ಈ ಬಾರಿ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಅರ್ಜಿ ಅಲ್ಲಿಸುವ ಪ್ರಕ್ರಿಯೆ ಇರುವುದಿಲ್ಲ. ಬದಲಿಗೆ ಇಲಾಖೆಯಿಂದ ರಚಿಸಲಾಗುವ ಸಲಹಾ ಸಮಿತಿ ಮತ್ತು ಉನ್ನತ ಆಯ್ಕೆ ಸಮಿತಿಗಳು ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ ಮಾಡಲಿವೆ ಎಂದು ಸಚಿವರು ತಿಳಿಸಿದ್ದಾರೆ.
70 ಮಂದಿ ಅರ್ಹ ಗಣ್ಯರಿಗೆ ಈ ವರ್ಷ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ನೀಡಲಾಗುತ್ತದೆ. ಆಯ್ಕೆ ಸಮಿತಿಯು ಅರ್ಹರ ಪಟ್ಟಿ ಸಿದ್ಧಪಡಿಸಲಿದೆ. ಈಗಾಗಲೇ ಇಲಾಖೆಗೆ ಸಲ್ಲಿಕೆಯಾಗಿರುವ ಸ್ವಯಂ ಅರ್ಜಿಗಳ ಬಗ್ಗೆ ನಿರ್ಧಾರವನ್ನು ಆಯ್ಕೆ ಸಮಿತಿಯೇ ಕೈಗೊಳ್ಳಲಿದೆ ಎಂದು ಸಚಿವರು ತಿಳಿಸಿದ್ದಾರೆ. ಕನ್ನಡ ರಾಜ್ಯೋತ್ಸವ ಪ್ರಶಸ್ತಿಯು 5 ಲಕ್ಷ ರೂ. ನಗದು ಬಹುಮಾನ, 25 ಗ್ರಾಂ ಚಿನ್ನದ ಪದಕ, ಶಾಲು, ಪ್ರಶಸ್ತಿ ಪತ್ರ ಮತ್ತು ಸ್ಮರಣೆಗೆಗಳನ್ನು ಒಳಗೊಂಡಿರಲಿದೆ.