Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

2024ರ NEET-UG ಫಲಿತಾಂಶ ​ಪ್ರಕಟ

ನವದೆಹಲಿ: ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯಿಂದ ವೈದ್ಯಕೀಯ ಪ್ರವೇಶಕ್ಕಾಗಿ ನಡೆದ 2024ರ NEET UG ಫಲಿತಾಂಶವನ್ನು ಇಂದು (ಶನಿವಾರ) ಕೇಂದ್ರ ಮತ್ತು ನಗರವಾರು ರಿಸಲ್ಟ್​ ಪ್ರಕಟಿಸಲಾಗಿದೆ. ಪರೀಕ್ಷೆ ಬರೆದ ಎಲ್ಲಾ ಅಭ್ಯರ್ಥಿಗಳು NTA NEET ಅಧಿಕೃತ ವೆಬ್‌ಸೈಟ್- exams.nta.ac.in/NEET/ ನಲ್ಲಿ ಹಾಗೂ neet.ntaonline.in ನಲ್ಲಿ ಫಲಿತಾಂಶವನ್ನು ವೀಕ್ಷಿಸಬಹುದು.


ಜುಲೈ 18 ರಂದು ಸುಪ್ರೀಂ ಕೋರ್ಟ್, ಎನ್‌ಟಿಎಗೆ ಜುಲೈ 20 ರಂದು ಮಧ್ಯಾಹ್ನ 12 ಗಂಟೆಯೊಳಗೆ ನೀಟ್ ಯುಜಿ ಫಲಿತಾಂಶಗಳನ್ನು ಪ್ರಕಟಿಸಲು ಆದೇಶಿಸಿತ್ತು. ಸುಪ್ರೀಂ ಕೋರ್ಟ್​ ತನ್ನ ವೆಬ್‌ಸೈಟ್‌ನಲ್ಲಿ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳ ಅಂಕಗಳನ್ನು ಪ್ರಕಟಿಸಲು ಎನ್​ಟಿಎಗೆ ಹೇಳಿತ್ತು. ಆದರೆ, ವಿದ್ಯಾರ್ಥಿಗಳ ಗುರುತನ್ನು ಬಹಿರಂಗಪಡಿಬಾರದು. ಇಂದು ಮಧ್ಯಾಹ್ನದೊಳಗೆ ನಗರ ಮತ್ತು ಕೇಂದ್ರವಾರು NEET ಯುಜಿ ಫಲಿತಾಂಶಗಳನ್ನು ಬಿಡುಗಡೆ ಮಾಡುವಂತೆ ಸಿಜೆಐ ಡಿ.ವೈ. ಚಂದ್ರಚೂಡ್ ಮತ್ತು ನ್ಯಾಯಮೂರ್ತಿಗಳಾದ ಜೆಬಿ ಪರ್ದಿವಾಲಾ ಮತ್ತು ಮನೋಜ್ ಮಿಶ್ರಾ ಅವರ ಪೀಠವು ಆದೇಶ ಹೊರಡಿಸಿತ್ತು.


ಈ ವರ್ಷ, NTA NEET ಯುಜಿ ಪರೀಕ್ಷೆಯನ್ನು ಮೇ 5 ರಂದು 4,750 ಕೇಂದ್ರಗಳಲ್ಲಿ ನಡೆಸಲಾಗಿತ್ತು. NEET UG ಫಲಿತಾಂಶಗಳನ್ನು 2024ರ ಜೂನ್ 4 ರಂದು ಘೋಷಿಸಲಾಗಿತ್ತು. ಮರು ಪರೀಕ್ಷೆಯನ್ನು ಜೂನ್ 23ರಂದು ನಡೆಸಲಾಗಿತ್ತು. ಈ ವರ್ಷ ಸುಮಾರು 24 ಲಕ್ಷ ಅಭ್ಯರ್ಥಿಗಳು ಮುಖ್ಯ ಪರೀಕ್ಷೆಗೆ ಹಾಜರಾಗಿದ್ದರು. 1,563 ಅಭ್ಯರ್ಥಿಗಳು ಮರು ಪರೀಕ್ಷೆಗೆ ಹಾಜರಾಗಿದ್ದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ