Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಯಾರನ್ನೂ ರಾಜಕೀಯವಾಗಿ ಸಮಾಧಿ ಮಾಡಲು ಸಾಧ್ಯವಿಲ್ಲ: ಮೋದಿ ಅವರ ಹೇಳಿಕೆಗೆ ಸಿಎಂ ಪ್ರತಿಕ್ರಿಯೆ

ಮೈಸೂರು,11: 'ಯಾರನ್ನೂ ರಾಜಕೀಯವಾಗಿ ಸಮಾಧಿ ಮಾಡಲು ಸಾಧ್ಯವಿಲ್ಲ' ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ವಿರೋಧ ಪಕ್ಷಗಳು ನನ್ನನ್ನು ಸಮಾಧಿ ಮಾಡಲು ಮುಂದಾಗಿವೆ ಎಂಬ ಪ್ರಧಾನಿ ನರೇಂದ್ರ ಮೋದಿ ಅವರ ಹೇಳಿಕೆಗೆ ಸಿಎಂ ಈ ರೀತಿಯಾಗಿ ಪ್ರತಿಕ್ರಿಯಿಸಿದರು.


ಇಂದು ಮೈಸೂರಿನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಮುಖ್ಯಮಂತ್ರಿ, ಪ್ರಧಾನಿ ನರೇಂದ್ರ ಮೋದಿ ಅವರು ಚುನಾವಣಾ ಪ್ರಚಾರ ಭಾಷಣದಲ್ಲಿ ವಿರೋಧ ಪಕ್ಷಗಳು ನನ್ನನ್ನು ಸಮಾಧಿ ಮಾಡಲು ಮುಂದಾಗಿದ್ದಾರೆ ಎಂದು ಹೇಳಿದ್ದಾರೆ. ಯಾರನ್ನೂ ರಾಜಕೀಯವಾಗಿ ಸಮಾಧಿ ಮಾಡಲು ಸಾಧ್ಯವಿಲ್ಲ. ರಾಜಕೀಯವಾಗಿ ವಿರೋಧ ಮಾಡ್ತಾರೆ. ಪ್ರಧಾನಿ ಕಳೆದ 10 ವರ್ಷಗಳಿಂದ ಬಡವರ ಪರವಾಗಿ ಕೆಲಸ ಮಾಡಿಲ್ಲ. ಕೊಟ್ಟ ಭರವಸೆಗಳನ್ನು ಈಡೇರಿಸಿಲ್ಲ. ದೇಶದಲ್ಲಿ ಪ್ರಧಾನ ಮಂತ್ರಿ ಅವರನ್ನು ಸೋಲಿಸಬೇಕು ಎಂಬುದೇ ವಿರೋಧ ಪಕ್ಷದವರ ಉದ್ದೇಶ.


ಕಳೆದ ಬಾರಿ ಪ್ರಧಾನಿಗೆ ಗೆಲ್ಲುವ ವಿಶ್ವಾಸವಿತ್ತು. ಆದರೆ ಈ ಬಾರಿ ಸೋಲಿನ ಭಯದಿಂದ ಹತಾಶರಾಗಿ ಮಾತನಾಡುತ್ತಿದ್ದಾರೆ. ಮೋದಿ ಅವರು ಸುಳ್ಳಿನ ಸರದಾರ ಎಂಬುದು ಜನರಿಗೆ ಗೊತ್ತಾಗಿದೆ. ಅವರ ಬಣ್ಣ ದೇಶದ ಜನರಿಗೆ ಗೊತ್ತಾಗಿದೆ. ಈ ಬಾರಿ ಸೋಲಿನ ಹತಾಶೆಯಿಂದ ಈ ರೀತಿ ಮಾತನಾಡುತ್ತಿದ್ದಾರೆ. ಇವರ ಭಾವಾನಾತ್ಮಕ ಮಾತುಗಳು ಜನರಿಗೆ ಗೊತ್ತಾಗಿದೆ. ಮೇಲಕ್ಕೆ ಏರಿದವನು ಕೆಳಗೆ ಇಳಿಯಲೇಬೇಕು ಎಂದು ಪ್ರಧಾನಿ ಹೇಳಿಕೆಗೆ ಮುಖ್ಯಮಂತ್ರಿಗಳು ನೀಡಿದರು.

Advertisement

ಬಿಎಸ್​ವೈಗೆ ನೈತಿಕತೆ ಇಲ್ಲ: ರಾಜ್ಯದಲ್ಲಿ ಬರಗಾಲವಿದ್ದು, ರೈತರು ಸಂಕಷ್ಟದಲ್ಲಿ ಇದ್ದಾರೆ. ರೈತರ ಸಾಲಮನ್ನಾ ಮಾಡಬೇಕು ಎಂಬ ಬಿ.ಎಸ್ ಯಡಿಯೂರಪ್ಪ ಹೇಳಿಕೆಗೆ ತಿರುಗೇಟು ನೀಡಿದ ಸಿಎಂ, ನಾವು ಹಿಂದೆ ಯಡಿಯೂರಪ್ಪನವರನ್ನು ಸಾಲಮನ್ನಾ ಮಾಡಿ ಎಂದು ಕೇಳಿದಾಗ, ನಮ್ಮ ಬಳಿ ಪ್ರಿಂಟಿಂಗ್ ಮಿಷನ್ ಇಲ್ಲ ಎಂದು ಹೇಳಿದ್ದರು. ಈಗ ರೈತರ ಸಾಲ ಮನ್ನಾ ಮಾಡಿ ಎಂದು ಹೇಳಲು ಅವರಿಗೆ ಯಾವುದೇ ನೈತಿಕತೆ ಇಲ್ಲ ಎಂದು ಅಸಮಾಧಾನ ಹೊರಹಾಕಿದರು.

Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ನದಾಫ್-ಪಿಂಜಾರ ಸಂಘ ತಾಲೂಕ ಘಟಕದ ಕಚೇರಿ ಉದ್ಘಾಟನೆ ಟ್ರಕ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ : ಅಕ್ಕ-ತಮ್ಮ ದಾರುಣ ಸಾವುತಾಲೂಕಾ ಅಧಿಕಾರಿಗಳ ಸಾಮಾನ್ಯ ಸಭೆ; ರೈತರಿಗೆ ಬೀಜ, ಗೊಬ್ಬರ ಕೊರತೆಯಾಗದಂತೆ ನೋಡಿಕೊಳ್ಳಿ: ಬಸವರಾಜ್ ಅಡವಿಮಠ್ ಸೂಚನೆಕೊಪ್ಪಳ ಕಾರ್ಯನಿರತ ಪತ್ರಕರ್ತರ ಸಂಘದ ಸಭೆನೂತನ ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಅಭಿನಂದಿಸಿದ ಲಕ್ಷ್ಮೀ  ಹೆಬ್ಬಾಳಕರ.ಸಿದ್ದರಾಮಯ್ಯ ಭೇಟಿ ಮಾಡಿ ಧನ್ಯವಾದ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಸತ್ಕರಿಸಿದ ಯುವ ಮುಖಂಡ  ರಾಹುಲ  ಜಾರಕಿಹೊಳಿ.ಸಚಿವ ಸತೀಶ ಜಾರಕಿಹೊಳಿ, ಕೆಪಿಸಿಸಿ ಅಧ್ಯಕ್ಷ ಹರಿಪ್ರಸಾದ ಬೇಟಿ ಪರಸ್ಪರ ಶುಭ ಕೋರಿಕೆಗ್ಲೋಬಲ್ ಕ್ಯಾಪೆಬಿಲಿಟಿ ಸೆಂಟರ್‌ಗಳ ಬೆಳವಣಿಗೆಗೆ ಉತ್ತೇಜನ*ಶರಣು ಕಾರ್ಯಾಲಯ ಆರಂಭಿಸುವ ಮೂಲಕ ಬಡವರ ಕಣ್ಣಿರು ಒರೆಸುವ ಕಾರ್ಯಕ್ಕೆ ಮುಂದಾಗಿರುವುದು ಶ್ಲಾಘನೀಯ : ಬಳಗಾನೂರು ಶ್ರೀಗಳು,,*