ಸರ್ಕಾರದ ವಿರುದ್ಧ ನನ್ನ ಯುದ್ದ ಆರಂಭ: ರಾಜ್ಯದಲ್ಲಿ ನಡೆಯುತ್ತಿರುವ ಈ ಸರ್ಕಾರದ ಅಕ್ರಮಗಳು,ದರೋಡೆ ಕೆಲಸ ನಡೆಯುತ್ತಿದೆ. ಗಜನಿ ಮಹಮ್ಮದ್ ಸೇರಿ ಹಿಂದೆ ಮೂರು ಜನ ಪ್ರಮುಖರು ಇದ್ರು. ಅಂತ ವ್ಯಕ್ತಿಗಳು ಈ ಸರ್ಕಾರದಲ್ಲಿ ಇದ್ದಾರೆ. ಈ ಸರ್ಕಾರ ಬಗ್ಗೆ ಮಾತಾಡಿದ್ರೆ ನಿರಾಸೆ ಆಗಬಹುದು. ಹನಿಟ್ರ್ಯಾಪ್, ಸುಪಾರಿ ಕೊಲೆ ಬಗ್ಗೆ ಚರ್ಚೆ ಆಗುತ್ತಿದೆ. ಎಂತಹ ಪರಿಸ್ಥಿತಿಗೆ ಬಂದಿದ್ದಾರೆ. ನಾನು ಹೇಳುವ ವಿಷಯಗಳನ್ನ ಜನರ ಮುಂದೆ ಇಡಬಹುದು. ಈ ಸರ್ಕಾರಕ್ಕೆ ನಾನು ಸವಾಲು ಹಾಕಲು ಬಂದಿದ್ದೇನೆ. ಸರ್ಕಾರದ ವಿರುದ್ಧ ನನ್ನ ಯುದ್ದ ಆರಂಭ ಮಾಡುತ್ತಿದ್ದೇನೆ ಎಂದು ಸಿದ್ದರಾಮಯ್ಯ ಸರ್ಕಾರಕ್ಕೆ ಎಚ್ಚರಿಕೆ ಸಂದೇಶ ರವಾನಿಸಿದರು.
40 ವರ್ಷಗಳ ಹಿಂದೆ ಭೂಮಿ ಖರೀದಿ ಮಾಡಿದ್ದೆ. ೪೦% ವರ್ಷಗಳಲ್ಲಿ ದ್ವೇಷದ ರಾಜಕಾರಣ ನಡೆಯುತ್ತಿದೆ ಅಧಿಕಾರಿಗಳನ್ನ ದುರುಪಯೋಗ ಮೂಲಕ ರಾಜಕಾರಣ ನಡೆಯುತ್ತಿದೆ, ಸಿದ್ದರಾಮಯ್ಯ, ಡಿಕೆಶಿ ಅವರು ಇರಬಹುದು. ಇವತ್ತಿಂದ ನನ್ನ ಸರ್ಕಾರ ವಿರುದ್ಧ ವಾರ್ ಆರಂಭ ಮಾಡುತ್ತಿದ್ದೇನೆ. ಇದನ್ನು ನಾಡಿನ ಜನತೆಗೆ ಹೇಳುತ್ತಿದ್ದೇನೆ. ನಾಲ್ಕೈದು ಜೆಸಿಬಿ , 25ರಿಂದ 30 ಅಧಿಕಾರಿಗಳು, ಪೊಲೀಸರು ಬೇರೆ. ಕುಮಾರಸ್ವಾಮಿ ಬೆಂಬಲಿಗರು ದಾಳಿ ಮಾಡುತ್ತಾರೆ ಎಂದು ಪೊಲೀಸರು ಕರೆದುಕೊಂಡು ಬಂದಿದ್ದರು. ಮಾಜಿ ಪ್ರಧಾನಿ ಮಗ ನಾಲ್ಕು ಎಕರೆ ಒತ್ತುವರಿ ಮಾಡೋಕೆ ಆಗುತ್ತೆ. ಸಮಾಜ ಪರಿವರ್ತನೆ ಅಂತೆ. 70 ಎಕರೆ ಒತ್ತುವರಿ ಅಂತೆ ನನ್ನಲ್ಲಿ40 ಎಕರೆ ಮಾತ್ರ ಇದೆ. ಅತಿಕ್ರಮಣ, ಅಕ್ರಮ ಇದ್ರೆ ದಾಖಲೆ ಬಿಡುಗಡೆ ಮಾಡಲಿ. ಈ ಸರ್ಕಾರದಲ್ಲಿರುವವರು ನಾನು ಅಪರಾಧಿ ಎಂದು ಅಪಪ್ರಚಾರ ಮಾಡುವುದಕ್ಕೆ ಹೊರಟ್ಟಿದ್ದಾರೆ. ಇದಕ್ಕೆಲ್ಲ ಕುಮಾರಸ್ವಾಮಿ ಹೆದರಲ್ಲ. ಅಧಿಕಾರ ಯಾರಿಗೂ ಶಾಶ್ವತ ಅಲ್ಲ ಎಂದು ತಿಳಿಸಿದರು.