Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಉತ್ತರ ಕೊರಿಯಾ ಕ್ಷಿಪಣಿ ಉಡಾವಣೆ ವಿಫಲವೆಂದ ದಕ್ಷಿಣ ಕೊರಿಯಾ ಮಿಲಿಟರಿ



ಸಿಯೋಲ್​: ಉತ್ತರ ಕೊರಿಯಾವು, ಕೊರಿಯನ್​ ಪೆನಿನ್ಸುಲಾದ ಪೂರ್ವ ಕರಾವಳಿಯ ಸಮುದ್ರದ ಕಡೆಗೆ ಅಜ್ಞಾತ ಬ್ಯಾಲಿಸ್ಟಿಕ್​ ಕ್ಷಿಪಣಿ ಉಡಾವಣೆ ಮಾಡಿದ್ದು, ಅದು ಬಹುತೇಕ ವಿಫಲವಾಗಿದೆ ಎಂದು ದಕ್ಷಿಣ ಕೊರಿಯಾದ ಮಿಲಿಟರಿ ಬುಧವಾರ ತಿಳಿಸಿದೆ.


ಬುಧವಾರ ಬೆಳಗ್ಗೆ 5.30ರ ಸುಮಾರಿಗೆ ಉತ್ತರ ಕೊರಿಯಾ ತನ್ನ ರಾಜಧಾನಿ ಪ್ರದೇಶದಿಂದ ಬ್ಯಾಲಿಸ್ಟಿಕ್​ ಕ್ಷಿಪಣಿಯನ್ನು ಉಡಾವಣೆ ಮಾಡಿದೆ. ಕ್ಷಿಪಣಿಯನ್ನು ಉತ್ತರ ಪೂರ್ವದ ಕರಾವಳಿ ಸಮುದ್ರದ ಕಡೆಗೆ ಉಡಾಯಿಸಲಾಗಿದೆ. ಆದರೆ ಆ ಉಡಾವಣೆ ಬುಹುತೇಕ ವಿಫಲವಾಗಿದೆ ಎಂದು ಶಂಕಿಸಲಾಗಿದೆ ಎಂದು ದಕ್ಷಿಣ ಕೊರಿಯಾ ಜಂಟಿ ಮುಖ್ಯಸ್ಥರು ತಿಳಿಸಿದ್ದಾರೆ.


ಉತ್ತರ ಕೊರಿಯಾದ ಕ್ಷಿಪಣಿ ನೆಲದ ಮೇಲೆ ಅಪ್ಪಳಿಸಿರಬಹುದು ಅಥವಾ ಗಾಳಿಯಲ್ಲಿ ಸ್ಫೋಟಗೊಂಡಿದೆಯೇ ಎನ್ನುವುದರ ಬಗ್ಗೆ ಹೆಚ್ಚಿನ ವಿವರಗಳನ್ನು ಅದು ನೀಡಿಲ್ಲ. ಆದರೆ, ಜಪಾನ್​ ರಕ್ಷಣಾ ಸಚಿವಾಲಯ, ಉತ್ತರ ಕೊರಿಯಾದ ಶಂಕಿತ ಬ್ಯಾಲಿಸ್ಟಿಕ್​ ಕ್ಷಿಪಣಿಯೊಂದನ್ನು ಪತ್ತೆ ಮಾಡಿರುವುದಾಗಿ ಬುಧವಾರ ತಿಳಿಸಿದೆ. ಈ ಕ್ಷಿಪಣಿಯು ಸುಮಾರು 100 ಕಿ.ಮೀ. ಎತ್ತರಕ್ಕೆ ಹಾಗೂ 200 ಕಿ.ಮೀಗೂ ಹೆಚ್ಚು ವ್ಯಾಪ್ತಿಯವರೆಗೆ ಹಾರಿದೆ ಎಂದು ಜಪಾನ್​ ರಕ್ಷಣಾ ಸಚಿವಾಲಯ ತಿಳಿಸಿದೆ.







ಈ ವಾರದ ಆರಂಭದಲ್ಲಿ ಉತ್ತರ ಕೊರಿಯಾ, ದಕ್ಷಿಣ ಕೊರಿಯಾ, ಜಪಾನ್​ನೊಂದಿಗೆ ತ್ರಿಪಕ್ಷೀಯ ಸಮರಾಭ್ಯಾಸಕ್ಕೆ ಅಮೆರಿಕ​ ವಿಮಾನವಾಹಕ ನೌಕೆಯನ್ನು ನಿಯೋಜನೆ ಮಾಡಿದ್ದ ಕುರಿತು ಟೀಕೆ ಮಾಡಿತ್ತು. ಜೊತೆಗೆ ಪ್ರತಿಬಂಧದ ಹೊಸ ಪ್ರದರ್ಶನ ಎಂದು ಎಚ್ಚರಿಕೆ ನೀಡಿತ್ತು.


ಮತ್ತೆ ತನ್ನ ಚಾಳಿ ಮುಂದುವರಿಸಿರುವ ಉತ್ತರ ಕೊರಿಯಾವು ಸತತ ಎರಡನೇ ದಿನವೂ ದಕ್ಷಿಣ ಕೊರಿಯಾದ ಗಡಿ ಉದ್ದಕ್ಕೂ ಕಸ ತುಂಬಿದ್ದ ಬೃಹತ್​ ಬಲೂನ್​ಗಳನ್ನು ತೇಲಿಬಿಟ್ಟಿತ್ತು. ಈ ಬಗ್ಗೆ ದಕ್ಷಿಣ ಕೊರಿಯಾ ಟೀಕಿಸಿದ ಬೆನ್ನಲ್ಲೇ ಉತ್ತರ ಕೊರಿಯಾ, ಕ್ಷಿಪಣಿ ಉಡಾವಣೆ ಮಾಡಿರುವ ಬಗ್ಗೆ ಮಾಹಿತಿ ನೀಡಿದೆ. ಅದಲ್ಲದೇ ಮಂಗಳವಾರವಷ್ಟೇ ಕೊರಿಯನ್​ ಯುದ್ಧ ಪ್ರಾರಂಭದ 74ನೇ ವರ್ಷದ ವಾರ್ಷಿಕೋತ್ಸವದ ನೆನಪಿಗಾಗಿ ಪ್ಯೋಂಗ್ಯಾಂಗ್​ನಲ್ಲಿ ಸಾಮೂಹಿಕ ರ‍್ಯಾಲಿ ನಡೆಸಲಾಯಿತು. 'ಅಮೆರಿಕದ ಸಾಮ್ರಾಜ್ಯಶಾಹಿ ವಿರುದ್ಧದ ಹೋರಾಟದ ದಿನ' ಎಂದು ಇದನ್ನು ಉತ್ತರ ಕೊರಿಯಾ ಕರೆದಿದೆ. ಇದಾದ ಒಂದು ದಿನದಲ್ಲೇ ಉತ್ತರ ಕೊರಿಯಾ ಕ್ಷಿಪಣಿ ಉಡಾವಣೆ ಮಾಡಿದೆ.



Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ