Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಒಳಮೀಸಲಾತಿ ಕುರಿತ ನಾಗಮೋಹನ್ ದಾಸ್ ಒಂದು ವಾರದಲ್ಲಿ ಮಧ್ಯಂತರ ವರದಿ: ಹೆಚ್‌ಸಿ ಮಹದೇವಪ್ಪ

ಬೆಂಗಳೂರು: ಒಳಮೀಸಲಾತಿ ಸಂಬಂಧ ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್ ಒಂದು ವಾರದಲ್ಲಿ ಮಧ್ಯಂತರ ವರದಿ ನೀಡಲಿದ್ದಾರೆ. ಬಳಿಕ ಸಿಎಂ ಜೊತೆ ಚರ್ಚಿಸಿ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಸಚಿವ ಹೆಚ್.ಸಿ.ಮಹದೇವಪ್ಪ ತಿಳಿಸಿದರು.


ಪರಿಶಿಷ್ಟ ಜಾತಿಗಳಲ್ಲಿ ಒಳಮೀಸಲಾತಿ ಕಲ್ಪಿಸುವ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಕಾವೇರಿ ನಿವಾಸದಲ್ಲಿ ಸಭೆ ನಡೆಸಲಾಯಿತು. ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್, ಸಚಿವರಾದ ಜಿ.ಪರಮೇಶ್ವರ್, ಹೆಚ್.ಸಿ. ಮಹದೇವಪ್ಪ, ಕೆ.ಹೆಚ್.ಮುನಿಯಪ್ಪ, ಆರ್.ಬಿ.ತಿಮ್ಮಾಪುರ್, ಪ್ರಿಯಾಂಕ್ ಖರ್ಗೆ, ಶಿವರಾಜ್ ತಂಗಡಗಿ, ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ.ಅತೀಕ್ ಸೇರಿ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.


ಬಳಿಕ ಜಂಟಿ ಮಾಧ್ಯಮಗೋಷ್ಟಿ ನಡೆಸಿದ ಸಚಿವರಾದ ಹೆಚ್.ಸಿ.ಮಹದೇವಪ್ಪ, ಡಾ.ಜಿ.ಪರಮೇಶ್ವರ್, ಕೆ.ಹೆಚ್‌. ಮುನಿಯಪ್ಪ, ಆರ್.ಬಿ.ತಿಮ್ಮಾಪುರ ಹಾಗೂ ಶಿವರಾಜ್ ತಂಗಡಗಿ, ಒಳಮೀಸಲಾತಿ ಸಂಬಂಧ ಆಗಿರುವ ಪ್ರಗತಿ ಬಗ್ಗೆ ನಾಗಮೋಹನ್ ದಾಸ್ ಮಾಹಿತಿ ನೀಡಿದ್ದಾರೆ. ಒಳಮೀಸಲಾತಿ ವರದಿ ಬೇಗ ನೀಡುವಂತೆ ಸಿಎಂ ಆಯೋಗಕ್ಕೆ ಸೂಚನೆ ನೀಡಿದ್ದಾರೆ. ಒಳಮೀಸಲಾತಿ ಜಾರಿಗೆ ಸರ್ಕಾರಕ್ಕೆ ಬದ್ಧತೆ ಇದೆ ಎಂದು ತಿಳಿಸಿದರು.

ಸಿಎಂ ಜೊತೆ ಚರ್ಚಿಸಿ ತೀರ್ಮಾನ: ದತ್ತಾಂಶ ಆಧಾರದಲ್ಲಿ ಒಳಮೀಸಲಾತಿ ವರದಿ ನೀಡಲು ಸೂಚಿಸಲಾಗಿದೆ. ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್ ವಾರದೊಳಗೆ ಮಧ್ಯಂತರ ವರದಿ ನೀಡಲಿದ್ದಾರೆ. ಮಧ್ಯಂತರ ವರದಿ ಸಲ್ಲಿಕೆಯಾದ ಬಳಿಕ ಒಳ ಮೀಸಲಾತಿಯನ್ನು ಸುಪ್ರೀಂಕೋರ್ಟ್ ತೀರ್ಪಿನ ಅಂಶಗಳ ಆಧಾರದಲ್ಲಿ ಜಾರಿ ಮಾಡಲು ಕ್ರಮ ವಹಿಸಲಾಗುವುದು. ಒಳಮೀಸಲಾತಿ ಜಾರಿ ಮಾಡಬೇಕು ಎಂಬುದು ನಮ್ಮ ಬದ್ಧತೆ. ಒಳಮೀಸಲಾತಿಯನ್ನು ನ್ಯಾಯಾಲಯಗಳಲ್ಲೂ ಎತ್ತಿ ಹಿಡಿಯುವಂತಿರಬೇಕು. ಮಧ್ಯಂತರ ವರದಿ ಮೇಲೆ ಚರ್ಚೆ ಮಾಡಿದ ಬಳಿಕ ಸಿಎಂ ಜೊತೆ ಚರ್ಚಿಸಿ ಜಾರಿ ಸಂಬಂಧ ತೀರ್ಮಾನ ಕೈಗೊಳ್ಳಲಾಗುವುದು ಎಂದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ