Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕಾರ್ಖಾನೆ ಸ್ಥಾಪಿಸಿ ಇಲ್ಲ ನಮ್ಮ ಜಮೀನು ನಮಗೆ ಕೊಡಿ: ರೈತ ಸಂಘಗಳ ಪತ್ರ ಚಳುವಳಿ

ಬಳ್ಳಾರಿ.ಜೂನ್.25 ಕಳೆದ 14 ವರ್ಷಗಳ ಹಿಂದೆ ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕಿನ ಮತ್ತು ಕುಡುತಿನಿ ಪ್ರದೇಶದಲ್ಲಿ ಕೈಗಾರಿಕೆಗಳನ್ನು ಸ್ಥಾಪಿಸಲು ಆರ್ಷಲ್ ಮಿತ್ತಲ್, ಉತ್ತ್ತಮ್ ಗಾಲ್ವಾ (ಬ್ರಾಹ್ಮಣಿ) ಏನ್.ಎಂ.ಡಿ.ಸಿ ಕಂಪನಿಗಳು ಕರ್ನಾಟಕ ರಾಜ್ಯ ಸರ್ಕಾರದ ಕೆ.ಐ.ಡಿ.ಬಿ ಮುಖಾಂತರ ಬಲವಂತವಾಗಿ ಮೋಸದ ಭೂ ಬೆಲೆಯನ್ನು ನೀಡಿ ಭೂಮಿಯನ್ನು ಖರೀದಿಸಿ ರೈತರಿಗೆ ಆನ್ಯಾಯ ಮಾಡಿದ್ದಾರೆ.


ನ್ಯಾಯಯುತವಾದ ಭೂ ಬೆಲೆಯನ್ನು ರೈತರಿಗೆ ನೀಡಬೇಕು ಆಥÀವಾ ಕಾರ್ಖಾನೆಗಳನ್ನು ಸ್ಥಾಪಿಸಿ ಭೂಮಿ ನೀಡಿದ ರೈತ ಕುಟುಂಬಗಳ ಸದಸ್ಯರಿಗೆ ಉದ್ಯೋಗ ನೀಡಬೇಕು ಎಂದು ಕಳದ 555 ದಿನಗಳಿಂದ ಹೋರಾಟ ನಡಿಸುತ್ತಿದ್ದೇವೆ, ಆದರೆ ಇಲ್ಲಿಯವರೆಗೆ ಸರ್ಕಾರ ಹುಸಿ ಭರವಸೆಗಳನ್ನು ನೀಡಿ ಕಾಲಹರಣ ಮಾಡುತ್ತಿದೆ, ಬಳ್ಳಾರಿ ಜಿಲ್ಲಾಧಿಕಾರಿಗಳಿಗೆ ಮತ್ತು ಉಸ್ತುವಾರಿ ಸಚಿವರಿಗೆ ಹಲವಾರು ಸಲ ಮನವಿ ನೀಡದರೂ ಸಹ ಯಾರೂ ಕೂಡ ನಮಗೆ ನ್ಯಾಯ ಕೊಡಿಸಲು ಮುಂದಾಗಿಲ್ಲ, ಭೂಮಿಯನ್ನು ಕಳೆದುಕೊಂಡ ನಾವು ಸಂತ್ರಸ್ತರಾಗಿದ್ದೇವೆ, ಆದಷ್ಟು ಬೇಗ ನಮಗೆ ಪುನರ್ವಸತಿ ಕಲ್ಪಿಸಬೇಕೆಂದು ರೈತರು ಒತ್ತಾಯಿಸಿದರು.


ಅವರು ಇಂದು ನಗರದ ಮುಖ್ಯ ಅಂಚೆ ಕಛೇರಿಯ ಅಧಿಕಾರಿಗಳಾದ ನಾಗರಾಜ್ ರವರ ಮೂಲಕ ರಾಜ್ಯ ಉಚ್ಚ ನ್ಯಾಯಾಲಯದ ನ್ಯಾಯಾಧೀಶರಿಗೆ ಮನವಿಯನ್ನು ನೀಡಿ ಒತ್ತಾಯಿಸಿ ಮಾತನಾಡಿ, ಕರ್ನಾಟಕ ರಾಜ್ಯ ಉಚ್ಚ ನ್ಯಾಯಾಲಯ ನ್ಯಾಯಾದಿಶರಿಗೆ ಪತ್ರ ಚಳುವಳಿ ಮಾಡಲು ತೀರ್ಮಾನಿಸಿದ್ದೇವೆ ಎಂದು ರೈತ ಮುಖಂಡರು ತಿಳಿಸಿದರು.


ಎಚ್ ಆರ್ ಗವಿಪ್ಪ ವೃತ್ತದಿಂದ ಬೆಳಗ್ಗೆ 11 ಗಂಟೆಗೆ ಮೆರವಣಿಗೆ ಮೂಲಕ ಮುಖ್ಯ ಅಂಚೆ ಕಚೇರಿ ಯಲ್ಲಿ ಪೋಸ್ಟ್ ಮಾಡಿದರು. ಈ ಪತ್ರ ಚಳುವಳಿಯಲ್ಲಿ ಕರ್ನಾಟಕ ಪ್ರಾಂತ ರೈತ ಸಂಘ (ಏPಖS )ಸೆಂಟರ್ ಆಫ್ ಇಂಡಿಯನ್ ಟ್ರೇಡ್ ಯೂನಿಯನ್ಸ್ (ಅIಖಿU ) ಜಿಲ್ಲಾ ಸಮಿತಿ ಪದಾಧಿಕಾರಿಗಳು ಭಾಗವಹಿಸಿ ಬೆಂಬಲ ನೀಡಿದರು. ನಂತರ ಅಂಚೆ ಕಚೇರಿ ಮುಖ್ಯ್ ಅಧಿಕಾರಿಗಳು ಬಂದು ಮನವಿ ಪತ್ರವನ್ನು ಸ್ವೀಕರಿಸಿದರು.


ಈ ಸಂದರ್ಭದಲ್ಲಿ ಜಂಗ್ಲಿ ಸಾಬ್, ಕನಕಪ್ಪ, ಗೋಪಾಲ, ಸಂಪತ್ ಕುಮಾರ್, ಭಾವಿ ಶಿವಕುಮಾರ್, ಗೋವರ್ಧನ್‌ರೆಡ್ಡಿ ವೇಣಿವೆರಾ ಪುರ, ಧರ್ಮಣ್ಣ, ಬಸವನ ಗೌಡ ಹರಿಗಿನಡೋನಿ, ಶೇಕನ್ನ, ರಂಗರಾಜು, ಬಡಿಗೇರಿ ಹುಚ್ಚಪ್ಪ, ರಾಮು, ನಳಿನಿ ಸೇರಿದಂತೆ ಹಲವಾರು ರೈತರು ರೈತ ಮುಖಂಡರು ಭಾಗವಹಿಸಿದ್ದರು
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ