LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News | Districts Bagalkot

ನೂಲಿಯ ಚಂದಯ್ಯ, ನಾರಾಯಣಗುರು ಜಯಂತಿ: ಪೂರ್ವಭಾವಿ ಸಭೆ

ಮುದ್ದೇಬಿಹಾಳ: ಆ.28ರಂದು ನೂಲಿಯ ಚಂದಯ್ಯನವರ ಹಾಗೂ  ಬ್ರಹ್ಮಶ್ರೀ ನಾರಾಯಣಗುರುಗಳ ಜಯಂತೋತ್ಸವ ಆಚರಣೆ ಹಿನ್ನೆಲೆಯಲ್ಲಿ ಸೋಮವಾರ ತಹಸೀಲ್ದಾರ್ ಕಚೇರಿಯಲ್ಲಿ ಪೂರ್ವಭಾವಿ ಸಭೆ ನಡೆಯಿತು.
ಪಟ್ಟಣದಲ್ಲಿರುವ ನೂಲಿಯ ಚಂದಯ್ಯನವರ ಹಾಗೂ ಬ್ರಹ್ಮಶ್ರೀ ನಾರಾಯಣಗುರುಗಳ ವೃತ್ತದಲ್ಲಿ ಸಮಾಜದ ವತಿಯಿಂದ ನಡೆಯುವ ಜಯಂತಿ ಕಾರ್ಯಕ್ರಮದಲ್ಲಿ ತಾಲೂಕು ಮಟ್ಟದ ಎಲ್ಲ ಅಧಿಕಾರಿಗಳು ಭಾಗವಹಿಸಬೇಕು. ಬಳಿಕ ತಹಸೀಲ್ದಾರ್ ಕಚೇರಿಯಲ್ಲಿ ತಾಲೂಕು ಆಡಳಿತದ ವತಿಯಿಂದ ಜಯಂತಿ ಆಚರಿಸಲು ಸಭೆಯಲ್ಲಿ ನಿರ್ಧರಿಸಲಾಯಿತು. ಜಯಂತಿ ದಿನದಂದು ಪಟ್ಟಣದ ಸ್ವಚ್ಛತೆಗೆ ಪುರಸಭೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಸೂಚಿಸಲಾಯಿತು.
ಕಂದಾಯ ಇಲಾಖೆಯ ವಿರುದ್ಧ ಆಕ್ರೋಶ : ತಾಲೂಕು ಆಡಳಿತದ ವತಿಯಿಂದ ನೂಲಿಯ ಚಂದಯ್ಯನವರ ಜಯಂತಿಗೆ ಕಳೆದ ನಾಲ್ಕು ವರ್ಷಗಳಿಂದ ಆಮಂತ್ರಣ ಪತ್ರಿಕೆಗಳನ್ನು ಮುದ್ರಿಸುತ್ತಿಲ್ಲ. ಈ ಕುರಿತು ಕಂದಾಯ ಇಲಾಖೆಯ ಬಿ.ಎಸ್. ಮುದ್ದೇಬಿಹಾಳ ಅವರನ್ನು ಪ್ರಶ್ನಿಸಿದಾಗ ಸರ್ಕಾರದಿಂದ ಯಾವುದೇ ಅನುದಾನ ಬರುತ್ತಿಲ್ಲ ಎಂದು ಹೇಳುತ್ತಾರೆ. ಸಣ್ಣ ಸಮುದಾಯದ ಗುರುಗಳ ಜಯಂತಿಗೆ ಮಾತ್ರ ಸರ್ಕಾರ ಅನುದಾನ ನೀಡುತ್ತಿಲ್ಲವೇ ಎಂದು ಪ್ರಶ್ನಿಸಿದ ತಾಲೂಕು ಭಜಂತ್ರಿ ಸಮಾಜದ ಅಧ್ಯಕ್ಷ ನಾಗಪ್ಪ ಭಜಂತ್ರಿ, ಕಂದಾಯ ಇಲಾಖೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಪ್ರತಿಭಾ ಪುರಸ್ಕಾರಕ್ಕೆ ಸಲಹೆ : ನೂಲಿಯ ಚಂದಯ್ಯನವರ ಹಾಗೂ ಬ್ರಹ್ಮಶ್ರೀ ನಾರಾಯಣಗುರುಗಳ ಜಯಂತಿ ಸಂದರ್ಭದಲ್ಲಿ ಎರಡೂ ಸಮಾಜಗಳ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಗುರುತಿಸಿ, ಅತಿಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ತಾಲೂಕು ಆಡಳಿತದ ವತಿಯಿಂದ ಪ್ರತಿಭಾ ಪ್ರಮಾಣಪತ್ರ ನೀಡಿ ಪ್ರೋತ್ಸಾಹಿಸಬೇಕು ಎಂದು ಸಭೆಯಲ್ಲಿ ಸಲಹೆ ನೀಡಲಾಯಿತು.
ಸಭೆಯಲ್ಲಿ ಬ್ರಹ್ಮಶ್ರೀ ನಾರಾಯಣಗುರು ಸಮಾಜದ ತಾಲೂಕು ಅಧ್ಯಕ್ಷ ಎ. ಗಣೇಶ, ಟಿ. ವಿಜಯಭಾಸ್ಕರ, ರವಿ ಭಜಂತ್ರಿ, ತಾಲೂಕು ಬಿಸಿಯೂಟದ ಅಧಿಕಾರಿ ಎಂ.ಎಂ. ಬೆಳಗಲ್ಲ, ಪುರಸಭೆಯ ಮಹಾಂತೇಶ ಕಟ್ಟಿಮನಿ, ತೋಟಗಾರಿಕೆ ಇಲಾಖೆಯ ವಿನೋದ ಬಿರಾದಾರ, ಸಮಾಜ ಕಲ್ಯಾಣ ಇಲಾಖೆಯ ಎಸ್.ಬಿ. ಕಟ್ಟಿಮನಿ, ಕಾರ್ಮಿಕ ಇಲಾಖೆಯ ಎಲ್.ಡಿ. ಮುಲ್ಲಾ ಸೇರಿದಂತೆ ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
 *ಕಾರ್ಯಕ್ರಮದಲ್ಲಿ ಡಾ. ರಾಮಕೃಷ್ಣ ರೆಡ್ಡಿಯವರಿಗೆ ಗೌರವ, ಸನ್ಮಾನ,,* 15 ವರ್ಷಗಳ ಬಳಿಕ ಮಾರಿಹಾಳದಲ್ಲಿ ಮಹಾಲಕ್ಷ್ಮಿ ಜಾತ್ರೆ: ಜಾತ್ರೆಯ ಸಿದ್ಧತೆ, ಭಕ್ತರ ಅನುಕೂಲಕ್ಕೆ ಅಗತ್ಯ ವ್ಯವಸ್ಥೆ ಕುರಿತು ಲಕ್ಷ್ಮೀ ಹೆಬ್ಬಾಳಕರ್ ಸಭೆನಾಳೆ ಶ್ರೀ ದ್ಯಾಮವ್ವ, ದುರಗಮ್ಮ ದೇವಿಯರ ಅದ್ದೂರಿ ಮೇರವಣಿಗೆ: ರಾಜು ಖಾನಪ್ಪನವರಮಾಧ್ಯಮ ಮಿತ್ರರು ಕ್ರೀಡೆಯಲ್ಲಿ ಭಾಗವಹಿಸಿದ್ದು ಉತ್ತಮ ಬೆಳವಣಿಗೆಕೊಪ್ಪಳ ತಾ.ಪಂ. ಇಒ ಎತ್ತಂಗಡಿಗೆ ಆಗ್ರಹಿಸಿ ಆ. 31ಕ್ಕೆ ಬೃಹತ್ ಪ್ರತಿಭಟನೆಕರಡು ಮತದಾರರ ಪಟ್ಟಿ ಪ್ರಕಟ: ಜಿಲ್ಲಾಧಿಕಾರಿ ಡಾ. ಸುರೇಶ ಬಿ. ಇಟ್ನಾಳಸಪ್ಟೆಂಬರ್ 23 ರವರೆಗೆ ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಸಲು ಅವಕಾಶ: ಜಿಲ್ಲೆಯಲ್ಲಿ 13,53,946 ಮತದಾರರ ಕರಡು ಪಟ್ಟಿ ಪ್ರಕಟ30ರಂದು  ಶ್ರೀ ಬಾಳುಮಾಮಾ ದೇವರ ಮೂರ್ತಿ ಪ್ರತಿಷ್ಠಾಪನೆ ಹಾಗೂ ಕಳಸಾರೋಹಣ ನಿತ್ಯ ನೇಮ ಉಪಾಷಣೆಯಿಂದ ನೆಮ್ಮದಿ ಜೀವನ.....ಪ್ರಭುಜಿ   ಮಹಾರಾಜ.ಮಳೆ ದೇವರು ಕೊಡುತ್ತಾನೆ, ಅದರ ಹಂಚಿಕೆ ಸರ್ಕಾರ ಮಾಡಬೇಕು  : ಮಹಾಂತೇಶ ದೊಡ್ಡಗೌಡರ