LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಅಭಿವೃದ್ಧಿಗಾಗಿ ಉತ್ತರ ಕರ್ನಾಟಕದ ಶಾಸಕರು ಭಿಕ್ಷುಕರ ತರ ಬೇಡಬೇಕು: ಶಾಸಕ ರಾಜು ಕಾಗೆ

ಬೆಳಗಾವಿ: ಉತ್ತರ ಕರ್ನಾಟಕದ ಶಾಸಕರು ಬೆಂಗಳೂರಿಗೆ ಬಂದು ಭಿಕ್ಷುಕರ ತರ ಭಿಕ್ಷೆ ಬೇಡಿಕೊಳ್ಳಬೇಕು. ಕೊನೆಗೆ ಹತ್ತು, ಇಪ್ಪತ್ತು ಪೈಸೆ ಕೊಟ್ಟು ಸಮಾದಾನ ಮಾಡುತ್ತಾರೆ ಎಂದು ಆಡಳಿತ ಪಕ್ಷದ ಶಾಸಕ ರಾಜು ಕಾಗೆ ಅಸಹಾಯಕತೆ ಹೊರಹಾಕಿದರು.

ವಿಧಾನಸಭೆಯಲ್ಲಿ ಉತ್ತರ ಕರ್ನಾಟಕದ ಬಗ್ಗೆ ನಡೆದ ಚರ್ಚೆ ವೇಳೆ ಮಾತನಾಡಿದ ಅವರು, ಉತ್ತರ ಕರ್ನಾಟಕದವರು ಇಲ್ಲಿಗೆ ಬಂದು ಎಲ್ಲರ ಮುಂದೆ ಕೈಮುಗಿದು ನಿಲ್ಲಬೇಕು. ನಾನು ಈ ಬಗ್ಗೆ ಧ್ವನಿ ಎತ್ತಿದ್ದೆ. ಆದರೆ ನಾನು ನನ್ನ ಪಕ್ಷದ ವಿರುದ್ಧ ಮಾತನಾಡಿದ್ದೆ ಎಂದು ಮಾಧ್ಯಮಗಳಲ್ಲಿ ಪ್ರಸಾರ ಆಗಿತ್ತು. ನಾನು ಸರ್ಕಾರದ ವಿರುದ್ಧ ಮಾತನಾಡಿಲ್ಲ. ಅಧಿಕಾರಿಗಳು ಪಾರದರ್ಶಕತೆಯಿಂದ ಕೆಲಸ ಮಾಡಬೇಕು ಎಂದಿದ್ದೆ ಎಂದು ವಿವರಿಸಿದರು.

ಉತ್ತರ ಕರ್ನಾಟಕ ಭಾಗಕ್ಕೆ ಐದು ಸಾವಿರ ಕೋಟಿ ರೂ.‌ಕೊಡಿ:
ನಾನು ಪ್ರಧಾನಿ, ಸಿಎಂಗೆ ಪ್ರತ್ಯೇಕ ರಾಜ್ಯ ಮಾಡುವಂತೆ ಕೋರಿ ಪತ್ರ ಬರೆದಿದ್ದೆ. ಇದು ನನ್ನ ಅನಿಸಿಕೆ ಮಾತ್ರ ಆಗಿತ್ತು. ಇದಕ್ಕೆ ಕೆಲ ಸಂಘ ಸಂಸ್ಥೆಗಳು ಬೆಂಬಲಿಸಿದರು. ಕೆಲವರು ಟೀಕೆ ಮಾಡಿದರು. ಕಲ್ಯಾಣ ಕರ್ನಾಟಕದ 371ಜೆ ಯಿಂದ ನಮಗೆ ಏನೂ ಉಪಯೋಗ ಇಲ್ಲ. ಉತ್ತರ ಕರ್ನಾಟಕ ಭಾಗಕ್ಕೂ ಐದು ಸಾವಿರ ಕೋಟಿ ಕೊಡಿ ಎಂಬುದು ನನ್ನ ಮನವಿ. ಏಕೆಂದರೆ ನಮ್ಮ ಭಾಗವೂ ಹಿಂದುಳಿದಿದೆ. ನಮ್ಮಲ್ಲಿ ಅನೇಕರು ಇನ್ನೂ ಬೆಂಗಳೂರು ನೋಡಿಲ್ಲ. ಏಕೆಂದರೆ, ಸುಮಾರು 800 ಕಿ. ಮೀ. ದೂರ ಇದೆ ಎಂದರು. ಕಲ್ಯಾಣ ಕರ್ನಾಟಕ ಜೊತೆ ಜೊತೆಗೆ ಉತ್ತರ ಕರ್ನಾಟಕ ಭಾಗಕ್ಕೂ ಸುಮಾರು 5,000 ದಿಂದ 10,000 ಕೋಟಿ ರೂ. ನೀಡಬೇಕು ಎಂಬುದು ನನ್ನ ಮನವಿಯಾಗಿತು.

ಪ್ರತ್ಯೇಕ ರಾಜ್ಯಕ್ಕೆ ಆಗ್ರಹಿಸಿ ಸಾಯೋ ತನಕ ನಾನು ಹೋರಾಡುವೆ:

ರಾಜು ಕಾಗೆ ಅವರು ತಮ್ಮ ಮಾತು ಸರ್ಕಾರದ ಪರ ಅಥವಾ ವಿರುದ್ಧ ಅಲ್ಲ, ಬದಲಿಗೆ ಸತ್ಯವನ್ನು ಹೇಳುತ್ತಿದ್ದೇನೆ ಎಂದರು. 'ನಮ್ಮ ಗೋಳು ಯಾರಿಗೆ ಹೇಳಬೇಕು? ನಾನು ಏನಾದರೂ ಮಾತನಾಡಿದರೆ ಸರ್ಕಾರದ ವಿರುದ್ಧ ಮಾತನಾಡುತ್ತಿದ್ದೇನೆ ಎನ್ನುತ್ತಾರೆ. ಅದಕ್ಕೆ ನಾವು ಪ್ರತ್ಯೇಕ ರಾಜ್ಯ ಕೇಳೊದು. 'ಯಾರು ಬೇಕಾದರೂ ಬರಲಿ, ಯಾರು ಬೇಕಾದರೂ ವಿರೋಧ ಮಾಡಲಿ. ನಾನು ಪ್ರತ್ಯೇಕ ರಾಜ್ಯಕ್ಕಾಗಿ ಹೋರಾಟ ಮಾಡೇ ಮಾಡ್ತೀನಿ. ಸಾಯಲಿ ಬಿಡ್ಲಿ.... ನಾನು ಹೋರಾಟ ಮಾಡೋನೆ' ಎಂದು ಸದನದಲ್ಲಿ ನಿಂತು ಮತ್ತೊಮ್ಮೆ ಪ್ರತ್ಯೇಕ ರಾಜ್ಯದ ಬೇಡಿಕೆಯನ್ನು ಪ್ರಖರವಾಗಿ ಮಂಡಿಸಿದರು.

ಬೆಂಗಳೂರಲ್ಲಿ ಕಂದಾಯ ಕಾರ್ಯದರ್ಶಿ ಕಟಾರಿಯಾ ಅವರಿಗೆ ಮನವಿ ಕೊಡಲು ಭೇಟಿ ಮಾಡಿದ್ದೆ. ಆದರೆ ಆ ಅಧಿಕಾರಿ ನನ್ನ ಮವಿಯನ್ನು ಸ್ವೀಕರಿಸದೇ ಎದ್ದು ಹೋಗ್ತಾರೆ ಎಂದು ಆರೋಪಿಸಿದರು.

ಕಳೆದ ಬಾರಿಯ ಅಧಿವೇಶನದಲ್ಲಿ ಅವರ ವಿರುದ್ಧ ಹಕ್ಕುಚ್ಯುತಿ ಮಂಡಿಸಿದ್ದೆ. ಆದರೆ, ಇದುವರೆಗೂ ಆ ಅಧಿಕಾರಿ ವಿರುದ್ಧ ಕ್ರಮ ತೆಗೆದುಕೊಂಡಿಲ್ಲ. ಎಂದು ಶಾಸಕ ಕಾಗೆ ಆಕ್ಷೇಪಿಸಿದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್