Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮಧ್ಯ ಪ್ರದೇಶದಲ್ಲಿ ಹೊಸ ಮದ್ಯ ನೀತಿ; ಇನ್ಮೇಲೆ ಕಡಿಮೆ ಆಲ್ಕೋಹಾಲ್‌ ಬಾರ್‌!

ಭೋಪಾಲ್(ಮಧ್ಯ ಪ್ರದೇಶ)​: ಇದೇ ಮೊದಲ ಬಾರಿಗೆ ಮಧ್ಯ ಪ್ರದೇಶದಲ್ಲಿ ಕಡಿಮೆ ಆಲ್ಕೋಹಾಲ್‌ಯುಕ್ತ ಪಾನೀಯಗಳ ಬಾರ್​ಗಳು ತಲೆ ಎತ್ತಲು ಸಜ್ಜಾಗಿವೆ. ಹೊಸ ಆರ್ಥಿಕ ವರ್ಷದಿಂದ (ಏಪ್ರಿಲ್​ 1) ಹೊಸ ಮದ್ಯ ನೀತಿ ಅಡಿಯಲ್ಲಿ ಇವುಗಳನ್ನು ಕಾಣಬಹುದು. ಇದೇ ವೇಳೆ, 17 ಪವಿತ್ರ ನಗರಗಳೂ ಸೇರಿದಂತೆ 19 ಸ್ಥಳಗಳಲ್ಲಿ ಮದ್ಯ​ ಮಾರಾಟಕ್ಕೆ ಸಂಪೂರ್ಣ ನಿರ್ಬಂಧ ವಿಧಿಸಲಾಗಿದೆ.


ಭಾನುವಾರ ಹೊಸ ಮದ್ಯ ನೀತಿಯನ್ನು ಬಿಡುಗಡೆ ಮಾಡಿದ ಮಧ್ಯ ಪ್ರದೇಶ ಸರ್ಕಾರ, ಕಡಿಮೆ ಆಲ್ಕೋಹಾಲ್​ಯುಕ್ತ ಪಾನೀಯಗಳ ಬಾರ್​ಗಳಲ್ಲಿ ಕೇವಲ ಬಿಯರ್​, ವೈನ್​ ಮತ್ತು ಗರಿಷ್ಠ ಶೇ.10ರಷ್ಟು ವಿ/ವಿ ಆಲ್ಕೋಹಾಲ್​ ಅಂಶ ಹೊಂದಿರುವ ರೆಡಿ-ಟು ಡ್ರಿಂಕ್​ ಆಲ್ಕೋಹಾಲಿಕ್​ ಪಾನೀಯಗಳನ್ನು ಮಾರಾಟ ಮಾಡಲು ಅನುಮತಿಸಿದೆ. ಇಂತಹ ಬಾರ್‌ಗಳಲ್ಲಿ ಹೆಚ್ಚಿನ ಆಲ್ಕೋಹಾಲ್​ಯುಕ್ತ ಮದ್ಯಗಳ ಮಾರಾಟವನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ.


ಸದ್ಯ ಮಧ್ಯ ಪ್ರದೇಶದೆಲ್ಲೆಡೆ 460ರಿಂದ 470 ಲಿಕ್ಕರ್​, ಬಿಯರ್​ ಬಾರ್​ಗಳಿವೆ. ಈ ಹೊಸ ಬಾರ್​ಗಳಿಂದಾಗಿ ಈ ಸಂಖ್ಯೆ ಮತ್ತಷ್ಟು ಹೆಚ್ಚಲಿದೆ ಎಂದು ಅಬಕಾರಿ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.


ಮದ್ಯ ಮಾರಾಟ ನಿರ್ಬಂಧದ ಅಡಿಯಲ್ಲಿ ಏಪ್ರಿಲ್​ 1ರಿಂದ 17 ಪವಿತ್ರ ನಗರಗಳು ಸೇರಿದಂತೆ 19 ಸ್ಥಳಗಳಲ್ಲಿ 47 ಮದ್ಯದಂಗಡಿಯನ್ನು ಮುಚ್ಚಲಾಗುವುದು. ಇವುಗಳಲ್ಲಿ ಭಾರತ ನಿರ್ಮಿತ ವಿದೇಶಿ ಮದ್ಯ ಮತ್ತು ಕಂಟ್ರಿ ಲಿಕ್ಕರ್​ ಅಂಗಡಿಗಳೂ ಇವೆ. ಉಜ್ಜೈನಿ, ಓಂಕಾರೇಶ್ವರ, ಮಹೇಶ್ವರ್​, ಮಂಡ್ಲೇಶ್ವರ್​, ಓರ್ಚಾ, ಮೈಹಾರ್, ಚಿತ್ರಕೂಟ, ದಾತಿಯಾ, ಅಮರಕಂಟಕ್ ಮತ್ತು ಸಲ್ಕನ್‌ಪುರನಂತಹ ಕೆಲವು ಪುಣ್ಯ ಕ್ಷೇತ್ರಗಳಲ್ಲಿ ಮಾರಾಟವನ್ನು ಬಂದ್​ ಮಾಡಲಾಗಿದೆ.

Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ