Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ನಕ್ಸಲ್ ತಂಡ ಗುಂಡಿನ ದಾಳಿ ಮಾಡಿದ ಪರಿಣಾಮ ಎನ್​ಕೌಂಟರ್: ಸಚಿವ ಜಿ.ಪರಮೇಶ್ವರ್

ಬೆಂಗಳೂರು: ಕಳೆದ 20 ವರ್ಷಗಳಿಂದ ಪೊಲೀಸರು ಹುಡುಕುತ್ತಿದ್ದ ನಕ್ಸಲ್​ ವಿಕ್ರಂ ಗೌಡನನ್ನ ಕಾರ್ಕಳ ತಾಲೂಕಿನ ಹೆಬ್ರಿ ಕಬ್ವಿನಾಲೆಯ ಪೀತಬೈಲುವಿನಲ್ಲಿ ಎನ್​ಕೌಂಟರ್ ಮಾಡಲಾಗಿದೆ. ನಕ್ಸಲ್ ತಂಡ ಗುಂಡಿನ ದಾಳಿ ಮಾಡಿದ ಪರಿಣಾಮ ಪೊಲೀಸರು ಎನ್​ಕೌಂಟರ್ ಮಾಡಬೇಕಾಯುತ್ತ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಸ್ಪಷ್ಟಪಡಿಸಿದ್ದಾರೆ.


ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳ ಜೊತೆ ಮಾತನಾಡಿದ ಗಹ ಸಚಿವರು, ಕಳೆದ 20 ವರ್ಷಗಳಿಂದ ಗ್ರೇಡೆಸ್ ನಕ್ಸಲ್ ತಪ್ಪಿಸಿಕೊಂಡು ಓಡಾಡ್ತಿದ್ರು. ಆತನನ್ನು ಸೆರೆಹಿಡಿಯಲು ಮತ್ತು ಎನ್‌ಕೌಂಟರ್ ಮಾಡಲು ಸಾಧ್ಯವಾಗಿರಲಿಲ್ಲ. ಅಂತೆಯೇ ಪೊಲೀಸರು ವಿಕ್ರಂ ಗೌಡ ಚಲನವಲನಗಳ ಮೇಲೆ ನಿಗಾ ಇಟ್ಟಿದ್ದರು. ನಾವೂ ರಾಜ್ಯದಲ್ಲಿ ನಕ್ಸಲ್ ಕಾಲ ಮುಗೀತು ಅನ್ಕೊಂಡಿದ್ವಿ. ಆದ್ರೆ ಕಳೆದ ವಾರ ರಾಜು ಮತ್ತು ಲತಾ ಎಂಬು ನಕ್ಸಲರು ಪತ್ತೆ ಆದ ಬಳಿಕ ಹೆಬ್ರಿ ಭಾಗದಲ್ಲಿ ಕೂಂಬಿಂಗ್ ಆಪರೇಷನ್ ನಡೆಯುತ್ತಿತ್ತು. ಆಗ ಇದ್ದಕಿದ್ದ ಹಾಗೆ ವಿಕ್ರಂ ಗೌಡ ಬರುವ ಮಾಹಿತಿ ಪೊಲೀಸರಿಗೆ ಸಿಕ್ಕಿತ್ತು. ಈ ಮಾಹಿತಿ ಆಧರಿಸಿ ಕಾರ್ಯಾಚರಣೆ ಕೈಗೊಂಡಾಗ ನಕ್ಸಲ್ ತಂಡ ಗುಂಡಿನ ದಾಳಿ ನಡೆಸಿದೆ. ಆಗ ಪೊಲೀಸರು ಅನಿವಾರ್ಯವಾಗಿ ಎನ್​ಕೌಂಟರ್ ಮಾಡಿದ್ದಾರೆ. ಇನ್ನು ವಿಕ್ರಂ ಜೊತೆಯಲ್ಲಿದ್ದ ಇಬ್ಬರು ಮೂವರು ಓಡಿ ಹೋಗಿದ್ದು, ಆ ಭಾಗದಲ್ಲಿ ಕೂಂಬಿಂಗ್ ಮುಂದುವರೆದಿದೆ ಎಂದು ಸಚಿವರು ತಿಳಿಸಿದ್ದಾರೆ.


ನಕ್ಸಲರನ್ನು ಮುಖ್ಯ ವೇದಿಕೆಗೆ ಕರೆತರುವ ಪ್ರಯತ್ನಗಳು ನಡೆಯುತ್ತಿವೆ. ಹಿಂದೆ ಪಾವಗಡ ಭಾಗದಲ್ಲಿ ನಕ್ಸಲರನ್ನು ಮಾತಾಡಿ ಮುಖ್ಯವೇದಿಕೆಗೆ ಕರೆತರಲಾಗಿತ್ತು. ಈಗಲೂ ಈ ಪ್ರಯತ್ನ ನಡೆಯುತ್ತಿದೆ. ಶರಣಾಗ ಬಯಸುವ ನಕ್ಸಲರಿಗೆ ಸಾಮಾನ್ಯ ಬದುಕು ನಡೆಸಲು ಸರ್ಕಾರ ಅವಕಾಶ ಮಾಡಿಕೊಡಲಿದೆ. ಆದರೆ ಅರಣ್ಯ ಭಾಗದಲ್ಲಿದ್ದು, ಪೊಲೀಸರ ಮೇಲೆ ತಪ್ಪಿಸಿಕೊಂಡು ಹೋಗಲು ಪ್ರಯತ್ನ ಮಾಡಿದ್ರೆ ಈ ರೀತಿ ಘಟನೆ ನಡೆಯುವುದು ಸಹಜ ಎಂದು ತಿಳಿಸಿದರು.

Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ