ಈಗಾಗಲೇ ಕಬಿನಿಯಿಂದ 70 ಸಾವಿರ ಕ್ಯೂಸೆಕ್ ಹೊರಹರಿವಿದ್ದು ಹೊಗೆನಕಲ್ನಲ್ಲಿ ಕಾವೇರಿ ರಭಸದಿಂದ ಹರಿಯುತ್ತಿದೆ. ಅಪಾಯಕಾರಿ ಮಟ್ಟದಲ್ಲಿ ನೀರು ಹರಿಯುತ್ತಿರುವುದರಿಂದ ಅರಣ್ಯ ಇಲಾಖೆ ಈ ಕ್ರಮ ಕೈಗೊಂಡಿದೆ. ನೀರಿನ ಹರಿವು ಕಡಿಮೆಯಾಗುವ ತನಕ ಹೊಗೆನಕಲ್ಗೆ ಪ್ರವಾಸಿಗರಿಗೆ ಪ್ರವೇಶ ಇರುವುದಿಲ್ಲ. ತಾತ್ಕಾಲಿಕ ನಿರ್ಬಂಧ ಇದ್ದು ಅದಾದ ಬಳಿಕ ಮುಂದಿನ ಕ್ರಮ ಕೈಗೊಳ್ಳುತ್ತೇವೆ ಎಂದು ಹೊಗೆನಕಲ್ ಆರ್ಎಫ್ಒ ಸಂಪತ್ ಪಟೇಲ್ ತಿಳಿಸಿದ್ದಾರೆ.
ಕರ್ನಾಟಕ, ತಮಿಳುನಾಡು ಎರಡೂ ರಾಜ್ಯದ ಸಾವಿರಾರು ಪ್ರವಾಸಿಗರು ನಿತ್ಯ ಭೇಟಿ ಕೊಡುವ ಜನಪ್ರಿಯ ಜಲಪಾತ ಇದಾಗಿದ್ದು, ಕಳೆದ 4 ದಿನದಿಂದ ತಮಿಳುನಾಡು ಭಾಗದಲ್ಲಿ ಬೋಟಿಂಗ್, ಪ್ರವಾಸಿಗರಿಗೆ ನಿರ್ಬಂಧ ಹೇರಿದೆ. ಜು.20 ರಿಂದ ಕರ್ನಾಟಕದ ಭಾಗದಲ್ಲೂ ಪ್ರವಾಸಿಗರಿಗೆ ನಿರ್ಬಂಧ ಇರಲಿದೆ.