ಧಾರವಾಡ ,30 : ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ಆಸ್ಪತ್ರೆಯಲ್ಲಿ ರಾಷ್ಟ್ರೀಯ ಪಲ್ಸ್ ಪೋಲಿಯೊ ಲಸಿಕೆ ಕಾರ್ಯಕ್ರಮವನ್ನು ಶಾಸಕರಾದ ಎನ್.ಎಚ್.ಕೋನರೆಡ್ಡಿ ಹಾಗೂ ಜಿಲ್ಲಾಧಿಕಾರಿ ಸ್ನೇಹಲ್ ಆರ್. ಅವರು ಮಕ್ಕಳಿಗೆ ಪೋಲಿಯೊ ಹನಿ ಹಾಕುವ ಮೂಲಕ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಕರ್ನಾಟಕ ಬಾಲ ವಿಕಾಸ ಅಕಾಡೆಮಿಯ ಅಧ್ಯಕ್ಷರಾದ ಅಡಿವೇಶ ಇಟಗಿ, ಮಹಾಪೌರ ಜ್ಯೋತಿ ಪಾಟೀಲ, ಪಾಲಿಕೆಯ ಸಭಾನಾಯಕ ಈರೇಶ ಅಂಚಟಗೇರಿ, ಪಾಲಿಕೆ ಸದಸ್ಯ ಸುರೇಶ ಬೇದರೆ, ಕುಷ್ಠರೋಗ ವಿಭಾಗದ ಜಂಟಿ ನಿರ್ದೇಶಕಿ ಡಾ.ಉಮಾ, ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ.ಸಂಗಪ್ಪ ಗಾಬಿ, ಜಿಲ್ಲಾ ಆರ್.ಸಿ.ಎಚ್.ಒ ಅಧಿಕಾರಿ ಡಾ.ಸುಜಾತಾ ಹಸವಿಮಠ, ತಾಲೂಕು ವೈದ್ಯಾಧಿಕಾರಿ ಡಾ.ತನುಜಾ, ಆರೋಗ್ಯಾಧಿಕಾರಿ ಡಾ.ಗೌರಿ ಬೆಲ್ಲದ, ಡಾ.ಅಶ್ವಿನಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಸಾರ್ವಜನಿಕರು, ಮಕ್ಕಳು ಇತರರು ಉಪಸ್ಥಿತರಿದ್ದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಪರಶುರಾಮ ಎಫ್.ಕೆ. ಪ್ರಾಸ್ತಾವಿಕ ನುಡಿಗಳನ್ನಾಡಿದರು.
ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಡಾ.ಶೋಭಾ ಕುಲಕರ್ಣಿ ಪ್ರಾರ್ಥಿಸಿದರು. ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಬಿ.ಆರ್.ಪಾತ್ರೋಟ ಸ್ವಾಗತಿಸಿ ವಂದಿಸಿದರು.
