LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ನಿಧಿ ಸಿಗುತ್ತೆ ಎಂದು ಹೊಲೆಯುವವನ ನರಬಲಿ!

ಚಿತ್ರದುರ್ಗ, (ಫೆಬ್ರವರಿ 11): ನರಬಲಿ ಕೊಟ್ಟರೆ ನಿಧಿ ಸಿಗುತ್ತೆ ಎಂದು ಜ್ಯೋತಿಷಿ ಹೇಳಿದ್ದ ಮಾತು ಕೇಳಿ ವ್ಯಕ್ತಿಯೋರ್ವ, ಚಪ್ಪಲಿ ಹೊಲೆಯುವ ಕಾರ್ಮಿಕನನನ್ನು ಬರ್ಬರವಾಗಿ ಕೊಲೆ ಮಾಡಿದ್ದಾನೆ. ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ಪರಶುರಾಂಪುರದಲ್ಲಿ ಈ‌ ಘಟನೆ ನಡೆದಿದೆ. ಜೆಜೆ ಕಾಲೋನಿ ನಿವಾಸಿ ಪ್ರಭಾಕರ್​ ಹತ್ಯೆಯಾದ ವ್ಯಕ್ತಿ. ಜ್ಯೋತಿಷಿ ರಾಮಕೃಷ್ಣನ ಮಾತು ಕೇಳಿ ಆನಂದ್ ರೆಡ್ಡಿ ಎಂಬಾತ ಹಿಂದೆ ಮುಂದೆ ನೋಡದೇ ನರಬಲಿ ಕೊಟ್ಟೇ ಬಿಟ್ಟಿದ್ದಾನೆ. ಆದ್ರೆ, ಇದೀಗ ಪೊಲೀಸರು, ನರಬಲಿ ಕೊಟ್ಟ ಆರೋಪಿ ಆಂಧ್ರದ ಕಲ್ಯಾಣ ದುರ್ಗ ತಾಲೂಕಿನ ಕುಂದುರ್ಪಿ ಗ್ರಾಮದ ಆನಂದ ರೆಡ್ಡಿ ಹಾಗೂ ಜ್ಯೋತಿಷಿಯನ್ನು ಬಂಧಿಸಿದ್ದಾರೆ.

ಜ್ಯೋತಿಷಿ ರಾಮಕೃಷ್ಣ, ಆನಂದ ರೆಡ್ಡಿಗೆ ಪರಶುರಾಮಪುರ ಪಶ್ಚಿಮದಲ್ಲಿ ನರಬಲಿ ಕೊಟ್ರೆ ನಿಧಿ ಸಿಗುತ್ತೆ. ಆ ರಕ್ತವನ್ನು ಮಾರಮ್ಮ ದೇವಿಗೆ ಅರ್ಪಿಸಲು ಹೇಳಿದ್ದನಂತೆ. ಜ್ಯೋತಿಷಿ ಮಾತು ಕೇಳಿದ ಆನಂದ ರೆಡ್ಡಿ, ಕಳೆದ ಭಾನುವಾರ ಸಂಜೆ ಪಶ್ಚಿಮ‌ ದಿಕ್ಕಲ್ಲಿ ಬಂದ ಪ್ರಭಾಕರನ ಬರ್ಬರ ಹತ್ಯೆ ಮಾಡಿದ್ದಾನೆ. ಬಸ್ ನಿಲ್ದಾಣದಲ್ಲಿ ಚಪ್ಪಲಿ ಹೊಲೆಯುವ ಕಾಯಕ ಮಾಡಿಕೊಂಡಿದ್ದ ಪ್ರಭಾಕರನನ್ನು ಬೈಕಲ್ಲಿ ಡ್ರಾಪ್ ನೀಡುವುದಾಗಿ ಹೇಳಿ ಕರೆದೊಯ್ದು ಮಚ್ಚಿನಿಂದ ಕೊಚ್ಚಿ ಕೊಂದಿದ್ದಾನೆ.

‘ಕೊಲೆ ಆರೋಪಿ ಆನಂದ ರೆಡ್ಡಿ ಪಾವಗಡದ ಡಾಬಾಲ್ಲಿ ಭಟ್ಟನಾಗಿ ಕೆಲಸ ಮಾಡುತ್ತಿದ್ದ. ಎರಡು ದಿನಗಳ ಹಿಂದೆ ಈ ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದ್ದು, ಕೊಲೆ ಆರೋಪಿ ಆನಂದ ರೆಡ್ಡಿ ಹಾಗೂ ತುಮಕೂರು ಜಿಲ್ಲೆಯ ಪಾವಗಡದ ಜ್ಯೋತಿಷಿ ರಾಮಕೃಷ್ಣನನ್ನು ಬಂಧಿಸಿ ಕೊಲೆಗೆ ಬಳಸಿದ್ದ ಮಚ್ಚು ಹಾಗೂ ಬಟ್ಟೆ‌ ಸೀಜ್ ಮಾಡಿದ್ದಾರೆ. ಇನ್ನು ಘಟನಾ ಸ್ಥಳಕ್ಕೆ ಎಸ್‌ಪಿ ರಂಜೀತ ಕುಮಾರ್ ಬಂಡಾರು, ASP ಕುಮಾರಸ್ವಾಮಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸ್ವಚ್ಛತೆಯೇ ಸೇವೆ-2026' ಅಭಿಯಾನ ಆರಂಭ: ಸಾರ್ವಜನಿಕರ ಸಹಭಾಗಿತ್ವಕ್ಕೆ ಕರೆಸ್ವಚ್ಛತೆಯೇ ಸೇವೆ-2026' ಅಭಿಯಾನ ಆರಂಭ: ಸಾರ್ವಜನಿಕರ ಸಹಭಾಗಿತ್ವಕ್ಕೆ ಕರೆವಿ.ಶ್ರೀ.ಕೃ. ವಿಶ್ವವಿದ್ಯಾಲಯದಲ್ಲಿ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ: ಅಭಿವೃದ್ಧಿಗೆ ಎಲ್ಲರ ಸಹಭಾಗಿತ್ವ ಅಗತ್ಯಕರಕುಶಲತೆಯ ಜೊತೆ ಶಿಕ್ಷಣವೂ ಅನಿವಾರ್ಯ: ಲಿಡ್ಕರ್ ಅಧ್ಯಕ್ಷ ಮುಂಡರಗಿ ನಾಗರಾಜತಾಳಿಕೋಟೆ ತಾಲೂಕು ಕೂಡ ಶೀಘ್ರ ಬರಪೀಡಿತ ಪಟ್ಟಿಗೆ : ಶಾಸಕ ನಾಡಗೌಡತೇರದಾಳ ಹಾಗೂ ರಬಕವಿ /ಬನಹಟ್ಟಿ ತಾಲೂಕುಗಳು ಬರಗಾಲ ಪಟ್ಟಿಗೆ, ಸಿಎಂ ಡಿಕೆ ಶಿವಕುಮಾರ್ ಅವರಿಗೆ ಅಭಿನಂದನೆ.ರೋಗಿಗಳಿಗೆ ಹಾಲುಹಣ್ಣು ವಿತರಿಸಿ ಬಿಜೆಪಿ ಕಾರ್ಯಕರ್ತರಿಂದ ’ಸೇವಾ ಸಂಕಲ್ಪಹಕ್ಕುಪತ್ರ ಪಡೆದ ಫಲಾನುಭವಿಗಳಿಗೆ ಫಾರಂ-2 ಇ-ಖಾತಾ ಮಾಡಿಕೊಡಲು ಆಗ್ರಹಸೆ.20ರಂದು ಬಳ್ಳಾರಿಯಲ್ಲಿ ಹಿಂದೂ ಮಹಾ ಗಣಪತಿ ಭವ್ಯ ಶೋಭಾಯಾತ್ರೆಜನರ ಮನೆ ಬಾಗಿಲಿಗೆ ಸರ್ಕಾರದ ಸೇವೆ ಸಿಎಂ ಕನಸು; ಜನರಿಗೆ ತೊಂದರೆ ನೀಡಿದರೆ ಕ್ರಮ: ನಾರಾ ಭರತ್ ರೆಡ್ಡಿ