Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಜಾಗೃತಿ ಮೂಡಿಸಿದ ಪ್ರಕೃತಿ ವಿಕೋಪ ನಿರ್ವಹಣೆ ಕುರಿತು ಅಣುಕು ಪ್ರದರ್ಶನ

ಗದಗ  ಜುಲೈ 12: ಮುಂಗಾರು ಹಂಗಾಮಿನ ಸಂದರ್ಭದಲ್ಲಿ ಜಿಲ್ಲೆಯಲ್ಲಿ ಅತೀವೃಷ್ಟಿಯಿಂದ ಪ್ರವಾಹ ಸಂಭವಿಸಿದಾಗ ಉಂಟಾಗುವ ಸಂಕಷ್ಟದಿಂದ ಪಾರಾಗುವ ವಿಧಾನವನ್ನು ಜಿಲ್ಲಾ ಮಟ್ಟದಲ್ಲಿ ರಾಷ್ಟ್ರೀಯ ವಿಪತ್ತು ನಿರ್ವಹಣಾ  ತಂಡದವರು ಅಣುಕು ಪ್ರದರ್ಶನ ಪ್ರಸ್ತುತಪಡಿಸಿ ಜಾಗೃತಿ ಮೂಡಿಸಿದ್ದಾರೆ ಎಂದು ಜಿಲ್ಲಾಧಿಕಾರಿ ಗೋವಿಂದರೆಡ್ಡಿ ತಿಳಿಸಿದರು.


ನಗರದ ಭೀಷ್ಮಕೆರೆ ಆವರಣದಲ್ಲಿ ಜಿಲ್ಲಾಡಳಿತ, ರಾಷ್ಟ್ರೀಯ ವಿಪತ್ತು ನಿರ್ವಹಣಾ  ತಂಡದೊಂದಿಗೆ ಆಯೋಜಿಸಲಾದ ಅಣುಕು ಪ್ರದರ್ಶನ ವೀಕ್ಷಿಸಿ ಅವರು ಮಾತನಾಡಿದರು. ರಾಷ್ಟ್ರೀಯ ವಿಪತ್ತು ನಿರ್ವಹಣಾ ತಂಡದೊಂದಿಗೆ ಜಿಲ್ಲಾ ಮಟ್ಟದ ವಿವಿಧ ತಂಡಗಳು ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಸಂತ್ರಸ್ತರನ್ನು (ಸಾರ್ವಜನಿಕರನ್ನು) ಪಾರು ಮಾಡುವುದಲ್ಲದೇ ತುರ್ತು ಪರಿಸ್ಥಿತಿಗನುಸಾರವಾಗಿ ಅವರ ಆರೋಗ್ಯ ರಕ್ಷಣೆಯ ಕಾರ್ಯಾಚರಣೆಗೂ ಕೂಡ ಮುಂದಾಗಲಿವೆ ಎಂದರು.


ರಾಷ್ಟ್ರೀಯ ವಿಪತ್ತು ನಿರ್ವಹಣಾ ತಂಡದ (ಎನ್‍ಡಿಆರ್‍ಎಫ್ ) ಮುಖ್ಯಸ್ಥರಾದ  ಇನ್ಸ ಪೆಕ್ಟರ್  ಗೋಪಾಲ ಕೃಷ್ಣ ಅವರು ಮಾತನಾಡಿ ಪ್ರವಾಹ ಸಂದರ್ಭ ಉಂಟಾದಾಗ ನಾಗರೀಕರ ಪ್ರಾಣ ರಕ್ಷಣೆಗಾಗಿ ನಮ್ಮ ತಂಡವು ಸದಾ ಸನ್ನದ್ಧವಾಗಿ   ಕಾರ್ಯನಿರ್ವಹಿಸುತ್ತದೆ ಎಂದರು.


ಈ ಅಣುಕು ಪ್ರದರ್ಶನ ಏರ್ಪಡಿಸುವ ಮೂಲಕ ಜಿಲ್ಲೆಯಲ್ಲಿ ಅತೀವೃಷ್ಟಿ ಹಾಗೂ ಪ್ರವಾಹ ಎದುರಾದಾಗ ಸಾರ್ವಜನಿಕರ ಜೀವಹಾನಿ ತಡೆಯುವ ವಿಧಾನ ಹಾಗೂ ಆಸ್ತಿ ಸಂರಕ್ಷಣೆ ಕುರಿತು ಜನ ಸಾಮಾನ್ಯರಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ. ವಿಪತ್ತು ನಿರ್ವಹಣಾ ತಂಡದೊಂದಿಗೆ ಸಂದಿಗ್ದ ಪರಿಸ್ಥಿತಿಯಲ್ಲಿ ಸಾರ್ವಜನಿಕರೂ ಸಹ ಸಹಕಾರ ನೀಡುವ ಮೂಲಕ ಜೀವ ಹಾನಿ ನಿಯಂತ್ರಣದಲ್ಲಿ ಕೈಜೋಡಿಸಬೇಕು ಎಂದರು.


ಈ ಅಣುಕು ಪ್ರದರ್ಶನ ವೀಕ್ಷಿಸಿದ ಜನಸಾಮಾನ್ಯರು ಎನ್‍ಡಿಆರ್‍ಎಫ್ ತಂಡದ ಮೂಲಕ ಜನರ ಜೀವ ರಕ್ಷಣೆಯಲ್ಲಿ ಇತರರಿಗೂ ತಿಳಿಸಿ ಕೊಡುವ ಮೂಲಕ ಜೀವ ಹಾನಿ ಹಾಗೂ ಆಸ್ತಿ ಹಾನಿ ತಡೆಯುವ ಉದ್ದೇಶ ಈ ಅಣುಕು ಪ್ರದರ್ಶನದ ಮೂಲ ಉದ್ದೇಶವಾಗಿದೆ ಎಂದು ಹೇಳಿದರು.


ಈ ಸಂದರ್ಭದಲ್ಲಿ ತಹಶೀಲ್ದಾರ ಶ್ರೀನಿವಾಸಮೂರ್ತಿ ಕುಲಕರ್ಣಿ, ಜಿಲ್ಲಾ ಅಗ್ನಿಶಾಮಕ ದಳದ ಅಧಿಕಾರಿ ವಿ.ಎಸ್.ಠಕ್ಕೇಕರ್, ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತ ಶಿವಾನಂದ ರಾಜನಾಳ,  ಎನ್.ಡಿ.ಆರ್.ಎಫ್. ಹಾಗೂ  ಅಗ್ನಿ ಶಾಮಕ ದಳದ ಸಿಬ್ಬಂದಿಗಳು, ವೋಡಾಫೋನ್, ಏರಟೆಲ್, ಜಿಯೋ ಬಿಎಸ್‍ಎನ್‍ಎಲ್ ಸೇರಿದಂತೆ ದೂರವಾಣಿ ಸಂಸ್ಥೆಯವರು,  ಎನ್.ಎಸ್.ಎಸ್. ಘಟಕದವರು ಹಾಜರಿದ್ದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ