LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News | Districts Bellary

ನಬಿ ರಸೂಲ್ ಹತ್ಯೆ ಪ್ರಕರಣ: ಸಮಗ್ರ ತನಿಖೆಗೆ ಆರಿಫಾ ಆಗ್ರಹ

ಬಳ್ಳಾರಿ:19;.. ನಗರದ ಕೌಲ್‌ಬಜಾರ್‌ನ ಬಟ್ಟಿ ಏರಿಯಾ ಪ್ರದೇಶದಲ್ಲಿ ಜುಲೈ 16ರಂದು ನಡೆದ ನಬಿ ರಸೂಲ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಸಮರ್ಪಕ ತನಿಖೆ ನಡೆಸದೆ ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಮೃತ ನಬಿ ರಸೂಲ್ ಅವರ ಸಹೋದರಿ ಆರಿಫಾ ರಸೂಲ್ ಆರೋಪಿಸಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿರುವ ಪತ್ರಿಕಾ ಭವನದಲ್ಲಿ ಶುಕ್ರವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ತಮ್ಮ ತಮ್ಮನ ಹತ್ಯೆ ಪ್ರಕರಣದಲ್ಲಿ ಆತನ ಪತ್ನಿ ಸಲ್ಮಾ ಅವರು ₹30 ಸಾವಿರ ಸುಪಾರಿ ನೀಡಿ ಕೊಲೆ ಮಾಡಿಸಿದ್ದಾರೆ ಎಂದು ಆರೋಪಿಸಿದರು. ಈ ಕುರಿತು ಪೊಲೀಸರು ಸಮಗ್ರ ತನಿಖೆ ನಡೆಸಿ ನೈಜಾಂಶವನ್ನು ಬಹಿರಂಗಪಡಿಸಬೇಕು ಎಂದು ಒತ್ತಾಯಿಸಿದರು.
ಸಲ್ಮಾ ಹಾಗೂ ಅವರ ತಂದೆ-ತಾಯಿ ನಬಿ ರಸೂಲ್ ಅವರಿಗೆ ಬೆದರಿಕೆ ಹಾಕಿದ್ದರು ಎಂದು ಆರೋಪಿಸಿದ ಆರಿಫಾ, ಹತ್ಯೆ ನಡೆದ ಕೆಲವೇ ದಿನಗಳಲ್ಲಿ ಪ್ರಕರಣಕ್ಕೆ ಸಂಬಂಧಿಸಿದ ವ್ಯಕ್ತಿಯೊಬ್ಬರು ಜೈಲಿನಿಂದ ಹೊರಬಂದು ಸಾರ್ವಜನಿಕವಾಗಿ ಓಡಾಡುತ್ತಿದ್ದಾರೆ. ಆದರೆ ತಮ್ಮ ತಮ್ಮನ ಸಾವಿಗೆ ಇನ್ನೂ ನ್ಯಾಯ ಸಿಕ್ಕಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ನಬಿ ರಸೂಲ್ ಹತ್ಯೆ ಪ್ರಕರಣದಲ್ಲಿ ಸುಮಾರು 12 ಮಂದಿ ಭಾಗಿಯಾಗಿದ್ದಾರೆ ಎಂಬ ಮಾಹಿತಿ ಹಾಗೂ ಕುಟುಂಬದ ಅನುಮಾನಗಳಿದ್ದರೂ, ಪೊಲೀಸರು ಕೇವಲ ನಾಲ್ವರನ್ನು ಮಾತ್ರ ಬಂಧಿಸಿದ್ದಾರೆ ಎಂದು ಆರಿಫಾ ಆರೋಪಿಸಿದರು. ಪ್ರಕರಣದಲ್ಲಿ ಭಾಗಿಯಾಗಿರುವ ಇತರರನ್ನೂ ವಿಚಾರಣೆಗೊಳಪಡಿಸಿ, ಅವರ ಪಾತ್ರದ ಬಗ್ಗೆ ಸಮಗ್ರ ತನಿಖೆ ನಡೆಸಬೇಕು ಎಂದು ಆಗ್ರಹಿಸಿದರು.
ಸಲ್ಮಾ ಅವರ ಮೊಬೈಲ್‌ ಫೋನ್‌ನಿಂದ ಶಾಹಿದ್ ಅವರ ಫೋನ್‌ಗೆ ನಬಿ ರಸೂಲ್ ಹತ್ಯೆಯಾಗುವವರೆಗೂ ನಿರಂತರವಾಗಿ ಕರೆಗಳು ಹಾಗೂ ಮಾತುಕತೆಗಳು ನಡೆದಿವೆ ಎಂದು ಆರಿಫಾ ಆರೋಪಿಸಿದರು. ಈ ಕರೆಗಳಿಗೆ ಸಂಬಂಧಿಸಿದ ದಾಖಲೆಗಳನ್ನು ಸಲ್ಮಾ ಅವರ ಮೊಬೈಲ್‌ನಿಂದ ಅಳಿಸಲಾಗಿದೆ ಎಂಬ ಅನುಮಾನವಿದೆ. ಸಲ್ಮಾ ಅವರ ಮೊಬೈಲ್‌ ಕರೆ ವಿವರಗಳನ್ನು ಪರಿಶೀಲಿಸುವಂತೆ ಪೊಲೀಸರಿಗೆ ಒತ್ತಾಯಿಸಿದ್ದರೂ, ಈವರೆಗೆ ಕರೆ ವಿವರಗಳನ್ನು ಸಮರ್ಪಕವಾಗಿ ಹೊರತೆಗೆದು ಪರಿಶೀಲಿಸಿಲ್ಲ ಎಂದು ಅವರು ದೂರಿದರು.
ಅಲ್ಲದೆ, ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದ ಕೆಲವರ ಬಟ್ಟೆಗಳನ್ನು ಸುಟ್ಟು ಸಾಕ್ಷ್ಯ ನಾಶಪಡಿಸಲಾಗಿದೆ ಎಂಬ ಆರೋಪವನ್ನೂ ಆರಿಫಾ ಮಾಡಿದರು. ಈ ಎಲ್ಲ ಅಂಶಗಳನ್ನು ತನಿಖೆಯ ಭಾಗವಾಗಿ ಪರಿಶೀಲಿಸಿ, ಲಭ್ಯವಿರುವ ಸಾಕ್ಷ್ಯಗಳನ್ನು ಸಂಗ್ರಹಿಸಬೇಕು ಎಂದು ಒತ್ತಾಯಿಸಿದರು.
ನಬಿ ರಸೂಲ್ ಹಾಗೂ ಸಲ್ಮಾ ಅವರ ನಡುವಿನ ಕೌಟುಂಬಿಕ ವಿಚಾರಗಳ ಜೊತೆಗೆ ಸಲ್ಮಾ ಮತ್ತು ಶಾಹಿದ್ ನಡುವಿನ ಸಂಬಂಧದ ಬಗ್ಗೆಯೂ ಅನುಮಾನಗಳಿವೆ ಎಂದು ಆರಿಫಾ ಆರೋಪಿಸಿದರು. ಕೆಲವರು ಸೇರಿ ಪೂರ್ವಯೋಜಿತವಾಗಿ ತಮ್ಮ ತಮ್ಮನನ್ನು ಹತ್ಯೆ ಮಾಡಿದ್ದಾರೆ ಎಂಬುದು ಕುಟುಂಬದ ಅನುಮಾನವಾಗಿದ್ದು, ಈ ಕುರಿತು ಪೊಲೀಸರು ನಿಷ್ಪಕ್ಷಪಾತವಾಗಿ ತನಿಖೆ ನಡೆಸಬೇಕು ಎಂದು ಆಗ್ರಹಿಸಿದರು.
ಹತ್ಯೆ ಪ್ರಕರಣದಲ್ಲಿ ಭಾಗಿಯಾಗಿರುವ ಎಲ್ಲ ಆರೋಪಿಗಳನ್ನು ಪತ್ತೆಹಚ್ಚಿ ಬಂಧಿಸಬೇಕು. ಕರೆ ದಾಖಲೆಗಳು ಸೇರಿದಂತೆ ಲಭ್ಯವಿರುವ ಎಲ್ಲ ಸಾಕ್ಷ್ಯಗಳನ್ನು ಪರಿಶೀಲಿಸಿ, ಪ್ರಕರಣದ ತನಿಖೆಯನ್ನು ಸಮಗ್ರವಾಗಿ ನಡೆಸುವ ಮೂಲಕ ತಮ್ಮ ಕುಟುಂಬಕ್ಕೆ ನ್ಯಾಯ ಒದಗಿಸಬೇಕು ಎಂದು ಆರಿಫಾ ರಸೂಲ್ ಒತ್ತಾಯಿಸಿದರು.
ಸುದ್ದಿಗೋಷ್ಠಿಯಲ್ಲಿ ಫಿರ್ದೋಸ್, ಮಾಸನ್, ಬಷೀರ್ ಅಹ್ಮದ್, ಶಿವಕುಮಾರ್, ಮೂಗೇಶ್, ಮಲ್ಲಿಕಾರ್ಜುನ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದಲಿತರ ಮೇಲಿನ ದೌರ್ಜನ್ಯ, ಹಲ್ಲೆ, ಕೊಲೆ, ಸಾಮಾಜಿಕ ಬಹಿಷ್ಕಾರಕ್ಕೆ ಕಡಿವಾಣ ಹಾಕಿ : ಶ್ರೀನಿವಾಸ್ ಕರ್ಚೇಡ್ ನಬಿ ರಸೂಲ್ ಹತ್ಯೆ ಪ್ರಕರಣ: ಸಮಗ್ರ ತನಿಖೆಗೆ ಆರಿಫಾ ಆಗ್ರಹರಂಜಿಸಿದ ಯಾರಿಗೆ ಬೇಕು ನಿನ್ನ ಕವಿತೆ ನಾಟಕಡಾ.ಬಿ.ಆರ್.ಅಂಬೇಡಕರ್ ಸಂಘಕ್ಕೆ 10 ಲಕ್ಷ ರೂ.ಗಳ ದೇಣಿಗೆ ನೀಡಿದ ಶಾಸಕ ನಾರಾ ಭರತ್ ರೆಡ್ಡಿವಿಶೇಷ ನೋಂದಣಿ ಅಭಿಯಾನ ಪರಿಶೀಲಿಸಿದ ವೀಕ್ಷಕ ಕ್ಯಾಪ್ಟನ್ ಕೆ.ರಾಜೇಂದ್ರಕಾಗವಾಡ ತಾಲೂಕನ್ನು ಬರಪೀಡಿತ ಎಂದು ಘೋಷಿಸಲು ಸೆ.28ರಂದು ಬಂದ್: ಜ್ಯೋತಿಕುಮಾರ ಪಾಟೀಲದ್ರಾಕ್ಷಿ ಬೆಳೆಗಾರರಿಗೆ  ೭೯.೯೭ ಕೋಟಿ ವಿಮಾ ಪರಿಹಾರ, ೮ ಸಾವಿರ ರೈತರಿಗೆ ಅನುಕೂಲ,ಸಚಿವ ಲಕ್ಷ್ಮಣ ಸವದಿ ಪ್ರಯತ್ನಕ್ಕೆ ರೈತ ಮುಖಂಡ ಶೇಖರ ನೇಮಗೌಡ ಅಭಿನಂದನೆಪ್ರಜಾಸೇವಾ ಆಂದೋಲನ ಮೂರು ತಿಂಗಳಲ್ಲಿ ಎಲ್ಲ ತಾಲೂಕುಗಳಲ್ಲೂ ಆಯೋಜನೆ: ಸಚಿವ ಸತೀಶ್ ಜಾರಕಿಹೊಳಿಕಾಗವಾಡ ತಾಲೂಕು ಬರಪೀಡಿತ ಎಂದು ಘೋಷಿಸಿ:ಜ್ಯೋತಿಕುಮಾರ ಪಾಟೀಲ್ ಆಗ್ರಹ ಘೋಷಿಸದಿದ್ದರೆ ಸೆ.28 ಕ್ಕೆ ಪ್ರತಿಭಟನೆಗೆ ಕರೆಸಹಕಾರ ಸಚಿವ ಲಕ್ಷ್ಮಣ ಸವದಿಯವರ ಮಾರ್ಗದರ್ಶನದಲ್ಲಿ ಕುಡಿಯುವ ನೀರಿಗಾಗಿ ವಿಶೇಷ ಯೋಜನೆ.ಅಧ್ಯಕ್ಷ ದತ್ತಾ ವಾಸ್ಟರ