Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ವಚನಗಳ ಮೂಲಕ ಸಮಾಜ ಸುಧಾರಣೆಗೆ ಶ್ರಮಿಸಿದ ನಿಜಶರಣ ಅಂಬಿಗರ ಚೌಡಯ್ಯನವರು : ಎಸ್.ವಿ.ಸಂಕನೂರ


ಗದಗ ಜನೆವರಿ ೨೧:  ನಿಜಶರಣ ಅಂಬಿಗರ ಚೌಡಯ್ಯನವರು ತಮ್ಮ ವಚನಗಳ ಮೂಲಕ ಸಮಾಜದ ಸುಧಾರಣೆಗೆ ಶ್ರಮಿಸಿದವರು ಎಂದು ವಿಧಾನ ಪರಿಷತ್ ಶಾಸಕ ಎಸ್.ವಿ.ಸಂಕನೂರ ತಿಳಿಸಿದರು.

ನಗರದ ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲ್ ದಲ್ಲಿ ಬುಧವಾರ ಗದಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ , ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರುಗಳ ಸಹಯೋಗದಲ್ಲಿ ನಿಜಶರಣ ಅಂಬಿಗರ ಚೌಡಯ್ಯನವರ ಜಯಂತಿ ೨೦೨೬  ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.


ಅಂಬಿಗರಚೌಡಯ್ಯನವರು ೧೨ ನೇ ಶತಮಾನದಲ್ಲಿನ ಶಿವಶರಣರು. ಉಳಿದೆಲ್ಲ ವಚನಕಾರರಿಗಿಂತ ಭಿನ್ನ ಹಾಗೂ ವಿಶಿಷ್ಟ ವ್ಯಕ್ತಿತ್ವ ಇವರದ್ದಾಗಿತ್ತು. ಬಸವಣ್ಣನವರಿಂದ ಲಿಂಗದ ದೀಕ್ಷೆಯನ್ನು ಪಡೆದರು. ಕಾಯಕ ಅಥವಾ ವ್ಯಕ್ತಿನಾಮವಾದ ಅಂಬಿಗರ ಚೌಡಯ್ಯ ಎಂಬುದೇ ಇವರ ವಚನಗಳ ಅಂಕಿತವಾಗಿದೆ. ಅಂಬಿಗರ ಚೌಡಯ್ಯನವರು ನೇರವಾದ ನುಡಿ ದಿಟ್ಟವಾದ ನಡೆಗೆ ಹೆಸರಾಗಿದ್ದರು. ನಿಷ್ಟುರವಾದಿಗಳಾಗಿದ್ದು ಸಮಾಜದಲ್ಲಿನ ಮೂಡನಂಬಿಕೆ, ಕಂದಾಚಾರ ಹೊಡೆದೋಡಿಸಿ ಸಮಾಜ ಸುಧಾರಣೆಗೆ ಶ್ರಮಿಸಿದವರು ಎಂದು ತಿಳಿಸಿದ  ಎಸ್.ವಿ.ಸಂಕನೂರ ಅವರು ನಾವು ವೈಚಾರಿಕವಾಗಿ ಬದುಕಲು ಕಲಿಯಬೇಕು. ಸ್ವಾಭಿಮಾನದಿಂದ ಹಾಗೂ ಆತ್ಮ ವಿಶ್ವಾಸದಿಂದ ಬದುಕಬೇಕು. ಅಂಬಿಗರ ಚೌಡಯ್ಯನವರ ತತ್ವಗಳನ್ನು ಪ್ರತಿಯೊಬ್ಬರೂ ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ತಿಳಿಸಿದರು.


ಅಪರ ಜಿಲ್ಲಾಧಿಕಾರಿ ಡಾ. ದುರಗೇಶ್ ಕೆ.ಆರ್.ಅವರು ಮಾತನಾಡಿ ಅಂಬಿಗರ ಚೌಡಯ್ಯನವರು ನೇರ ನಿಷ್ಟುರವಾದಿಗಳಾಗಿದ್ದರು.  ಡೋಣಿ ನಡೆಸುವ ಕಾಯಕ ಇವರದಾಗಿತ್ತು.  ಕಾಯಕ ನಿಷ್ಟೆಗೆ ಹೆಸರಾದ ಅಂಬಿಗರ ಚೌಡಯ್ಯನವರು ತಮ್ಮ ವಚನಗಳ ಮೂಲಕ ಸಮಾಜದಲ್ಲಿನ ತಾರತಮ್ಯ ಹೋಗಲಾಡಿಸಿ ಅಂಕುಡೊಂಕುಗಳನ್ನು ತಿದ್ದುವ ಮೂಲಕ ಸಮಾಜ ಸುಧಾರಣೆಗೆ ಶ್ರಮಿಸಿದರು ಎಂದ ಅಪರ ಜಿಲ್ಲಾಧಿಕಾರಿಗಳು  ಸಮಾಜ ಸುಧಾರಣೆಯಾಗಬೇಕಾದರೆ ಶಿಕ್ಷಣವೊಂದೇ ಮಾರ್ಗವಾಗಿದೆ. ಆದಕಾರಣ ಪಾಲಕರು ತಮ್ಮ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಒದಗಿಸಬೇಕು ಎಂದರು.


ಇದೇ ಸಂದರ್ಭದಲ್ಲಿ ಎಸ್‌ಎಸ್‌ಎಲ್‌ಸಿ, ಪಿಯುಸಿಯಲ್ಲಿ ಅತೀ ಹೆಚ್ಚು ಅಂಕಗಳಿಸಿದ ಸಮಾಜದ ವಿದ್ಯಾರ್ಥಿಗಳಿಗೆ ಹಾಗೂ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಮಾಜದ ಸಾಧಕರಿಗೆ ಸನ್ಮಾನಿಸಲಾಯಿತು.

ನರೇಗಲ್ ದ ಉಪನ್ಯಾಸಕ ಶಿವಾನಂದ ಗೋಗೇರಿ ಅವರು ಅಂಬಿಗರ ಚೌಡಯ್ಯನವರ ಕುರಿತು ಉಪನ್ಯಾಸ ನೀಡಿದರು.  ಕಾರ್ಯಕ್ರಮದಲ್ಲಿ ಗದಗ ಬೆಟಗೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕ್ಬರಸಾಬ ಬಬರ್ಜಿ, ಡಿವೈಎಸ್‌ಪಿ ವಿದ್ಯಾಧರ ನಾಯಕ, ಜಿ.ಪಂ.ಉಪಕಾರ್ಯದರ್ಶಿ ಸಿ.ಆರ್.ಮುಂಡರಗಿ, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕಿ ಶ್ರೀಮತಿ ನಂದಾ ಹಣಬರಟ್ಟಿ, ಅಂಬಿಗರ ಚೌಡಯ್ಯ ಸಮಾಜದ ಜಿಲ್ಲಾಧ್ಯಕ್ಷ ಜೆ.ಬಿ.ಗಾರವಾಡ, ಉಪಾಧ್ಯಕ್ಷ ಸಿ.ಪಿ.ಬಾರಕೇರ, ತಾಲೂಕಾಧ್ಯಕ್ಷ ಡಾ.ಗಣೇಶ ಸುಲ್ತಾನಪುರ, ಪ್ರಮುಖರಾದ ಶ್ರೀಮತಿ ಯಶೋಧಾ ಜಾಲಗಾರ, ಶಕುಂತಲಾ ಜಕನೂರ, ಪ್ರೇಮಾ ಮನಗೂಳಿ, ಕೀರ್ತಿ ಜಕನೂರ, ಪ್ರಕಾಶ ಪೂಜಾರ, ಕೆ.ಎನ್.ಸುಣಗಾರ, ಮಂಜುನಾಥ ಸುಣಗಾರ, ಸುಭಾಸ ಕದಡಿ, ಮಾಲತೇಶ ಬಾರ್ಕಿ, ಮಾರುತಿ ಕೌದಿ, ಚಂದ್ರಶೇಖರ ಅಂಬಿಗೇರ, ವಿವಿಧ ಇಲಾಖೆಯ ಅಧಿಕಾರಿಗಳು, ಸಮಾಜದ ಪ್ರಮುಖರು, ಗಣ್ಯರು, ಹಿರಿಯರು ಹಾಜರಿದ್ದರು. ನಾಡಗೀತೆಯೊಂದಿಗೆ ಪ್ರಾರಂಭವಾದ ಕಾರ್ಯಕ್ರಮದಲ್ಲಿ ಬಾಹುಬಲಿ ಜೈನರ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ