Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಜನರ ಬೇಡಿಕೆಗಳನ್ನು ಈಡೆರಿಸಲು ಅಗತ್ಯ ಕ್ರಮ; ಅಶೋಕ ಪಟ್ಟಣ

ರಾಮದುರ್ಗ:

ಗ್ರಾಮದ ಜನರ ಬೇಡಿಕೆಗಳನ್ನು ಈಡೆರಿಸಲು ಅಗತ್ಯ ಕ್ರಮ ವಹಿಸಲಾಗುವದು. ಈಗಾಗಲೇ ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಮಧ್ಯೆ ಸಾಕಷ್ಟು ಅಭಿವೃದ್ಧಿ ಕೆಲಸಗಳು ನಡೆಯುತ್ತಿದ್ದು, ಹಂತ ಹಂತವಾಗಿ ಎಲ್ಲ ಬೇಡಿಕೆಗಳನ್ನು ಈಡೆರಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವದು ಎಂದು ವಿಧಾನಸಭೆ ಮುಖ್ಯ ಸಚೇತಕ ಅಶೋಕ ಪಟ್ಟಣ ಹೇಳಿದರು.

ತಾಲೂಕಿನ ಕಟಕೋಳ ಗ್ರಾಮದಲ್ಲಿ ರೂ.೨.೬೦ ಕೋಟಿ ಅನುದಾನದಲ್ಲಿ ಮುನವಳ್ಳಿ-ಕೊಟಮುಗಚಿ ರಾಜ್ಯ ಹೆದ್ದಾರಿ ರಸ್ತೆ ಅಭಿವೃದ್ದಿ ಹಾಗೂ ತೋರಣಗಟ್ಟಿ ಗ್ರಾಮದಲ್ಲಿ ರೂ. ೩೦ ಲಕ್ಷ ವೆಚ್ಚದ ರಸ್ತೆ ಹಾಗೂ ಚರಂಡಿ ಸೇರಿದಂತೆ ೨.೯೦ ಕೋಟಿ ಅನುದಾನದ ಕಾಮಗಾರಿಗಳಿಗೆ ಭೂಮಿ ಪೂಜೆ ನೆರವೇರಿಸಿ ಅವರು ಮಾತನಾಡಿದರು.
ತಾಲೂಕಿನ ಮುಖ್ಯ ರಸ್ತೆ ಸೇರಿದಂತೆ ಜಮೀನುಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆಗಳ ಸುಧಾರಣೆಗೆ ಆದ್ಯತೆ ನೀಡಲಾಗಿದ್ದು, ಹಂತ ಹಂತವಾಗಿ ಅನುದಾನ ಬಿಡುಗಡೆಗೊಳಿಸಿ ಕಾಮಗಾರಿ ಕೈಗೊಳ್ಳಲಾಗುವುದು. ಸಾರ್ವಜನಿಕರು ಸಹಕಾರ ನೀಡಬೇಕು ಎಂದರು.

ಈ ಸಂದರ್ಭದಲ್ಲಿ ತೋರಣಗಟ್ಟಿ ಗ್ರಾಮದ ಅಜ್ಜಯ್ಯಸ್ವಾಮಿ, ಮಹಾಂತಯ್ಯ ಬೇವಿನಮಠ, ಶಿದ್ಲಿಂಗಪ್ಪ ಶಿಂಗಾರಗೊಪ್ಪ, ಶಿವಪ್ಪ ಮುನವಳ್ಳಿ, ಮಹಾದೇವ ಚಿನ್ನಾಕಟ್ಟಿ, ಗ್ರಾ.ಪಂ. ಆಡಳಿತಾಧಿಕಾರಿ ಪ್ರಕಾಶ ಮುಗಳಖೋಡ, ಬಾಳಪ್ಪ ತೊಂಡಿಕಟ್ಟಿ, ಪಿಕೆಪಿಎಸ್ ಅಧ್ಯಕ್ಷ   ಪರಮೇಶ ಐನಾಪೂರ, ಹಾಲು ಉತ್ಪಾದಕರ ಸಂಘದ ಅಧ್ಯಕ್ಷ ಪ್ರಕಾಶ ತಿಪ್ಪನ್ನವರ, ಗ್ರಾ.ಪಂ ಮಾಜಿ ಅಧ್ಯಕ್ಷೆಯರಾದ ಲಕ್ಷ್ಮೀ ಮುದಗೋಡ, ಅನಸವ್ವ ಬಡಕಲೂರ, ಲೋಕೋಪಯೋಗಿ ಇಲಾಖೆ ಎಇಇ ರವಿಕುಮಾರ ಸೇರಿದಂತೆ ಗ್ರಾಮದ ಅನೇಕ ಮುಖಂಡರು ಉಪಸ್ಥಿತರಿದ್ದರು. ರುದ್ರಪ್ಪ ಶಿಂಗಾರಗೊಪ್ಪ ಸ್ವಾಗತಿಸಿ, ವಂದಿಸಿದರು.

Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ