Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ನನ್ನ ಕ್ಷೇತ್ರದ ಮಕ್ಕಳು ಉನ್ನತ ಸ್ಥಾನಕ್ಕೇರುವುದನ್ನು ನೋಡುವುದೇ ನನ್ನ ಕನಸು : ಸಚಿವೆ ಲಕ್ಷ್ಮೀ ಹೆಬ್ಬಾಳಕರ್


ಕುದ್ರೆಮನಿ, ಬೆಕ್ಕಿನಕೇರಿ ಗ್ರಾಮಗಳಲ್ಲಿ ಶಾಲಾ ಕೊಠಡಿ ನಿರ್ಮಾಣಕ್ಕೆ ಭೂಮಿ ಪೂಜೆ


ಬೆಳಗಾವಿ : ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರದ ಅಭಿವೃದ್ಧಿ ಮಕ್ಕಳ ಶಿಕ್ಷಣದ ಮೇಲೆಯೇ ಅವಲಂಬಿಸಿದೆ. ನನ್ನ ಕ್ಷೇತ್ರದ ಮಕ್ಕಳು ಉತ್ತಮ ಶಿಕ್ಷಣ ಪಡೆದು ಉನ್ನತ ಸ್ಥಾನಕ್ಕೇರುವುದನ್ನು ನೋಡಬೇಕೆನ್ನುವುದೇ ನನ್ನ ದೊಡ್ಡ ಕನಸು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ.


ಕ್ಷೇತ್ರದ ಕುದ್ರೇಮನಿ ಮತ್ತು ಬೆಕ್ಕಿನಕೇರಿಯಲ್ಲಿ ಬುಧವಾರ ಶಾಲಾ ಕೊಠಡಿಗಳಿಗೆ ಭೂಮಿ ಪೂಜೆ ನೆರವೇರಿಸಿ ಅವರು ಮಾತನಾಡುತ್ತಿದ್ದರು. ನಮ್ಮ ಕ್ಷೇತ್ರದ ಭವಿಷ್ಯ ಶಿಕ್ಷಣದ ಮೇಲೆ ಅವಲಂಬಿಸಿದೆ. ಹಾಗಾಗಿ ಶಿಕ್ಷಣ ಕ್ಷೇತ್ರಕ್ಕೆ ಮತ್ತು ಆರೋಗ್ಯಕ್ಕೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ. ನನ್ನ ಕ್ಷೇತ್ರದ ಮಕ್ಕಳು ಉತ್ತಮ ಶಿಕ್ಷಣ ಪಡೆದು ರಾಜ್ಯಕ್ಕೆ, ರಾಷ್ಟ್ರಕ್ಕೆ ಹೇಸರು ತರಬೇಕು ಎಂದು ಕರೆ ನೀಡಿದರು.


ದೇಶದ ಭವಿಷ್ಯ, ರಾಜ್ಯದ ಭವಿಷ್ಯ ಗ್ರಾಮದ ಭವಿಷ್ಯ ವಿದ್ಯಾರ್ಥಿಗಳ ಮೇಲಿದೆ. ನಮ್ಮ ಮಕ್ಕಳು ಬಹಳ ದೊಡ್ಡದಾಗಿ ಬೆಳೆಯಬೇಕು. ಡಾಕ್ಟರ್ ಆಗಬೇಕು, ಎಂಜಿನಿಯರ್ ಆಗಬೇಕು, ಐಎಎಸ್ ಅಧಿಕಾರಿಯಾಗಬೇಕು ಎಂದು ತಾಯಂದಿರು ಕನಸು ಕಾಣುತ್ತಾರೆ. ನಾನು ಈ ಕ್ಷೇತ್ರದ ಮಗಳಾಗಿ ಮಂತ್ರಿಯಾಗಿ ನನ್ನನ್ನು ನೀವೆಲ್ಲ ನೋಡುತ್ತಿದ್ದೀರಿ. ಹಾಗೆಯೇ ನನ್ನ ಕ್ಷೇತ್ರದ ಪ್ರತಿ ಮಗುವು ಸಹ ದೊಡ್ಡ ಸ್ಥಾನಕ್ಕೇರುವುದನ್ನು ನಾನು ನೋಡಬೇಕು ಎಂದು ಅವರು ಹೇಳಿದರು.

ನಾನೂ ನಿಮ್ಮ ಹಾಗೇ ಸರಕಾರಿ ಶಾಲೆಯಲ್ಲಿ ಕಲಿತವಳು. ಕೆಂಪು ಬಸ್ ನಲ್ಲಿ ಓಡಾಡಿದವಳು. ಇಂದು ರಾಜ್ಯದ ಮಂತ್ರಿಯಾಗಿದ್ದೇನೆ. ಈ ಗ್ರಾಮದ ಮಕ್ಕಳು ಸಹ ಉನ್ನತ ಸ್ಥಾನಕ್ಕೆ ಏರಬೇಕು ಎನ್ನುವುದು ನನ್ನ ಕನಸು. ನಿಮ್ಮ ಹೃದಯದಲ್ಲಿ ನನಗೆ ಸ್ಥಾನ ಕೊಟ್ಟಿದ್ದೀರಿ. ಹಾಗಾಗಿ ನಾನು ಇಲ್ಲಿಯ ಮಕ್ಕಳಿಗೆಲ್ಲ ತಾಯಿ ಸಮಾನ. ನನ್ನ ಈ ಮಕ್ಕಳ ಭವಿಷ್ಯ ನನಗೆ ಮುಖ್ಯ. ಅದಕ್ಕಾಗಿ ನೀವೆಲ್ಲ ಕಷ್ಟಪಟ್ಟು ಓದಬೇಕು. ಇನ್ನು 10 -15 ವರ್ಷದ ನಿಂತರ ನನ್ನ ಮುಂದೆ ಬಂದು ನಿಂತು ನಾನು ಡಾಕ್ಟರ್ ಆಗಿದ್ದೇನೆ, ಎಂಜಿನಿಯರ್ ಆಗಿದ್ದೇನೆ ಎಂದು ಹೇಳಬೇಕು. ಈ ಗ್ರಾಮದ ಹೆಸರನ್ನು ಉಜ್ವಲಗೊಳಿಸಬೇಕು ಎಂದು ಹೆಬ್ಬಾಳಕರ್ ಹೇಳಿದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ