಲಭೂತ ಸೌಲಭ್ಯಗಳನ್ನು ಒದಗಿಸಲು ಕ್ರಮ ಜರುಗಿಸಲಾಗುವದು, ನಗರಸಭೆಯ ಸಂಪನ್ಮೂಲ ಹಾಗೂ ಸರ್ಕಾರ ದಿಂದ ಬೇಕಾಗುವ ಹೆಚ್ಚುವರಿ ಅನುದಾನ ತರಿಸಿಕೊಂಡು ನಗರದ ಅಭಿವೃದ್ಧಿಗೆ ಕ್ರಮ ಜರುಗಿಸಲಾಗುವದು ಎಂದು ಹೇಳಿದರು.

ಉಳಿದಿರುವ ನಾಲ್ಕು ತಿಂಗಳ ಅವಧಿಗೆ ನೂತನ ಅಧ್ಯಕ್ಷರಾಗಿ ಹಿರಿಯ ಸದಸ್ಯ ಈಶ್ವರ ವಾಳೆಣ್ಣವರ ಪದಗ್ರಹಣ ಮಾಡಿದರು. ನಗರಕ್ಕೆ ಕುಡಿಯುವ ನೀರು ಸರಬರಾಜು, ಸ್ವಚ್ಛತೆ ಹಾಗೂ ಬೀದಿದೀಪಗಳ ಅಳವಡಿಕೆ ಸೇರಿದಂತೆ ಮೂಲಭೂತ ಸೌಲಭ್ಯಗಳನ್ನು ಒದಗಿಸಿ ಕೊಡಲು ಪ್ರಥಮ ಆಧ್ಯತೆ ನೀಡುವದಾಗಿ ತಿಳಿಸಿದರು. ತಮ್ಮನ್ನು ಅಧ್ಯಕ್ಷರಾಗಿ ಆಯ್ಕೆ ಮಾಡಿರುವ ಸರ್ವ ಸದಸ್ಯರಿಗೆ ಹಾಗೂ ಕಾಂಗ್ರೆಸ್‌ನ ಮುಖಂಡರಿಗೆ ಧನ್ಯವಾದಗಳನ್ನು ತಿಳಿಸಿದ ಅವರು ಕಡಿಮೆ ಸಮಯ ವಿದ್ದರೂ ಉತ್ತಮ ಕೆಲಸಗಳನ್ನು ಮಾಡುತ್ತೇನೆ ಸಾರ್ವಜನಿಕರಿಗೆ ನಗರಸಭೆಯಿಂದ ದೊರೆಯಬೇಕಾದ ಸೌಲಭ್ಯಗಳನ್ನು ಒದಗಿಸಿಕೊಡಲು ಪ್ರಾಮಾಣಿಕವಾಗಿ ಪ್ರಯತ್ನಿಸುತ್ತೇನೆ ಎಂದು ಹೇಳಿದರು. ಮುಖಂಡರಾದ ಬಸವರಾಜ ನ್ಯಾಮಗೌಡ, ಮಹೇಶ ಕೋಳಿ, ಬಸವರಾಜ ಸಿಂಧೂರ, ಅರ್ಜುನ ದಳವಾಯಿ, ಪೌರಾಯುಕ್ತ ಜ್ಯೋತಿಗಿರೀಶ, ನಗರಸಭೆಯ ಸದಸ್ಯರು, ಸಿಬ್ಬಂದಿಗಳು ಇದ್ದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ