ರಾಮದುರ್ಗ:
ಗ್ರಾಮದ ಜನರ ಬೇಡಿಕೆಗಳನ್ನು ಈಡೆರಿಸಲು ಅಗತ್ಯ ಕ್ರಮ ವಹಿಸಲಾಗುವದು. ಈಗಾಗಲೇ ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಮಧ್ಯೆ ಸಾಕಷ್ಟು ಅಭಿವೃದ್ಧಿ ಕೆಲಸಗಳು ನಡೆಯುತ್ತಿದ್ದು, ಹಂತ ಹಂತವಾಗಿ ಎಲ್ಲ ಬೇಡಿಕೆಗಳನ್ನು ಈಡೆರಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವದು ಎಂದು ವಿಧಾನಸಭೆ ಮುಖ್ಯ ಸಚೇತಕ ಅಶೋಕ ಪಟ್ಟಣ ಹೇಳಿದರು.
ತಾಲೂಕಿನ ಕಟಕೋಳ ಗ್ರಾಮದಲ್ಲಿ ರೂ.೨.೬೦ ಕೋಟಿ ಅನುದಾನದಲ್ಲಿ ಮುನವಳ್ಳಿ-ಕೊಟಮುಗಚಿ ರಾಜ್ಯ ಹೆದ್ದಾರಿ ರಸ್ತೆ ಅಭಿವೃದ್ದಿ ಹಾಗೂ ತೋರಣಗಟ್ಟಿ ಗ್ರಾಮದಲ್ಲಿ ರೂ. ೩೦ ಲಕ್ಷ ವೆಚ್ಚದ ರಸ್ತೆ ಹಾಗೂ ಚರಂಡಿ ಸೇರಿದಂತೆ ೨.೯೦ ಕೋಟಿ ಅನುದಾನದ ಕಾಮಗಾರಿಗಳಿಗೆ ಭೂಮಿ ಪೂಜೆ ನೆರವೇರಿಸಿ ಅವರು ಮಾತನಾಡಿದರು.
ತಾಲೂಕಿನ ಮುಖ್ಯ ರಸ್ತೆ ಸೇರಿದಂತೆ ಜಮೀನುಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆಗಳ ಸುಧಾರಣೆಗೆ ಆದ್ಯತೆ ನೀಡಲಾಗಿದ್ದು, ಹಂತ ಹಂತವಾಗಿ ಅನುದಾನ ಬಿಡುಗಡೆಗೊಳಿಸಿ ಕಾಮಗಾರಿ ಕೈಗೊಳ್ಳಲಾಗುವುದು. ಸಾರ್ವಜನಿಕರು ಸಹಕಾರ ನೀಡಬೇಕು ಎಂದರು.
ಈ ಸಂದರ್ಭದಲ್ಲಿ ತೋರಣಗಟ್ಟಿ ಗ್ರಾಮದ ಅಜ್ಜಯ್ಯಸ್ವಾಮಿ, ಮಹಾಂತಯ್ಯ ಬೇವಿನಮಠ, ಶಿದ್ಲಿಂಗಪ್ಪ ಶಿಂಗಾರಗೊಪ್ಪ, ಶಿವಪ್ಪ ಮುನವಳ್ಳಿ, ಮಹಾದೇವ ಚಿನ್ನಾಕಟ್ಟಿ, ಗ್ರಾ.ಪಂ. ಆಡಳಿತಾಧಿಕಾರಿ ಪ್ರಕಾಶ ಮುಗಳಖೋಡ, ಬಾಳಪ್ಪ ತೊಂಡಿಕಟ್ಟಿ, ಪಿಕೆಪಿಎಸ್ ಅಧ್ಯಕ್ಷ ಪರಮೇಶ ಐನಾಪೂರ, ಹಾಲು ಉತ್ಪಾದಕರ ಸಂಘದ ಅಧ್ಯಕ್ಷ ಪ್ರಕಾಶ ತಿಪ್ಪನ್ನವರ, ಗ್ರಾ.ಪಂ ಮಾಜಿ ಅಧ್ಯಕ್ಷೆಯರಾದ ಲಕ್ಷ್ಮೀ ಮುದಗೋಡ, ಅನಸವ್ವ ಬಡಕಲೂರ, ಲೋಕೋಪಯೋಗಿ ಇಲಾಖೆ ಎಇಇ ರವಿಕುಮಾರ ಸೇರಿದಂತೆ ಗ್ರಾಮದ ಅನೇಕ ಮುಖಂಡರು ಉಪಸ್ಥಿತರಿದ್ದರು. ರುದ್ರಪ್ಪ ಶಿಂಗಾರಗೊಪ್ಪ ಸ್ವಾಗತಿಸಿ, ವಂದಿಸಿದರು.