Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಆಕ್ಷೇಪಾರ್ಹ ಟ್ವೀಟ್ ಪ್ರಕರಣ: ಜೆ.ಪಿ.ನಡ್ಡಾ, ವಿಜಯೇಂದ್ರ, ಮಾಳವೀಯಗೆ ನೋಟಿಸ್ ಜಾರಿ

ಬೆಂಗಳೂರು: ಆಕ್ಷೇಪಾರ್ಹ ಟ್ವೀಟ್ ಪ್ರಕರಣ ಸಂಬಂಧ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ, ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಮತ್ತು ಬಿಜೆಪಿಯ ಐಟಿ ಸೆಲ್ ವಿಭಾಗದ ರಾಷ್ಟ್ರೀಯ ಸಂಚಾಲಕ ಅಮಿತ್ ಮಾಳವೀಯ ಅವರಿಗೆ ನೋಟಿಸ್​ ಜಾರಿ ಮಾಡಲಾಗಿದೆ. ನೋಟಿಸ್ ತಲುಪಿದ 7 ದಿನಗಳ ಒಳಗೆ ಪ್ರಕರಣದ ತನಿಖಾಧಿಕಾರಿಯ ಮುಂದೆ ಹಾಜರಾಗುವಂತೆ ಸೂಚಿಸಲಾಗಿದೆ.


ಕರ್ನಾಟಕದ ಬಿಜೆಪಿಯ ಅಧಿಕೃತ 'ಎಕ್ಸ್'​ ಖಾತೆಯಲ್ಲಿ ಆಕ್ಷೇಪಾರ್ಹ ಪೋಸ್ಟ್ ಪ್ರಕಟಿಸಲಾಗಿತ್ತು. ಕಾಂಗ್ರೆಸ್​ ನಾಯಕ ರಾಹುಲ್ ಗಾಂಧಿ ಹಾಗೂ ಸಿಎಂ ಸಿದ್ದರಾಮಯ್ಯ ಅವರು ಎಸ್​ಸಿ, ಎಸ್​ಟಿ, ಹಿಂದುಳಿದ ವರ್ಗಗಳ ಹೆಸರಿನ ಮೊಟ್ಟೆಗಳಿರುವ ಗೂಡಿನಲ್ಲಿ ಮುಸ್ಲಿಂ ಹೆಸರಿನ ಮೊಟ್ಟೆ ತಂದಿಟ್ಟು ಪೋಷಿಸುವಂತೆ, ಅದೇ ಮುಸ್ಲಿಂ ಹೆಸರಿನ ಮೊಟ್ಟೆಯಿಂದ ಹೊರಬಂದ ಮರಿ ಕೊನೆಗೆ ಇತರ ಹಕ್ಕಿಗಳನ್ನು ಓಡಿಸುತ್ತಿರುವಂತೆ ಸೂಚಿಸುವ ಕಾರ್ಟೂನ್ ವಿಡಿಯೋವೊಂದನ್ನು ಮೇ 4ರಂದು ಬಿಜೆಪಿ ಹಂಚಿಕೊಂಡಿತ್ತು.


ಈ ವಿವಾದಿತ ಪೋಸ್ಟ್ ವಿರುದ್ಧ ಕೆಪಿಸಿಸಿಯ ಮಾಧ್ಯಮ ಮತ್ತು ಸಂವಹನ ವಿಭಾಗದ ಮುಖ್ಯಸ್ಥ ರಮೇಶ್ ದೂರು ನೀಡಿದ್ದರು. ಇದರನ್ವಯ ಬೆಂಗಳೂರಿನ ಹೈಗ್ರೌಂಡ್ಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಅಲ್ಲದೇ, ಜೆ.ಪಿ. ನಡ್ಡಾ, ವಿಜಯೇಂದ್ರ, ಅಮಿತ್​ ಮಾಳವೀಯ ಅವರಿಗೆ ಮೇ 6ರಂದು ಪೊಲೀಸರು ನೋಟಿಸ್​ ಜಾರಿ ಮಾಡಿ ವಿಚಾರಣೆಗೆ ಹಾಜರಾಗಲು ಸೂಚಿಸಿದ್ದಾರೆ.

Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ