LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
International News

ಪಾಕ್ ಬಂದರಿನಲ್ಲಿ ’ಉಗ್ರ’ ಪ್ರತಾಪ: 7 ಕಾರ್ಮಿಕರು ಬಂದೂಕಿಗೆ ಬಲಿ

ಇಸ್ಲಾಮಾಬಾದ್,09: ಪಾಕಿಸ್ತಾನದಲ್ಲಿ ಭಯೋತ್ಪಾದಕ ದಾಳಿ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಗ್ವಾದರ್​ನಲ್ಲಿ ಉಗ್ರ ದಾಳಿ ನಡೆದಿದ್ದು 7 ಕಾರ್ಮಿಕರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ಗ್ವಾದರ್‌ನ ಸರಬಂದ್‌ನಲ್ಲಿರುವ ಫಿಶ್ ಹಾರ್ಬರ್ ಜೆಟ್ಟಿ ಬಳಿಯ ವಸತಿ ಕ್ವಾರ್ಟರ್ಸ್​​ಗಳ ಮೇಲೆ ಭಯೋತ್ಪಾದಕರು ದಾಳಿ ನಡೆಸಿದ್ದಾರೆ. ಉಗ್ರರು ಮನಬಂದಂತೆ ಗುಂಡಿನ ದಾಳಿ ನಡೆಸಿದ್ದಾರೆ. ಇದರಿಂದ ಮಲಗಿದ್ದ ಏಳು ಮಂದಿ ಸಾವನ್ನಪ್ಪಿದ್ದು, ಮತ್ತೊಬ್ಬರು ಗಾಯಗೊಂಡಿದ್ದಾರೆ.


ಇತ್ತೀಚೆಗೆ ಸೆಂಟರ್ ಫಾರ್ ರಿಸರ್ಚ್ ಅಂಡ್ ಸೆಕ್ಯುರಿಟಿ ಸ್ಟಡೀಸ್ ವಾರ್ಷಿಕ ಭದ್ರತಾ ವರದಿಯನ್ನು ಬಿಡುಗಡೆ ಮಾಡಲಾಗಿದೆ.

ಈ ವರದಿಯ ಪ್ರಕಾರ, 2023 ರಲ್ಲಿ ಪಾಕಿಸ್ತಾನದಲ್ಲಿ 789 ಭಯೋತ್ಪಾದಕ ದಾಳಿಗಳು ನಡೆದಿವೆ. ಈ ದಾಳಿಯಲ್ಲಿ 1,524 ಜನರು ಸಾವನ್ನಪ್ಪಿದ್ದಾರೆ ಮತ್ತು 1,463 ಜನರು ಗಾಯಗೊಂಡಿದ್ದಾರೆ. ಇದು ಕಳೆದ ಆರು ವರ್ಷಗಳಲ್ಲೇ ಅತ್ಯಧಿಕ ದಾಖಲೆಯಾಗಿದೆ.


ಈ ಹಿಂದೆ ಮಾರ್ಚ್ 20 ರಂದು ಪಾಕಿಸ್ತಾನದ ಬಲೂಚಿಸ್ತಾನದ ಗ್ವಾದರ್ ಬಂದರಿನ ಮೇಲೆ ಉಗ್ರರು ದಾಳಿ ನಡೆಸಿರುವ ಸುದ್ದಿ ಬೆಳಕಿಗೆ ಬಂದಿತ್ತು .  ಎಂಟು ಶಸ್ತ್ರಸಜ್ಜಿತ ಭಯೋತ್ಪಾದಕರು ಗ್ವಾದರ್ ಬಂದರಿನ  ಸಂಕೀರ್ಣಕ್ಕೆ ಪ್ರವೇಶಿಸಿದ್ದರು ಎಂದು ಹೇಳಲಾಗಿದೆ. ಇದಾದ ನಂತರ ಸ್ಥಳದಲ್ಲೇ ಗುಂಡಿನ ದಾಳಿ ಮತ್ತು ಬಾಂಬ್ ಸ್ಫೋಟಗಳು ಸಂಭವಿಸಿದ್ದವು.


ನಿಷೇಧಿತ ಬಲೂಚಿಸ್ತಾನ್ ಲಿಬರೇಶನ್ ಆರ್ಮಿ ಈ ದಾಳಿ ನಡೆಸಿದೆ ಎಂದು ಮಕ್ರನ್ ವಿಭಾಗದ ಕಮಿಷನರ್ ಸಯೀದ್ ಅಹ್ಮದ್ ಉಮ್ರಾನಿ ಹೇಳಿದ್ದಾರೆ.  ದಾಳಿಯಲ್ಲಿ ಯಾವುದೇ ಸ್ಥಳೀಯರು ಗಾಯಗೊಂಡಿರುವ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ.ಪ್ರ  ತೀಕಾರವಾಗಿ ಏಳು ಮಂದಿ ದಾಳಿಕೋರರನ್ನು ಕೊಲ್ಲಲಾಯಿತು ಮತ್ತು ಇದರ ನಂತರ ಗುಂಡಿನ ದಾಳಿಯನ್ನು ನಿಲ್ಲಿಸಲಾಯಿತು ಎಂದು ಗ್ವಾದರ್ ಹಿರಿಯ ಪೊಲೀಸ್ ಅಧೀಕ್ಷಕ ಜೊಹೈಬ್ ಮೊಹ್ಸಿನ್ ಮಾಧ್ಯಮಗಳಿಗೆ ತಿಳಿಸಿದ್ದರು.


ಬಲೂಚಿಸ್ತಾನದ ಮುಖ್ಯಮಂತ್ರಿ ಮಿರ್ ಸರ್ಫ್ರಾಜ್ ಬುಗ್ತಿ ಅವರು ಗ್ವಾದರ್‌ನಲ್ಲಿ ನಡೆದ ದಾಳಿಯನ್ನು ಖಂಡಿಸಿದರು ಮತ್ತು ಅದನ್ನು ಮುಕ್ತ ಭಯೋತ್ಪಾದನೆ ಎಂದು ಕರೆದಿದ್ದಾರೆ. ದುಷ್ಕರ್ಮಿಗಳನ್ನು ಬಿಡಲಾಗುವುದಿಲ್ಲ ಮತ್ತು ಗುಂಡಿನ ದಾಳಿಯಲ್ಲಿ ಸಾವನ್ನಪ್ಪಿದವರ ಕುಟುಂಬಗಳಿಗೆ ಬೆಂಬಲ ನೀಡುವುದಾಗಿ ಹೇಳಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸ್ವಚ್ಛತೆಯೇ ಸೇವೆ-2026' ಅಭಿಯಾನ ಆರಂಭ: ಸಾರ್ವಜನಿಕರ ಸಹಭಾಗಿತ್ವಕ್ಕೆ ಕರೆಸ್ವಚ್ಛತೆಯೇ ಸೇವೆ-2026' ಅಭಿಯಾನ ಆರಂಭ: ಸಾರ್ವಜನಿಕರ ಸಹಭಾಗಿತ್ವಕ್ಕೆ ಕರೆವಿ.ಶ್ರೀ.ಕೃ. ವಿಶ್ವವಿದ್ಯಾಲಯದಲ್ಲಿ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ: ಅಭಿವೃದ್ಧಿಗೆ ಎಲ್ಲರ ಸಹಭಾಗಿತ್ವ ಅಗತ್ಯಕರಕುಶಲತೆಯ ಜೊತೆ ಶಿಕ್ಷಣವೂ ಅನಿವಾರ್ಯ: ಲಿಡ್ಕರ್ ಅಧ್ಯಕ್ಷ ಮುಂಡರಗಿ ನಾಗರಾಜತಾಳಿಕೋಟೆ ತಾಲೂಕು ಕೂಡ ಶೀಘ್ರ ಬರಪೀಡಿತ ಪಟ್ಟಿಗೆ : ಶಾಸಕ ನಾಡಗೌಡತೇರದಾಳ ಹಾಗೂ ರಬಕವಿ /ಬನಹಟ್ಟಿ ತಾಲೂಕುಗಳು ಬರಗಾಲ ಪಟ್ಟಿಗೆ, ಸಿಎಂ ಡಿಕೆ ಶಿವಕುಮಾರ್ ಅವರಿಗೆ ಅಭಿನಂದನೆ.ರೋಗಿಗಳಿಗೆ ಹಾಲುಹಣ್ಣು ವಿತರಿಸಿ ಬಿಜೆಪಿ ಕಾರ್ಯಕರ್ತರಿಂದ ’ಸೇವಾ ಸಂಕಲ್ಪಹಕ್ಕುಪತ್ರ ಪಡೆದ ಫಲಾನುಭವಿಗಳಿಗೆ ಫಾರಂ-2 ಇ-ಖಾತಾ ಮಾಡಿಕೊಡಲು ಆಗ್ರಹಸೆ.20ರಂದು ಬಳ್ಳಾರಿಯಲ್ಲಿ ಹಿಂದೂ ಮಹಾ ಗಣಪತಿ ಭವ್ಯ ಶೋಭಾಯಾತ್ರೆಜನರ ಮನೆ ಬಾಗಿಲಿಗೆ ಸರ್ಕಾರದ ಸೇವೆ ಸಿಎಂ ಕನಸು; ಜನರಿಗೆ ತೊಂದರೆ ನೀಡಿದರೆ ಕ್ರಮ: ನಾರಾ ಭರತ್ ರೆಡ್ಡಿ