LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ನಾಗಮೋಹನ್ ದಾಸ್ ಆಯೋಗ ದಿಢೀರ್ ರದ್ದು!

ಬೆಂಗಳೂರು, ಸೆಪ್ಟೆಂಬರ್ 25: ಕರ್ನಾಟಕದಲ್ಲಿ 2019 ರಿಂದ 2023ರವರೆಗೆ ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದಿದೆ ಎನ್ನಲಾಗುವ ಹಗರಣಗಳ, ಅದರಲ್ಲೂ ಕೋವಿಡ್ ಸಾಂಕ್ರಾಮಿಕದ ವೇಳೆ ನಡೆದಿತ್ತು ಎನ್ನಲಾದ ಬಹುಕೋಟಿ ರೂಪಾಯಿ ಹಗರಣದ ತನಿಖೆಗೆಂದು ಕಾಂಗ್ರೆಸ್ ಸರ್ಕಾರ ಆಯೋಗ ರಚನೆ ಮಾಡಿತ್ತು. ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದಿದೆ ಎನ್ನಲಾಗಿರುವ ಹಗರಣಗಳ ಬಗ್ಗೆ ತನಿಖೆ ನಡೆಸಲು ಕಾಂಗ್ರೆಸ್ ಅಧಿಕಾರಕ್ಕೆ ಬಂದಮೇಲೆ ನ್ಯಾಯಮೂರ್ತಿ ನಾಗಮೋಹನ್ ದಾಸ್ ನೇತೃತ್ವದಲ್ಲಿ ಆಯೋಗ ರಚನೆಯಾಗಿತ್ತು. ಇದೀಗ ಆ ಆಯೋಗದ ಅವಧಿ ಮುಗಿಯುವುದಕ್ಕೂ ಮುನ್ನವೇ ವಿಸರ್ಜನೆ ಮಾಡಲಾಗಿದೆ. ಸೆಪ್ಟೆಂಬರ್ 30 ರವರೆಗೆ ಅಧಿಕಾರ ಅವಧಿ ವಿಸ್ತರಿಸುವಂತೆ ಆಯೋಗ ಮನವಿ ಮಾಡಿತ್ತು. ಅದನ್ನು ಸರ್ಕಾರ ಪರಿಗಣಿಸಿಲ್ಲ ಎನ್ನಲಾಗಿದೆ.





ಬೆಂಗಳೂರಿನಲ್ಲಿ ಕಾಮಗಾರಿಗಳಲ್ಲಿ ಅಕ್ರಮದ ಬಗ್ಗೆ ತನಿಖೆ ನಡೆಸಿದ್ದ ಆಯೋಗ, ಆಗಸ್ಟ್ 30 ರಂದು ಸರ್ಕಾರಕ್ಕೆ 8,900 ಪುಟಗಳ ಬೃಹತ್ ತನಿಖಾ ವರದಿಯನ್ನು ಸಲ್ಲಿಸಿತ್ತು. 761 ಕಾಮಗಾರಿಗಳನ್ನು ಪರಿಶೀಲಿಸಿ ಹಲವು ನ್ಯೂನತೆಗಳನ್ನು ಪತ್ತೆಹಚ್ಚಿ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮಕ್ಕೆ ಶಿಫಾರಸು ಮಾಡಿತ್ತು. ಏಕ ಸದಸ್ಯ ಆಯೋಗದ ಕೆಲಸ ಮುಗಿದಿದ್ದರೂ ಕೆಲವು ಆಡಳಿತಾತ್ಮಕ ಕಾರ್ಯ ಹಾಗೂ ದಾಖಲೆ ನಿರ್ವಾಹಣೆಗಾಗಿ ಸೆ.30 ರ ವರೆಗೆ ಅವಧಿ ವಿಸ್ತರಿಸುವಂತೆ ಸರ್ಕಾರಕ್ಕೆ ಮನವಿ ಮಾಡಿತ್ತು ಎನ್ನಲಾಗಿದೆ. ಆದರೆ, ಸರ್ಕಾರ ಆಯೋಗಕ್ಕೆ ನೀಡಿದ್ದ ಎಲ್ಲಾ ಸವಲತ್ತುಗಳನ್ನು ಏಕಾಏಕಿ ವಾಪಸ್ ಪಡೆದಿದೆ ಎನ್ನಲಾಗುತ್ತಿದೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸ್ವಚ್ಛತೆಯೇ ಸೇವೆ-2026' ಅಭಿಯಾನ ಆರಂಭ: ಸಾರ್ವಜನಿಕರ ಸಹಭಾಗಿತ್ವಕ್ಕೆ ಕರೆಸ್ವಚ್ಛತೆಯೇ ಸೇವೆ-2026' ಅಭಿಯಾನ ಆರಂಭ: ಸಾರ್ವಜನಿಕರ ಸಹಭಾಗಿತ್ವಕ್ಕೆ ಕರೆವಿ.ಶ್ರೀ.ಕೃ. ವಿಶ್ವವಿದ್ಯಾಲಯದಲ್ಲಿ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ: ಅಭಿವೃದ್ಧಿಗೆ ಎಲ್ಲರ ಸಹಭಾಗಿತ್ವ ಅಗತ್ಯಕರಕುಶಲತೆಯ ಜೊತೆ ಶಿಕ್ಷಣವೂ ಅನಿವಾರ್ಯ: ಲಿಡ್ಕರ್ ಅಧ್ಯಕ್ಷ ಮುಂಡರಗಿ ನಾಗರಾಜತಾಳಿಕೋಟೆ ತಾಲೂಕು ಕೂಡ ಶೀಘ್ರ ಬರಪೀಡಿತ ಪಟ್ಟಿಗೆ : ಶಾಸಕ ನಾಡಗೌಡತೇರದಾಳ ಹಾಗೂ ರಬಕವಿ /ಬನಹಟ್ಟಿ ತಾಲೂಕುಗಳು ಬರಗಾಲ ಪಟ್ಟಿಗೆ, ಸಿಎಂ ಡಿಕೆ ಶಿವಕುಮಾರ್ ಅವರಿಗೆ ಅಭಿನಂದನೆ.ರೋಗಿಗಳಿಗೆ ಹಾಲುಹಣ್ಣು ವಿತರಿಸಿ ಬಿಜೆಪಿ ಕಾರ್ಯಕರ್ತರಿಂದ ’ಸೇವಾ ಸಂಕಲ್ಪಹಕ್ಕುಪತ್ರ ಪಡೆದ ಫಲಾನುಭವಿಗಳಿಗೆ ಫಾರಂ-2 ಇ-ಖಾತಾ ಮಾಡಿಕೊಡಲು ಆಗ್ರಹಸೆ.20ರಂದು ಬಳ್ಳಾರಿಯಲ್ಲಿ ಹಿಂದೂ ಮಹಾ ಗಣಪತಿ ಭವ್ಯ ಶೋಭಾಯಾತ್ರೆಜನರ ಮನೆ ಬಾಗಿಲಿಗೆ ಸರ್ಕಾರದ ಸೇವೆ ಸಿಎಂ ಕನಸು; ಜನರಿಗೆ ತೊಂದರೆ ನೀಡಿದರೆ ಕ್ರಮ: ನಾರಾ ಭರತ್ ರೆಡ್ಡಿ