Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

NDA ಅಭ್ಯರ್ಥಿಗಳಿಂದ ನಿರ್ಮಲಾನಂದ ಶ್ರೀ ಭೇಟಿ: ಕಾಂಗ್ರೆಸ್ 'ಒಕ್ಕಲಿಗ' ಅಸ್ತ್ರಕ್ಕೆ BJP ಟಕ್ಕರ್

ಬೆಂಗಳೂರು,ಏಪ್ರಿಲ್​ 11: ಲೋಕಸಭೆ ಚುನಾವಣೆ 2024 ಕಣ ದಿನಕಳದಂತೆ ರಂಗೇರಿದ್ದು, ರಾಜಕೀಯ ಪಕ್ಷಗಳ ಏಟು-ಎದಿರೇಟು ಪ್ರಹಸನ ಎಗ್ಗಿಲ್ಲದೇ ನಡೆಯುತ್ತಿದೆ.

ಇದಕ್ಕೆ ಇಂಬು ನೀಡುವಂತೆ ಸಿಎಂ ಸಿದ್ದರಾಮಯ್ಯ ಪ್ರಯೋಗಿಸಿದ್ದ ಒಕ್ಕಲಿಗ ಅಸ್ತ್ರಕ್ಕೆ ತಿರುಗೇಟು ನೀಡಿರುವ ಬಿಜೆಪಿ ಇದೀಗ ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿ ಎನ್ ಡಿಎ ಒಕ್ಕೂಟ ತನ್ನ ಎಲ್ಲ ಕರ್ನಾಟಕದ ಅಭ್ಯರ್ಥಿಗಳನ್ನು ಒಕ್ಕಲಿಗ ಒಕ್ಕಲಿಗ ಮಠಾಧೀಶರಾದ ಆದಿಚುಂಚನಗಿರಿ ಶ್ರೀಗಳನ್ನು ಭೇಟಿ ಮಾಡಿಸುವ ಮೂಲಕ ಪ್ರತಿದಾಳ ಉರುಳಿಸಿದೆ.

ಮೊನ್ನೆ ಮೊನ್ನೆಯಷ್ಟೇ ಮೈಸೂರಿನಲ್ಲಿ ಮಾತನಾಡಿದ್ದ ಸಿಎಂ ಸಿದ್ದರಾಮಯ್ಯ, ಒಕ್ಕಲಿಗ ಪ್ರತಾಪ್ ಸಿಂಹ ಅವರಿಗೆ ಬಿಜೆಪಿ ಟಿಕೆಟ್​ ತಪ್ಪಿಸಿ ಅರಸು ಮನೆತನಕ್ಕೆ ಟಿಕೆಟ್​ ಕೊಟ್ಟಿದ್ದಾರೆ. ನಾವು ಒಕ್ಕಲಿಗರಾದ ಎಂ.ಲಕ್ಷ್ಮಣ್​ಗೆ ಟಿಕೆಟ್​ ಕೊಟ್ಟಿದ್ದೇವೆ ಎಂದಿದ್ದರು. ಇದೇ ದಾಳಕ್ಕೆ ಪ್ರತಿಯಾಗಿ ಇದೀಗ ಬಿಜೆಪಿ ಕೂಡ ಪ್ರತಿದಾಳ ಉರುಳಿಸಿದೆ. ಬೆಂಗಳೂರಿನ ವಿಜಯನಗರದಲ್ಲಿರುವ ಆದಿಚುಂಚನಗಿರಿ ಶಾಖಾ ಮಠಕ್ಕೆ ಮೈತ್ರಿ ಒಕ್ಕಲಿಗ ನಾಯಕರು ಭೇಟಿ ನೀಡುವ ಮೂಲಕ ಒಗ್ಗಟ್ಟು-ಶಕ್ತಿ ಪ್ರದರ್ಶಿಸಿದ್ದಾರೆ.

ವಿಪಕ್ಷ ನಾಯಕ ಆರ್.ಅಶೋಕ್, ಅಶ್ವತ್ಥ್​ ನಾರಾಯಣ, ಡಾ.ಸಿ.ಎನ್.ಮಂಜುನಾಥ್, ಕುಮಾರಸ್ವಾಮಿ ಜೊತೆಗೆ ಯದುವೀರ್ ಒಡೆಯರ್ ಸಹ ಮಠಕ್ಕೆ ಭೇಟಿ ಶ್ರೀಗಳ ಆಶೀರ್ವಾದ ಪಡೆದರು.

ಜೆಡಿಎಸ್ ನಾಯಕ ಮತ್ತು ಮಂಡ್ಯ ಎನ್‌ಡಿಎ ಮೈತ್ರಿ ಅಭ್ಯರ್ಥಿ ಎಚ್ ಡಿ ಕುಮಾರಸ್ವಾಮಿ, ತುಮಕೂರು ಬಿಜೆಪಿ ಅಭ್ಯರ್ಥಿ ವಿ ಸೋಮಣ್ಣ, ಬೆಂಗಳೂರು ಉತ್ತರ ಬಿಜೆಪಿ ಅಭ್ಯರ್ಥಿ ಶೋಭಾ ಕರಂದ್ಲಾಜೆ, ಕೋಲಾರ ಎನ್‌ಡಿಎ ಅಭ್ಯರ್ಥಿ ಮಲ್ಲೇಶ್ ಬಾಬು, ಬೆಂಗಳೂರು ದಕ್ಷಿಣ ಬಿಜೆಪಿ ಅಭ್ಯರ್ಥಿ ತೇಜಸ್ವಿ ಸೂರ್ಯ, ಬೆಂಗಳೂರು ಗ್ರಾಮಾಂತರ ಬಿಜೆಪಿ ಅಭ್ಯರ್ಥಿ ಡಾ.ಸಿಎನ್ ಮಂಜುನಾಥ್ ಮತ್ತು ಬೆಂಗಳೂರು ಕೇಂದ್ರ ಬಿಜೆಪಿ ಅಭ್ಯರ್ಥಿ. ಪಿ.ಸಿ.ಮೋಹನ್ ಶ್ರೀಗಳನ್ನು ಸನ್ಮಾನಿಸಿ ಆಶೀರ್ವಾದ ಪಡೆದರು.

ಈ ವೇಳೆ ಮಾತನಾಡಿದ ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ, 'ಯುಗಾದಿ ಹಬ್ಬದ ನಂತರ ಹೊಸ ವರ್ಷದ ಮೊದಲ ದಿನವಾಗಿದ್ದು, ಮೊದಲ ಹಂತದಲ್ಲಿ ಚುನಾವಣೆ ಎದುರಿಸುತ್ತಿರುವ ಕರ್ನಾಟಕದ 14 ಅಭ್ಯರ್ಥಿಗಳು ಶ್ರೀಗಳ ಆಶೀರ್ವಾದ ಪಡೆಯಲು ಇಲ್ಲಿಗೆ ಬಂದಿದ್ದೇವೆ ಎಂದು ಹೇಳಿದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ