LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಒಳಮೀಸಲಾತಿ ಕುರಿತ ನಾಗಮೋಹನ್ ದಾಸ್ ಒಂದು ವಾರದಲ್ಲಿ ಮಧ್ಯಂತರ ವರದಿ: ಹೆಚ್‌ಸಿ ಮಹದೇವಪ್ಪ

ಬೆಂಗಳೂರು: ಒಳಮೀಸಲಾತಿ ಸಂಬಂಧ ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್ ಒಂದು ವಾರದಲ್ಲಿ ಮಧ್ಯಂತರ ವರದಿ ನೀಡಲಿದ್ದಾರೆ. ಬಳಿಕ ಸಿಎಂ ಜೊತೆ ಚರ್ಚಿಸಿ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಸಚಿವ ಹೆಚ್.ಸಿ.ಮಹದೇವಪ್ಪ ತಿಳಿಸಿದರು.


ಪರಿಶಿಷ್ಟ ಜಾತಿಗಳಲ್ಲಿ ಒಳಮೀಸಲಾತಿ ಕಲ್ಪಿಸುವ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಕಾವೇರಿ ನಿವಾಸದಲ್ಲಿ ಸಭೆ ನಡೆಸಲಾಯಿತು. ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್, ಸಚಿವರಾದ ಜಿ.ಪರಮೇಶ್ವರ್, ಹೆಚ್.ಸಿ. ಮಹದೇವಪ್ಪ, ಕೆ.ಹೆಚ್.ಮುನಿಯಪ್ಪ, ಆರ್.ಬಿ.ತಿಮ್ಮಾಪುರ್, ಪ್ರಿಯಾಂಕ್ ಖರ್ಗೆ, ಶಿವರಾಜ್ ತಂಗಡಗಿ, ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ.ಅತೀಕ್ ಸೇರಿ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.


ಬಳಿಕ ಜಂಟಿ ಮಾಧ್ಯಮಗೋಷ್ಟಿ ನಡೆಸಿದ ಸಚಿವರಾದ ಹೆಚ್.ಸಿ.ಮಹದೇವಪ್ಪ, ಡಾ.ಜಿ.ಪರಮೇಶ್ವರ್, ಕೆ.ಹೆಚ್‌. ಮುನಿಯಪ್ಪ, ಆರ್.ಬಿ.ತಿಮ್ಮಾಪುರ ಹಾಗೂ ಶಿವರಾಜ್ ತಂಗಡಗಿ, ಒಳಮೀಸಲಾತಿ ಸಂಬಂಧ ಆಗಿರುವ ಪ್ರಗತಿ ಬಗ್ಗೆ ನಾಗಮೋಹನ್ ದಾಸ್ ಮಾಹಿತಿ ನೀಡಿದ್ದಾರೆ. ಒಳಮೀಸಲಾತಿ ವರದಿ ಬೇಗ ನೀಡುವಂತೆ ಸಿಎಂ ಆಯೋಗಕ್ಕೆ ಸೂಚನೆ ನೀಡಿದ್ದಾರೆ. ಒಳಮೀಸಲಾತಿ ಜಾರಿಗೆ ಸರ್ಕಾರಕ್ಕೆ ಬದ್ಧತೆ ಇದೆ ಎಂದು ತಿಳಿಸಿದರು.

ಸಿಎಂ ಜೊತೆ ಚರ್ಚಿಸಿ ತೀರ್ಮಾನ: ದತ್ತಾಂಶ ಆಧಾರದಲ್ಲಿ ಒಳಮೀಸಲಾತಿ ವರದಿ ನೀಡಲು ಸೂಚಿಸಲಾಗಿದೆ. ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್ ವಾರದೊಳಗೆ ಮಧ್ಯಂತರ ವರದಿ ನೀಡಲಿದ್ದಾರೆ. ಮಧ್ಯಂತರ ವರದಿ ಸಲ್ಲಿಕೆಯಾದ ಬಳಿಕ ಒಳ ಮೀಸಲಾತಿಯನ್ನು ಸುಪ್ರೀಂಕೋರ್ಟ್ ತೀರ್ಪಿನ ಅಂಶಗಳ ಆಧಾರದಲ್ಲಿ ಜಾರಿ ಮಾಡಲು ಕ್ರಮ ವಹಿಸಲಾಗುವುದು. ಒಳಮೀಸಲಾತಿ ಜಾರಿ ಮಾಡಬೇಕು ಎಂಬುದು ನಮ್ಮ ಬದ್ಧತೆ. ಒಳಮೀಸಲಾತಿಯನ್ನು ನ್ಯಾಯಾಲಯಗಳಲ್ಲೂ ಎತ್ತಿ ಹಿಡಿಯುವಂತಿರಬೇಕು. ಮಧ್ಯಂತರ ವರದಿ ಮೇಲೆ ಚರ್ಚೆ ಮಾಡಿದ ಬಳಿಕ ಸಿಎಂ ಜೊತೆ ಚರ್ಚಿಸಿ ಜಾರಿ ಸಂಬಂಧ ತೀರ್ಮಾನ ಕೈಗೊಳ್ಳಲಾಗುವುದು ಎಂದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸ್ವಚ್ಛತೆಯೇ ಸೇವೆ-2026' ಅಭಿಯಾನ ಆರಂಭ: ಸಾರ್ವಜನಿಕರ ಸಹಭಾಗಿತ್ವಕ್ಕೆ ಕರೆಸ್ವಚ್ಛತೆಯೇ ಸೇವೆ-2026' ಅಭಿಯಾನ ಆರಂಭ: ಸಾರ್ವಜನಿಕರ ಸಹಭಾಗಿತ್ವಕ್ಕೆ ಕರೆವಿ.ಶ್ರೀ.ಕೃ. ವಿಶ್ವವಿದ್ಯಾಲಯದಲ್ಲಿ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ: ಅಭಿವೃದ್ಧಿಗೆ ಎಲ್ಲರ ಸಹಭಾಗಿತ್ವ ಅಗತ್ಯಕರಕುಶಲತೆಯ ಜೊತೆ ಶಿಕ್ಷಣವೂ ಅನಿವಾರ್ಯ: ಲಿಡ್ಕರ್ ಅಧ್ಯಕ್ಷ ಮುಂಡರಗಿ ನಾಗರಾಜತಾಳಿಕೋಟೆ ತಾಲೂಕು ಕೂಡ ಶೀಘ್ರ ಬರಪೀಡಿತ ಪಟ್ಟಿಗೆ : ಶಾಸಕ ನಾಡಗೌಡತೇರದಾಳ ಹಾಗೂ ರಬಕವಿ /ಬನಹಟ್ಟಿ ತಾಲೂಕುಗಳು ಬರಗಾಲ ಪಟ್ಟಿಗೆ, ಸಿಎಂ ಡಿಕೆ ಶಿವಕುಮಾರ್ ಅವರಿಗೆ ಅಭಿನಂದನೆ.ರೋಗಿಗಳಿಗೆ ಹಾಲುಹಣ್ಣು ವಿತರಿಸಿ ಬಿಜೆಪಿ ಕಾರ್ಯಕರ್ತರಿಂದ ’ಸೇವಾ ಸಂಕಲ್ಪಹಕ್ಕುಪತ್ರ ಪಡೆದ ಫಲಾನುಭವಿಗಳಿಗೆ ಫಾರಂ-2 ಇ-ಖಾತಾ ಮಾಡಿಕೊಡಲು ಆಗ್ರಹಸೆ.20ರಂದು ಬಳ್ಳಾರಿಯಲ್ಲಿ ಹಿಂದೂ ಮಹಾ ಗಣಪತಿ ಭವ್ಯ ಶೋಭಾಯಾತ್ರೆಜನರ ಮನೆ ಬಾಗಿಲಿಗೆ ಸರ್ಕಾರದ ಸೇವೆ ಸಿಎಂ ಕನಸು; ಜನರಿಗೆ ತೊಂದರೆ ನೀಡಿದರೆ ಕ್ರಮ: ನಾರಾ ಭರತ್ ರೆಡ್ಡಿ