Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ನಿಧಿ ಸಿಗುತ್ತೆ ಎಂದು ಹೊಲೆಯುವವನ ನರಬಲಿ!

ಚಿತ್ರದುರ್ಗ, (ಫೆಬ್ರವರಿ 11): ನರಬಲಿ ಕೊಟ್ಟರೆ ನಿಧಿ ಸಿಗುತ್ತೆ ಎಂದು ಜ್ಯೋತಿಷಿ ಹೇಳಿದ್ದ ಮಾತು ಕೇಳಿ ವ್ಯಕ್ತಿಯೋರ್ವ, ಚಪ್ಪಲಿ ಹೊಲೆಯುವ ಕಾರ್ಮಿಕನನನ್ನು ಬರ್ಬರವಾಗಿ ಕೊಲೆ ಮಾಡಿದ್ದಾನೆ. ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ಪರಶುರಾಂಪುರದಲ್ಲಿ ಈ‌ ಘಟನೆ ನಡೆದಿದೆ. ಜೆಜೆ ಕಾಲೋನಿ ನಿವಾಸಿ ಪ್ರಭಾಕರ್​ ಹತ್ಯೆಯಾದ ವ್ಯಕ್ತಿ. ಜ್ಯೋತಿಷಿ ರಾಮಕೃಷ್ಣನ ಮಾತು ಕೇಳಿ ಆನಂದ್ ರೆಡ್ಡಿ ಎಂಬಾತ ಹಿಂದೆ ಮುಂದೆ ನೋಡದೇ ನರಬಲಿ ಕೊಟ್ಟೇ ಬಿಟ್ಟಿದ್ದಾನೆ. ಆದ್ರೆ, ಇದೀಗ ಪೊಲೀಸರು, ನರಬಲಿ ಕೊಟ್ಟ ಆರೋಪಿ ಆಂಧ್ರದ ಕಲ್ಯಾಣ ದುರ್ಗ ತಾಲೂಕಿನ ಕುಂದುರ್ಪಿ ಗ್ರಾಮದ ಆನಂದ ರೆಡ್ಡಿ ಹಾಗೂ ಜ್ಯೋತಿಷಿಯನ್ನು ಬಂಧಿಸಿದ್ದಾರೆ.

ಜ್ಯೋತಿಷಿ ರಾಮಕೃಷ್ಣ, ಆನಂದ ರೆಡ್ಡಿಗೆ ಪರಶುರಾಮಪುರ ಪಶ್ಚಿಮದಲ್ಲಿ ನರಬಲಿ ಕೊಟ್ರೆ ನಿಧಿ ಸಿಗುತ್ತೆ. ಆ ರಕ್ತವನ್ನು ಮಾರಮ್ಮ ದೇವಿಗೆ ಅರ್ಪಿಸಲು ಹೇಳಿದ್ದನಂತೆ. ಜ್ಯೋತಿಷಿ ಮಾತು ಕೇಳಿದ ಆನಂದ ರೆಡ್ಡಿ, ಕಳೆದ ಭಾನುವಾರ ಸಂಜೆ ಪಶ್ಚಿಮ‌ ದಿಕ್ಕಲ್ಲಿ ಬಂದ ಪ್ರಭಾಕರನ ಬರ್ಬರ ಹತ್ಯೆ ಮಾಡಿದ್ದಾನೆ. ಬಸ್ ನಿಲ್ದಾಣದಲ್ಲಿ ಚಪ್ಪಲಿ ಹೊಲೆಯುವ ಕಾಯಕ ಮಾಡಿಕೊಂಡಿದ್ದ ಪ್ರಭಾಕರನನ್ನು ಬೈಕಲ್ಲಿ ಡ್ರಾಪ್ ನೀಡುವುದಾಗಿ ಹೇಳಿ ಕರೆದೊಯ್ದು ಮಚ್ಚಿನಿಂದ ಕೊಚ್ಚಿ ಕೊಂದಿದ್ದಾನೆ.

‘ಕೊಲೆ ಆರೋಪಿ ಆನಂದ ರೆಡ್ಡಿ ಪಾವಗಡದ ಡಾಬಾಲ್ಲಿ ಭಟ್ಟನಾಗಿ ಕೆಲಸ ಮಾಡುತ್ತಿದ್ದ. ಎರಡು ದಿನಗಳ ಹಿಂದೆ ಈ ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದ್ದು, ಕೊಲೆ ಆರೋಪಿ ಆನಂದ ರೆಡ್ಡಿ ಹಾಗೂ ತುಮಕೂರು ಜಿಲ್ಲೆಯ ಪಾವಗಡದ ಜ್ಯೋತಿಷಿ ರಾಮಕೃಷ್ಣನನ್ನು ಬಂಧಿಸಿ ಕೊಲೆಗೆ ಬಳಸಿದ್ದ ಮಚ್ಚು ಹಾಗೂ ಬಟ್ಟೆ‌ ಸೀಜ್ ಮಾಡಿದ್ದಾರೆ. ಇನ್ನು ಘಟನಾ ಸ್ಥಳಕ್ಕೆ ಎಸ್‌ಪಿ ರಂಜೀತ ಕುಮಾರ್ ಬಂಡಾರು, ASP ಕುಮಾರಸ್ವಾಮಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ