Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಅತಿ ಶೀಘ್ರ ಫಲಾನುಭವಿಗಳಿಗೆ 1000 ಮನೆಗಳ ಹಸ್ತಾಂತರ: ಶಾಸಕ ನಾರಾ ಭರತ್ ರೆಡ್ಡಿ 


ಬಳ್ಳಾರಿ, ಸೆ.11: ಬಳ್ಳಾರಿ ನಗರದ ಮುಂಡ್ರಿಗಿ ಬಳಿಯ ಬಹು ನಿರೀಕ್ಷಿತ ರಾಜೀವ್ ಗಾಂಧಿ ಟೌನ್'ಶಿಪ್ ಯೋಜನೆ ಅಡಿ ಈಗಾಗಲೇ ಪೂರ್ಣಗೊಳ್ಳಲಿರುವ 1000 ಮನೆಗಳನ್ನು ಫಲಾನುಭವಿಗಳಿಗೆ ಶೀಘ್ರದಲ್ಲೇ ವಿತರಣೆ ಮಾಡಲಾಗುವುದು ಎಂದು ಶಾಸಕ ನಾರಾ ಭರತ್ ತಿಳಿಸಿದ್ದಾರೆ.

ಗುರುವಾರ ಈ ಕುರಿತು ಅವರು ಪತ್ರಿಕಾ ಪ್ರಕಟಣೆ ನೀಡಿದ್ದಾರೆ.

ಗುರುವಾರ ಬೆಳಿಗ್ಗೆ ಬಳ್ಳಾರಿ ಹೊರ ವಲಯದ ಮುಂಡ್ರಿಗಿ ಗ್ರಾಮದ ಬಳಿಯ ವಸತಿ ಸಮುಚ್ಛಯಕ್ಕೆ ಭೇಟಿ ನೀಡಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ತದನಂತರ ಪೂರ್ಣಗೊಂಡಿರುವ ಮನೆಗಳ ವ್ಯವಸ್ಥೆಯನ್ನು ಪರಿಶೀಲಿಸಿದರು.

ಈ ಸಂದರ್ಭ ಮಹಾನಗರ ಪಾಲಿಕೆಯ ಆಯುಕ್ತ ಮಂಜುನಾಥ ಸೇರಿದಂತೆ ಹಲವು ಅಧಿಕಾರಿಗಳು ಹಾಜರಿದ್ದು ಮನೆಗಳ ನಿರ್ಮಾಣ, ಹಂಚಿಕೆ ಕುರಿತು ಶಾಸಕರಿಗೆ ಮಾಹಿತಿ ನೀಡಿದರು.

ಮನೆ ಪಡೆಯಲು ಈಗಾಗಲೇ ಹಲವು ಫಲಾನುಭವಿಗಳು ಸರ್ಕಾರ ನಿಗದಿ ಮಾಡಿರುವ ಹಣವನ್ನು ಸಂದಾಯ ಮಾಡಿದ್ದಾರೆ, ಆದರೆ ಮನೆಗಳನ್ನು ಉಚಿತವಾಗಿ ನೀಡಲು ಈಗಾಗಲೇ ವಸತಿ ಸಚಿವ ಜಮೀರ್ ಅಹ್ಮದ್ ಅವರೊಂದಿಗೆ ಚರ್ಚಿಸಲಾಗಿದ್ದು, ಸರ್ಕಾರವೇ ಫಲಾನುಭವಿಗಳ ಹಣವನ್ನು ಕಟ್ಟಿ, ಶೇ.100ರಷ್ಟು ಉಚಿತವಾಗಿ ಮನೆ ಹಂಚುವ ಉದ್ಧೇಶ ಇದೆ ಎಂದರು.


ಅಪೂರ್ಣ ಇರುವ ಮನೆಗಳ ನಿರ್ಮಾಣ ಪೂರ್ಣಗೊಳಿಸಿ ಪ್ರಾಥಮಿಕ ಹಂತದಲ್ಲಿ 1000 ಮನೆಗಳನ್ನು ಏಕ ಕಾಲಕ್ಕೆ ಹಂಚಿಕೆ ಮಾಡುವ ಯೋಚನೆ ಇದೆ ಎಂದು ತಿಳಿಸಿದ ಶಾಸಕ ನಾರಾ ಭರತ್ ರೆಡ್ಡಿ, ಸಿಎಂ ಸಿದ್ದರಾಮಯ್ಯ- ಡಿ.ಕೆ.ಶಿವಕುಮಾರ ಅವರ ಸಾರಥ್ಯದಲ್ಲಿ ಮನೆ ವಿತರಣೆ ಕಾರ್ಯಕ್ರಮಕ್ಕೆ ದಿನಾಂಕ ನಿಗದಿ ಮಾಡಲಾಗುವುದು ಎಂದರು.

Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ