Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

2024ರ NEET-UG ಫಲಿತಾಂಶ ​ಪ್ರಕಟ

ನವದೆಹಲಿ: ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯಿಂದ ವೈದ್ಯಕೀಯ ಪ್ರವೇಶಕ್ಕಾಗಿ ನಡೆದ 2024ರ NEET UG ಫಲಿತಾಂಶವನ್ನು ಇಂದು (ಶನಿವಾರ) ಕೇಂದ್ರ ಮತ್ತು ನಗರವಾರು ರಿಸಲ್ಟ್​ ಪ್ರಕಟಿಸಲಾಗಿದೆ. ಪರೀಕ್ಷೆ ಬರೆದ ಎಲ್ಲಾ ಅಭ್ಯರ್ಥಿಗಳು NTA NEET ಅಧಿಕೃತ ವೆಬ್‌ಸೈಟ್- exams.nta.ac.in/NEET/ ನಲ್ಲಿ ಹಾಗೂ neet.ntaonline.in ನಲ್ಲಿ ಫಲಿತಾಂಶವನ್ನು ವೀಕ್ಷಿಸಬಹುದು.


ಜುಲೈ 18 ರಂದು ಸುಪ್ರೀಂ ಕೋರ್ಟ್, ಎನ್‌ಟಿಎಗೆ ಜುಲೈ 20 ರಂದು ಮಧ್ಯಾಹ್ನ 12 ಗಂಟೆಯೊಳಗೆ ನೀಟ್ ಯುಜಿ ಫಲಿತಾಂಶಗಳನ್ನು ಪ್ರಕಟಿಸಲು ಆದೇಶಿಸಿತ್ತು. ಸುಪ್ರೀಂ ಕೋರ್ಟ್​ ತನ್ನ ವೆಬ್‌ಸೈಟ್‌ನಲ್ಲಿ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳ ಅಂಕಗಳನ್ನು ಪ್ರಕಟಿಸಲು ಎನ್​ಟಿಎಗೆ ಹೇಳಿತ್ತು. ಆದರೆ, ವಿದ್ಯಾರ್ಥಿಗಳ ಗುರುತನ್ನು ಬಹಿರಂಗಪಡಿಬಾರದು. ಇಂದು ಮಧ್ಯಾಹ್ನದೊಳಗೆ ನಗರ ಮತ್ತು ಕೇಂದ್ರವಾರು NEET ಯುಜಿ ಫಲಿತಾಂಶಗಳನ್ನು ಬಿಡುಗಡೆ ಮಾಡುವಂತೆ ಸಿಜೆಐ ಡಿ.ವೈ. ಚಂದ್ರಚೂಡ್ ಮತ್ತು ನ್ಯಾಯಮೂರ್ತಿಗಳಾದ ಜೆಬಿ ಪರ್ದಿವಾಲಾ ಮತ್ತು ಮನೋಜ್ ಮಿಶ್ರಾ ಅವರ ಪೀಠವು ಆದೇಶ ಹೊರಡಿಸಿತ್ತು.


ಈ ವರ್ಷ, NTA NEET ಯುಜಿ ಪರೀಕ್ಷೆಯನ್ನು ಮೇ 5 ರಂದು 4,750 ಕೇಂದ್ರಗಳಲ್ಲಿ ನಡೆಸಲಾಗಿತ್ತು. NEET UG ಫಲಿತಾಂಶಗಳನ್ನು 2024ರ ಜೂನ್ 4 ರಂದು ಘೋಷಿಸಲಾಗಿತ್ತು. ಮರು ಪರೀಕ್ಷೆಯನ್ನು ಜೂನ್ 23ರಂದು ನಡೆಸಲಾಗಿತ್ತು. ಈ ವರ್ಷ ಸುಮಾರು 24 ಲಕ್ಷ ಅಭ್ಯರ್ಥಿಗಳು ಮುಖ್ಯ ಪರೀಕ್ಷೆಗೆ ಹಾಜರಾಗಿದ್ದರು. 1,563 ಅಭ್ಯರ್ಥಿಗಳು ಮರು ಪರೀಕ್ಷೆಗೆ ಹಾಜರಾಗಿದ್ದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ