LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
National News

ಬೆಳಗಾವಿಗೆ ನಮೋ ಎಂಟ್ರಿ: ಇಂದು ನಾಲ್ಕು ಕಡೆ ಬಿಜೆಪಿ ಸಮಾವೇಶ

ಬೆಳಗಾವಿ, ಏ.28: ಲೋಕಸಭೆ ಕ್ಷೇತ್ರದಲ್ಲಿ ಚುನಾವಣಾಕಾವು ಮತ್ತಷ್ಟು ಹೆಚ್ಚಾಗಿದ್ದು, ನಿನ್ನೆಯಷ್ಟೇ ರಾಜ್ಯದಲ್ಲಿ ಮೊದಲ ಹಂತದ ಚುನಾವಣೆ ನಡೆದಿದೆ.

ಇನ್ನು ಮೇ 7ರಂದು ರಾಜ್ಯದಲ್ಲಿ ಎರಡನೇ ಹಂತದ ಚುನಾವಣೆ ಹಿನ್ನೆಲೆ ಇಂದು(ಏ.27) ರಾತ್ರಿ ಪ್ರಧಾನಿ ನರೇಂದ್ರ ಮೋದಿ ಅವರು ಬೆಳಗಾವಿಗೆ ಆಗಮಿಸಿದ್ದಾರೆ. ಈ ವೇಳೆ ಜಗದೀಶ್​ ಶೆಟ್ಟರ್​ , ಬಿಜೆಪಿ ಕಾರ್ಯಕರ್ತರು ಮೋದಿ ಸ್ವಾಗತಿಸಿದರು. ಇಂದು ರಾತ್ರಿ ಕಾಕತಿ ಬಳಿಯ ಹೋಟೆಲ್​ನಲ್ಲಿ ವಾಸ್ತವ್ಯ ಹೂಡಲಿದ್ದಾರೆ.

ಹೌದು, ನಾಳೆ ಒಂದೇ ದಿನ ಪ್ರಧಾನಿ ಅವರು ಬೆಳಗಾವಿ, ದಾವಣಗೆರೆ, ಹೊಸಪೇಟೆ, ಶಿರಸಿ ಸೇರಿದಂತೆ ನಾಲ್ಕು ಕಡೆ ಸಮಾವೇಶದಲ್ಲಿ ಮೋದಿ ಭಾಗಿಯಾಗಲಿದ್ದಾರೆ. ನಾಳೆ ಬೆಳಗ್ಗೆ 10.55ಕ್ಕೆ ಹೋಟೆಲ್​ನಿಂದ ಹೊರಡುವ ಪ್ರಧಾನಿ ಮೋದಿ, ಬೆಳಗ್ಗೆ 11 ಗಂಟೆಗೆ ಮಾಲಿನಿ ಸಿಟಿ ಮೈದಾನದ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ. ಬೆಳಗ್ಗೆ 11.55ಕ್ಕೆ ಬೆಳಗಾವಿ ಹೆಲಿಪ್ಯಾಡ್​ನಿಂದ ಶಿರಸಿಗೆ ಪ್ರಯಾಣಿಸಿ 12.55ಕ್ಕೆ ಉತ್ತರ ಕನ್ನಡ ಜಿಲ್ಲೆಯ ಶಿರಸಿಗೆ ಆಗಮಿಸಲಿದ್ದಾರೆ.

ಬಳಿಕ ಅಲ್ಲಿಂದ ಮಧ್ಯಾಹ್ನ 2 ಗಂಟೆಗೆ ಶಿರಸಿ ಹೆಲಿಪ್ಯಾಡ್​ನಿಂದ 2.50ಕ್ಕೆ ದಾವಣಗೆರೆಗೆ ಆಗಮಿಸಲಿದ್ದು, ದಾವಣಗೆರೆ ಸಮಾವೇಶದಲ್ಲಿ ಭಾಗವಹಿಸಿ, ನಂತರ ಸಂಜೆ 4.50ಕ್ಕೆ ಹೊಸಪೇಟೆ ತಲುಪಲಿದ್ದಾರೆ. ಅಲ್ಲಿ 5 ಗಂಟೆಗೆ ಹೊಸಪೇಟೆ ಸಮಾವೇಶದಲ್ಲಿ ಭಾಗವಹಿಸಿ ರಾತ್ರಿ ಹೊಸಪೇಟೆಯಲ್ಲಿ ಮೋದಿ ವಾಸ್ತವ್ಯ ಮಾಡಲಿದ್ದಾರೆ.

ಏಪ್ರಿಲ್ 29ರ ಬೆಳಗ್ಗೆ 11 ಗಂಟೆಗೆ ಹೊಸಪೇಟೆಯಿಂದ ಮಧ್ಯಾಹ್ನ 12.05ಕ್ಕೆ ಬಾಗಲಕೋಟೆಗೆ ತಲುಪಿ ಮಧ್ಯಾಹ್ನ 12.15ಕ್ಕೆ ಬಾಗಲಕೋಟೆಯ ತೋಟಗಾರಿಕೆ ವಿವಿ ಮೈದಾನದಲ್ಲಿ ನಡೆಯುವ ಸಾರ್ವಜನಿಕ ಸಮಾವೇಶದಲ್ಲಿ ಭಾಗವಹಿಸಿ, ಬಿಜೆಪಿ ಅಭ್ಯರ್ಥಿ ಪರ ಪ್ರಚಾರ ಮಾಡಲಿದ್ದಾರೆ. ಮಧ್ಯಾಹ್ನ 1.05ಕ್ಕೆ ಬಾಗಲಕೋಟೆಯಿಂದ ಸೊಲ್ಲಾಪುರಕ್ಕೆ ಮೋದಿ ಪ್ರಯಾಣಿಸಲಿದ್ದಾರೆ.

 

 

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್