ಕುಡತಿನಿ: 08.:ಇದು ಕೇವಲ ಪಾದಯಾತ್ರೆಯಲ್ಲ ಇದು ಬಿಜೆಪಿ ವಿಜಯಯಾತ್ರೆ. ಸಾವಿರಾರು ಸಂಖ್ಯೆಯಲ್ಲಿ ಸೇರಿರುವ ಜನರು ಸ್ಪಷ್ಟ ಸಂದೇಶ ನೀಡಲಿದ್ದಾರೆ ಎಂದು ಮಾಜಿ ಸಚಿವ ಎಂ. ಪಿ.ರೇಣುಕಾಚಾರ್ಯ ಅವರು ಹೇಳಿದ್ದಾರೆ.
ಪಾದಯಾತ್ರೆ ಉದ್ದೇಶಿಸಿ ಮಾತನಾಡಿದ ಅವರು, ವಾಲ್ಮೀಕಿ ಸಮುದಾಯ ಕಲ್ಯಾಣಕ್ಕೆ ವಿಜಯೇಂದ್ರ ಅವರ ನೇತೃತ್ವದಲ್ಲಿ ನಡೆಯುತ್ತಿರುವ ಪಾದಯಾತ್ರೆ ಇದಾಗಿದೆ. ವಾಲ್ಮೀಕಿ ಸಮುದಾಯದ ಹಣ ತಿಂದವರು ಈ ಕಾಂಗ್ರೆಸ್ನವರು. ಆದರೆ ವಾಲ್ಮೀಕಿ ಜಯಂತಿ ಘೋಷಣೆ ಮಾಡಿದವರು, ಹಣ ನೀಡಿದವರು ಮಾಜಿ ಮುಖ್ಯಮಂತ್ರಿ ಬಿ. ಎಸ್.ಯಡಿಯೂರಪ್ಪ ಎಂದರು.
ಈ ಹೋರಾಟ ಕೇವಲ ನಾಗೇಂದ್ರ ಅವರ ವಿರುದ್ಧವಲ್ಲ ಭ್ರμÁ್ಟಚಾರದ ವಿರುದ್ಧ. ನಮ್ಮ ಪಾದಯಾತ್ರೆಯನ್ನು ಹತ್ತಿಕ್ಕುವ ಕೆಲಸವನ್ನು ಸರ್ಕಾರ ಮಾಡಿತ್ತು. ಆದರೆ ಅದು ಸಾಧ್ಯವಾಗಲಿಲ್ಲ. ರಾಜ್ಯದಲ್ಲಿ ಬರ ಬಂದರೆ ಮುಖ್ಯಮಂತ್ರಿಗಳು ವೈಮಾನಿಕ ಸಮೀಕ್ಷೆಮ ಮಾಡುತ್ತಾರೆ ಎಂದು ಹೇಳಿದರು.
ನಮ್ಮ ಪಾದಯಾತ್ರೆಯಲ್ಲಿ ಲಕ್ಷ ಲಕ್ಷ ಸಂಖ್ಯೆಯಲ್ಲಿ ಜನರು ಭಾಗವಹಿಸಿದರು. ನಮ್ಮ ಪಾದಯಾತ್ರೆ ಅಭೂತಪೂರ್ವ ಯಶಸ್ಸು ಕಾಣುತ್ತಿದೆ ಎಂದರು.