ರೈಲ್ವೆ ನೇಮಕಾತಿ ಮಂಡಳಿಯ ಈ ಕ್ರಮಕ್ಕೆ ಹಿಂದು ಪರ ಸಂಘಟನೆಗಳ ಮುಖಂಡರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಮಂಗಳೂರಿನ ಮಣೇಲ್ ಬೆಸೆಂಟ್ ವಿದ್ಯಾ ಕೇಂದ್ರದಲ್ಲಿ ಕೂಡ ಪರೀಕ್ಷೆ ನಡೆಯಲಿದೆ. ಈ ಪರೀಕ್ಷೆಗೆ ನೀಡಲಾದ ಹಾಲ್ ಟಿಕೆಟ್ನಲ್ಲಿ ಮಂಗಳಸೂತ್ರ ತೆಗೆದಿರಿಸುವಂತೆ ಉಲ್ಲೇಖಿಸಿರುವುದು ಕಂಡುಬಂದಿದ್ದು, ಜಿಲ್ಲೆಯ ಹಿಂದೂ ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜನಿವಾರ ಮತ್ತು ಮಂಗಳಸೂತ್ರ ಹಾಕುವುದು ಹಿಂದೂಗಳ ಧಾರ್ಮಿಕ ಸಂಪ್ರದಾಯ. ಅದನ್ನು ತೆಗೆದು ಪರೀಕ್ಷೆ ಬರೆಯುವಂತೆ ಪ್ರವೇಶ ಪತ್ರದಲ್ಲಿ ಉಲ್ಲೇಖಿಸಲಾಗಿದೆ. ಇಂತಹ ಧರ್ಮ ವಿರೋಧಿ ಧೋರಣೆಯನ್ನು ಸಹಿಸಲು ಸಾಧ್ಯ ಎಂದು ಇಂದು ಮುಖಂಡರು ಹೇಳಿದ್ದಾರೆ.