Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಯಾರನ್ನೂ ರಾಜಕೀಯವಾಗಿ ಸಮಾಧಿ ಮಾಡಲು ಸಾಧ್ಯವಿಲ್ಲ: ಮೋದಿ ಅವರ ಹೇಳಿಕೆಗೆ ಸಿಎಂ ಪ್ರತಿಕ್ರಿಯೆ

ಮೈಸೂರು,11: 'ಯಾರನ್ನೂ ರಾಜಕೀಯವಾಗಿ ಸಮಾಧಿ ಮಾಡಲು ಸಾಧ್ಯವಿಲ್ಲ' ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ವಿರೋಧ ಪಕ್ಷಗಳು ನನ್ನನ್ನು ಸಮಾಧಿ ಮಾಡಲು ಮುಂದಾಗಿವೆ ಎಂಬ ಪ್ರಧಾನಿ ನರೇಂದ್ರ ಮೋದಿ ಅವರ ಹೇಳಿಕೆಗೆ ಸಿಎಂ ಈ ರೀತಿಯಾಗಿ ಪ್ರತಿಕ್ರಿಯಿಸಿದರು.


ಇಂದು ಮೈಸೂರಿನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಮುಖ್ಯಮಂತ್ರಿ, ಪ್ರಧಾನಿ ನರೇಂದ್ರ ಮೋದಿ ಅವರು ಚುನಾವಣಾ ಪ್ರಚಾರ ಭಾಷಣದಲ್ಲಿ ವಿರೋಧ ಪಕ್ಷಗಳು ನನ್ನನ್ನು ಸಮಾಧಿ ಮಾಡಲು ಮುಂದಾಗಿದ್ದಾರೆ ಎಂದು ಹೇಳಿದ್ದಾರೆ. ಯಾರನ್ನೂ ರಾಜಕೀಯವಾಗಿ ಸಮಾಧಿ ಮಾಡಲು ಸಾಧ್ಯವಿಲ್ಲ. ರಾಜಕೀಯವಾಗಿ ವಿರೋಧ ಮಾಡ್ತಾರೆ. ಪ್ರಧಾನಿ ಕಳೆದ 10 ವರ್ಷಗಳಿಂದ ಬಡವರ ಪರವಾಗಿ ಕೆಲಸ ಮಾಡಿಲ್ಲ. ಕೊಟ್ಟ ಭರವಸೆಗಳನ್ನು ಈಡೇರಿಸಿಲ್ಲ. ದೇಶದಲ್ಲಿ ಪ್ರಧಾನ ಮಂತ್ರಿ ಅವರನ್ನು ಸೋಲಿಸಬೇಕು ಎಂಬುದೇ ವಿರೋಧ ಪಕ್ಷದವರ ಉದ್ದೇಶ.


ಕಳೆದ ಬಾರಿ ಪ್ರಧಾನಿಗೆ ಗೆಲ್ಲುವ ವಿಶ್ವಾಸವಿತ್ತು. ಆದರೆ ಈ ಬಾರಿ ಸೋಲಿನ ಭಯದಿಂದ ಹತಾಶರಾಗಿ ಮಾತನಾಡುತ್ತಿದ್ದಾರೆ. ಮೋದಿ ಅವರು ಸುಳ್ಳಿನ ಸರದಾರ ಎಂಬುದು ಜನರಿಗೆ ಗೊತ್ತಾಗಿದೆ. ಅವರ ಬಣ್ಣ ದೇಶದ ಜನರಿಗೆ ಗೊತ್ತಾಗಿದೆ. ಈ ಬಾರಿ ಸೋಲಿನ ಹತಾಶೆಯಿಂದ ಈ ರೀತಿ ಮಾತನಾಡುತ್ತಿದ್ದಾರೆ. ಇವರ ಭಾವಾನಾತ್ಮಕ ಮಾತುಗಳು ಜನರಿಗೆ ಗೊತ್ತಾಗಿದೆ. ಮೇಲಕ್ಕೆ ಏರಿದವನು ಕೆಳಗೆ ಇಳಿಯಲೇಬೇಕು ಎಂದು ಪ್ರಧಾನಿ ಹೇಳಿಕೆಗೆ ಮುಖ್ಯಮಂತ್ರಿಗಳು ನೀಡಿದರು.


ಬಿಎಸ್​ವೈಗೆ ನೈತಿಕತೆ ಇಲ್ಲ: ರಾಜ್ಯದಲ್ಲಿ ಬರಗಾಲವಿದ್ದು, ರೈತರು ಸಂಕಷ್ಟದಲ್ಲಿ ಇದ್ದಾರೆ. ರೈತರ ಸಾಲಮನ್ನಾ ಮಾಡಬೇಕು ಎಂಬ ಬಿ.ಎಸ್ ಯಡಿಯೂರಪ್ಪ ಹೇಳಿಕೆಗೆ ತಿರುಗೇಟು ನೀಡಿದ ಸಿಎಂ, ನಾವು ಹಿಂದೆ ಯಡಿಯೂರಪ್ಪನವರನ್ನು ಸಾಲಮನ್ನಾ ಮಾಡಿ ಎಂದು ಕೇಳಿದಾಗ, ನಮ್ಮ ಬಳಿ ಪ್ರಿಂಟಿಂಗ್ ಮಿಷನ್ ಇಲ್ಲ ಎಂದು ಹೇಳಿದ್ದರು. ಈಗ ರೈತರ ಸಾಲ ಮನ್ನಾ ಮಾಡಿ ಎಂದು ಹೇಳಲು ಅವರಿಗೆ ಯಾವುದೇ ನೈತಿಕತೆ ಇಲ್ಲ ಎಂದು ಅಸಮಾಧಾನ ಹೊರಹಾಕಿದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ