Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

262 ಕೋಟಿ ರೂ. ಮೌಲ್ಯದ ಮೆಥಾಂಫೆಟಮೈನ್ ವಶಪಡಿಸಿಕೊಂಡ NCB

ದೆಹಲಿ, ನ.24: ರಾಷ್ಟ್ರ ರಾಜಧಾನಿಯಲ್ಲಿ  ಅತಿದೊಡ್ಡ ಮಟ್ಟದ ಮಾದಕ ವಸ್ತುಗಳನ್ನುNCB (ಮಾದಕ ದ್ರವ್ಯ ನಿಯಂತ್ರಣ ಬ್ಯೂರೋ) ಮತ್ತು ದೆಹಲಿ ಪೊಲೀಸರು ಜಂಟಿ ಕಾರ್ಯಾಚರಣೆಯ ಮೂಲಕ ವಶಪಡಿಸಿಕೊಳ್ಳಲಾಗಿತ್ತು. ದಾಳಿಯಲ್ಲಿ 262 ಕೋಟಿ ರೂ. ಮೌಲ್ಯದ 328 ಕೆಜಿ ಮೆಥಾಂಫೆಟಮೈನ್ (ಮೆಥ್ / ಐಸ್) ಜಪ್ತಿ ಮಾಡಲಾಗಿತ್ತು. NCB ಹಾಗೂ ದೆಹಲಿ ಪೊಲೀಸರು, ನೋಯ್ಡಾ, ಗ್ರೇಟರ್ ನೋಯ್ಡಾ ಮತ್ತು ದೆಹಲಿ ಸುತ್ತಮುತ್ತಲಿನ ಪ್ರದೇಶಗಳಲ್ಲಿ ದಾಳಿ ನಡೆಸಿತ್ತು. ದೆಹಲಿಯ ತೋಟದ ಮನೆಯೊಂದಕ್ಕೆ ಕೂಡ ದಾಳಿಯನ್ನು ಮಾಡಲಾಗಿತ್ತು. ಈ ವೇಳೆ ಭಾರೀ ಮೌಲ್ಯದ ಡ್ರಗ್ಸ್​​​ಗಳು ಸಿಕ್ಕಿವೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಗಾಲ್ಯಾಂಡ್ ಮೂಲದ ಮಹಿಳೆ ಸೇರಿದಂತೆ ಇಬ್ಬರನ್ನು ಬಂಧಿಸಲಾಗಿದೆ.





ಇನ್ನು ಈ ಕಾರ್ಯಚರಣೆಯಲ್ಲಿ ಉತ್ತರ ಪ್ರದೇಶದ ಅಮ್ರೋಹಾದ ಮಂಗ್ರೌಲಿ ಗ್ರಾಮದ ನೋಯ್ಡಾ ಸೆಕ್ಟರ್ -5ರ ನಿವಾಸಿ 25 ವರ್ಷದ ಶೇನ್ ವಾರಿಸ್ ಎಂಬ ವ್ಯಕ್ತಿಯನ್ನು ಬಂಧಿಸಲಾಗಿದ್ದು, ಇದೀಗ ಈ ಕಾರ್ಯಚರಣೆ ವೇಗ ಸಿಕ್ಕಿದೆ. ಮಾರಾಟ ವ್ಯವಸ್ಥಾಪಕ ಎಂದು ವಾರಿಸ್, ನಕಲಿ ಸಿಮ್ ಕಾರ್ಡ್‌ಗಳು, ವಾಟ್ಸಾಪ್ ಮತ್ತು ಇತರ ಸಾಮಾಜಿಕ ಜಾಲತಾಣದಲ್ಲಿ ಹೇಳಿಕೊಂಡಿದ್ದ, ಇದರ ಜತೆಗೆ ವಿದೇಶಿ ಮೂಲದ ಕಿಂಗ್‌ಪಿನ್‌ನೊಂದಿಗೆ ಸಂಪರ್ಕವನ್ನು ಕೂಡ ಹೊಂದಿದ್ದ ಎಂದು ಹೇಳಲಾಗಿದೆ. ನ.20ರಂದು ಶೇನ್ ವಾರಿಸ್​​​ನ್ನು ಬಂಧಿಸಲಾಗಿತ್ತು. ವಿಚಾರಣೆ ವೇಳೆ ಕೃತ್ಯದ ಬಗ್ಗೆ ಬಾಯಿ ಬಿಟ್ಟಿದ್ದಾನೆ.

ಇನ್ನು ಪೋರ್ಟರ್ ಡೆಲಿವರಿ ರೈಡರ್ ಮೂಲಕ ಎಸ್ತರ್ ಕಿನಿಮಿ ಎಂಬ ಮಹಿಳೆ ಈ ಮಾದಕ ವಸ್ತುಗಳನ್ನು ಸಾಗಿಸಿದ್ದಾಳೆ ಎಂದು ಹೇಳಲಾಗಿದೆ. ಈ ಮಹಿಳೆಗೆ ವಾರಿಸ್ ತನ್ನ ಸಂಪರ್ಕ ಸಂಖ್ಯೆಗಳು, ವಿಳಾಸ ಮತ್ತು ಇತರ ಕಾರ್ಯಾಚರಣೆಯ ವಿವರಗಳನ್ನು ಹಂಚಿಕೊಂಡಿದ್ದ ಎಂದು ಹೇಳಲಾಗಿದೆ. ಇಬ್ಬರು ಸೇರಿ ವಿದೇಶಕ್ಕೆ ಮಾದಕ ವಸ್ತುಗಳನ್ನು ಸಾಗಿಸುತ್ತಿದ್ದರು ಎಂದು ಅಧಿಕಾರಿಗಳು ಹೇಳಿದ್ದಾರೆ.




Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ