LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
International News

ನವಮಾಸದ ಬಳಿಕ ಧರೆಗಿಳಿದ ನಾಸಾ ವಿಜ್ಞಾನಿಗಳು

 ನಾಸಾ ಗಗನಯಾತ್ರಿಗಳಾದ ಸುನೀತಾ ವಿಲಿಯಮ್ಸ್ ಮತ್ತು ಬುಚ್ ವಿಲ್ಮೋರ್ ಒಂಬತ್ತು ತಿಂಗಳ ನಂತರ ಭಾರತೀಯ ಕಾಲಮಾನ ಬುಧವಾರ ಬೆಳಗ್ಗೆ 3:27ಕ್ಕೆ ಬಾಹ್ಯಾಕಾಶದಿಂದ ಸುರಕ್ಷಿತವಾಗಿ ಭೂಮಿಗಿಳಿದರು.


ಇಬ್ಬರೂ ಕಳೆದ ವರ್ಷ ಜೂನ್‌ನಲ್ಲಿ ಬಾಹ್ಯಾಕಾಶಕ್ಕೆ ಪಯಣಿಸಿದ್ದರು. ತಾಂತ್ರಿಕ ತೊಂದರೆಗಳು ಮತ್ತು ವೇಳಾಪಟ್ಟಿಯಲ್ಲಿನ ಬದಲಾವಣೆಗಳಿಂದಾಗಿ ಅವರ ಮರಳುವಿಕೆ ವಿಳಂಬವಾಗಿತ್ತು. ಕೆಲವೇ ದಿನಗಳ ಈ ಕಾರ್ಯಾಚರಣೆ ಒಂಬತ್ತು ತಿಂಗಳಿಗೆ ವಿಸ್ತರಣೆಗೊಂಡಿತ್ತು.


ಹಾಗಾಗಿ, 59 ವರ್ಷದ ಸುನೀತಾ ವಿಲಿಯಮ್ಸ್ ಮತ್ತು 62 ವರ್ಷದ ಬುಚ್ ವಿಲ್ಮೋರ್ ಭೂಮಿಗೆ ಮರಳುವುದನ್ನು ಕಾಯಲಾಗುತ್ತಿತ್ತು. ಈ ಕಾಯುವಿಕೆ ಇದೀಗ ಇಬ್ಬರೂ ಸುರಕ್ಷಿತವಾಗಿ ಮರಳುವುದರೊಂದಿಗೆ ಕೊನೆಗೊಂಡಿದೆ.


ಜೂನ್ 2024ರಿಂದ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ (ISS) ಸಿಲುಕಿದ್ದ ಸುನೀತಾ ವಿಲಿಯಮ್ಸ್, ಬುಚ್ ವಿಲ್ಮೋರ್ ಅವರೊಂದಿಗೆ ನಿಕ್ ಹೇಗ್ ಮತ್ತು ಅಲೆಕ್ಸಾಂಡರ್ ಗೋರ್ಬುನೋವ್ ಕೂಡಾ ಮರಳಿದ್ದಾರೆ. ಐಎಸ್‌ಎಸ್‌ ಕ್ರೂ-9 ಸದಸ್ಯರನ್ನು ಹೊತ್ತ ಸ್ಪೇಸ್‌ಎಕ್ಸ್ ಡ್ರ್ಯಾಗನ್ ನೌಕೆ ಫ್ಲೋರಿಡಾದ ಸಮುದ್ರದಲ್ಲಿ ಸುರಕ್ಷಿತವಾಗಿ ಇಳಿಯಿತು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್