Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮುಸ್ಲಿಂ ಹುಡುಗ- ಹಿಂದೂ ಹುಡುಗಿ ವಿವಾಹ ಅಕ್ರಮ!

ಭೋಪಾಲ್: ಮುಸ್ಲಿಂ ಹುಡುಗ ಮತ್ತು ಹಿಂದೂ ಹುಡುಗಿಯ ನಡುವೆ ಮತಾಂತರವಾಗದೆ ವಿವಾಹವಾಗುವುದು ಮುಸ್ಲಿಂ ವೈಯಕ್ತಿಕ ಕಾನೂನಿನ ಪ್ರಕಾರ ಕಾನೂನುಬಾಹಿರ ಎಂದು ಮಧ್ಯಪ್ರದೇಶ ಹೈಕೋರ್ಟ್ ಮಹತ್ವದ ಹೇಳಿಕೆಯಲ್ಲಿ ಸ್ಪಷ್ಟಪಡಿಸಿದೆ. ಇದರೊಂದಿಗೆ ವಿಶೇಷ ವಿವಾಹ ಕಾಯ್ದೆ-954ರ ಅಡಿಯಲ್ಲಿ ಅಂತರ್ ಧರ್ಮೀಯ ವಿವಾಹ ನೋಂದಣಿಗೆ ಪೊಲೀಸ್ ರಕ್ಷಣೆ ನೀಡಬೇಕೆಂದು ಕೋರಿದ್ದ ಅರ್ಜಿಯನ್ನು ನ್ಯಾಯಾಲಯ ತಿರಸ್ಕರಿಸಿದೆ.

ವಿಶೇಷ ವಿವಾಹ ಕಾಯ್ದೆಯಡಿ ವಿವಾಹವಾಗಿದ್ದರೂ, ಮುಸ್ಲಿಂ ಪುರುಷ ಮತ್ತು ಹಿಂದೂ ಮಹಿಳೆಯ ನಡುವಿನ ವಿವಾಹವನ್ನು ಮುಸ್ಲಿಂ ವೈಯಕ್ತಿಕ ಕಾನೂನಿನ ಅಡಿಯಲ್ಲಿ ಅಕ್ರಮ ಎಂದು ಪರಿಗಣಿಸಲಾಗುತ್ತದೆ ಎಂದು ನ್ಯಾಯಮೂರ್ತಿ ಜಿಎಸ್ ಅಹ್ಲುವಾಲಿಯಾ ಅವರ ಏಕ ಪೀಠ ಹೇಳಿದೆ. ವಾಸ್ತವವಾಗಿ, ಮುಸ್ಲಿಂ ವೈಯಕ್ತಿಕ ಕಾನೂನಿನ ಪ್ರಕಾರ, ವಿಗ್ರಹಾರಾಧಕ ಅಥವಾ ಅಗ್ನಿ ಆರಾಧಕ ಹುಡುಗಿಯೊಂದಿಗೆ ಮುಸ್ಲಿಂ ಹುಡುಗನ ವಿವಾಹವು ಮಾನ್ಯ ವಿವಾಹವಲ್ಲ ಎಂದರು.




ಮಧ್ಯಪ್ರದೇಶದ ಅನುಪ್ಪುರ್ ಜಿಲ್ಲೆಯ ಸಾರಿಕಾ ಸೇನ್ ಮತ್ತು ಸಫೀಕ್ ಖಾನ್ ದಂಪತಿಗಳು ಅರ್ಜಿ ಸಲ್ಲಿಸಿದ್ದು, ಇಬ್ಬರೂ ಮದುವೆಯಾಗಿದ್ದೇವೆ ಎಂದು ನ್ಯಾಯಾಲಯಕ್ಕೆ ತಿಳಿಸಿದರು. ಈಗ ಅವರು ತಮ್ಮ ಮದುವೆಯನ್ನು ನೋಂದಾಯಿಸಲು ಬಯಸುತ್ತಾರೆ. ಇವರ ಮದುವೆಗೆ ಮಹಿಳೆಯ ಮನೆಯವರು ವಿರೋಧ ವ್ಯಕ್ತಪಡಿಸಿದ್ದಾರೆ. ಅವರ ಸಮುದಾಯವೂ ಅವರನ್ನು ಬಹಿಷ್ಕರಿಸುವ ಮಾತನ್ನಾಡಿದೆ. ಕುಟುಂಬಸ್ಥರು ಮದುವೆಗೆ ವಿರೋಧ ವ್ಯಕ್ತಪಡಿಸಿರುವುದರಿಂದ ತಹಶೀಲ್ದಾರ ಕಚೇರಿಗೆ ತೆರಳಿ ವಿವಾಹ ನೋಂದಣಿ ಮಾಡಿಕೊಳ್ಳುವಂತೆ ಪೊಲೀಸ್ ರಕ್ಷಣೆ ನೀಡಬೇಕು ಎಂದು ಕೋರಿದ್ದರು.








ಅರ್ಜಿದಾರರ ಪರವಾಗಿ, ಮಹಿಳೆ ಅಥವಾ ಪುರುಷ ವಿವಾಹಕ್ಕಾಗಿ ಬೇರೆ ಯಾವುದೇ ಧರ್ಮವನ್ನು ಸ್ವೀಕರಿಸಲು ಬಯಸುವುದಿಲ್ಲ ಎಂದು ಹೈಕೋರ್ಟ್‌ಗೆ ತಿಳಿಸಲಾಯಿತು. ಮಹಿಳೆ ಹಿಂದೂ ಧರ್ಮವನ್ನು ಅನುಸರಿಸುವುದನ್ನು ಮುಂದುವರಿಸುತ್ತಾಳೆ. ಆದರೆ ಪುರುಷನು ಮದುವೆಯ ನಂತರವೂ ಇಸ್ಲಾಂ ಧರ್ಮವನ್ನು ಅನುಸರಿಸುತ್ತಾನೆ.



Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ