Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

SSLC ಟಾಪರ್ ಅಂಕಿತಾಗೆ 5 ಲಕ್ಷ, 3ನೇ ಸ್ಥಾನ ಪಡೆದ ನವನೀತ್​ಗೆ 2 ಲಕ್ಷ ರೂ. ಉಡುಗೊರೆ ನೀಡಿದ ಡಿಸಿಎಂ

ಬೆಂಗಳೂರು: ಸರ್ಕಾರಿ ಶಾಲೆಯಲ್ಲಿ ಓದಿ ಎಸ್​ಎಸ್​ಎಲ್​ಸಿ ಪರೀಕ್ಷೆಯಲ್ಲಿ ಮೊದಲ ರಾಂಕ್ ಪಡೆದ ಬಾಗಲಕೋಟೆ ಜಿಲ್ಲೆಯ ಮುಧೋಳದ ಅಂಕಿತಾಗೆ 5 ಲಕ್ಷ ರೂ. ನೀಡಿ ಹಾಗೂ 3ನೇ ಸ್ಥಾನ ಪಡೆದ ಮಂಡ್ಯದ ನವನೀತ್​ಗೆ 2 ಲಕ್ಷ ರೂ. ಪ್ರೋತ್ಸಾಹ ಧನ ಘೋಷಿಸುವ ಮೂಲಕ ಡಿಸಿಎಂ ಡಿ.ಕೆ. ಶಿವಕುಮಾರ್ ಅಭಿನಂದನೆ ಸಲ್ಲಿಕೆ ಮಾಡಿದ್ದಾರೆ.

ಡಿಸಿಎಂ ಅವರ ಆಹ್ವಾನದ ಮೇರೆಗೆ ಅಂಕಿತಾ, ಆಕೆಯ ಪೋಷಕರು ಮತ್ತು ಶಾಲೆಯವರು, ನವನೀತ್ ಅವರ ಕುಟುಂಬದವರು ಸದಾಶಿವನಗರ ನಿವಾಸಕ್ಕೆ ಮಂಗಳವಾರ ಆಗಮಿಸಿದ್ದರು. ಈ ಸಂದರ್ಭದಲ್ಲಿ ಸರ್ಕಾರಿ ಶಾಲೆಯಲ್ಲಿ ಓದಿ 3ನೇ ರಾಂಕ್ ಗಳಿಸಿರುವ ಮಂಡ್ಯದ ನವನೀತ್ ಕೂಡ ಆಗಮಿಸಿದ್ದರು. ಡಿ.ಕೆ.ಶಿವಕುಮಾರ್ ಅವರು ಇಬ್ಬರೂ ವಿದ್ಯಾರ್ಥಿಗಳಿಗೆ ಸನ್ಮಾನಿಸಿ ಅಂಕಿತಾ ಅವರಿಗೆ 5 ಲಕ್ಷ ರೂ. ಚೆಕ್ ನೀಡಿದರು. ನವನೀತ್​ಗೆ 2 ಲಕ್ಷ ರೂ. ಉಡುಗೊರೆ ಪ್ರಕಟಿಸಿ ಚೆಕ್ ನೀಡುವಂತೆ ಕಚೇರಿ ಸಿಬ್ಬಂದಿಗೆ ಸೂಚಿಸಿದರು.


ಈ ಸಂದರ್ಭದಲ್ಲಿ ಮಾತನಾಡಿದ ಡಿಸಿಎಂ ಅವರು, ಮೊನ್ನೆ 10ನೇ ತರಗತಿ ಫಲಿತಾಂಶ ನೋಡಿದಾಗ, ಬಾಗಲಕೋಟೆಯ ಬಸವರಾಜು ಅವರ ಪುತ್ರಿ ಅಂಕಿತಾ 625ಕ್ಕೆ 625 ಅಂಕಗಳನ್ನು ಪಡೆದಿರುವುದನ್ನು ಕಂಡು ಸಂತೋಷವಾಯಿತು, ಬಹಳ ಹೆಮ್ಮೆ ಎನಿಸಿತು. ನಮ್ಮ ಸರ್ಕಾರಿ ಶಾಲೆ ಮಕ್ಕಳು ಹಾಗೂ ಅಲ್ಲಿನ ಶಿಕ್ಷಕರು ಬಹಳ ಸಮರ್ಥರಿದ್ದಾರೆ. ಅಂಕಿತಾ ಜತೆ ನಾನು ದೂರವಾಣಿ ಕರೆ ಮೂಲಕ ಮಾತನಾಡಿ ಬೆಂಗಳೂರಿಗೆ ಬಂದಾಗ ನನ್ನ ಮನೆಗೆ ಬರುವಂತೆ ಆಹ್ವಾನಿಸಿದ್ದೆ. ಅವರು ಇಂದು ಆಗಮಿಸಿದ್ದಾರೆ. ಸರ್ಕಾರದ ಪರವಾಗಿ ನಾನು ಈ ಹೆಣ್ಣುಮಗಳು ಹಾಗೂ ಆಕೆಯ ಪೋಷಕರನ್ನು ಅಭಿನಂದಿಸುತ್ತೇನೆ ಎಂದರು.


ಇವರ ಮುಂದಿನ ವಿದ್ಯಾಭ್ಯಾಸಕ್ಕೆ 5 ಲಕ್ಷ ರೂ. ಹಣ ಉಡುಗೊರೆಯಾಗಿ ನೀಡುತ್ತಿದ್ದೇನೆ. ಇನ್ನು ಮಂಡ್ಯದ ನವನೀತ್ ಕೂಡ ಸರ್ಕಾರಿ ಶಾಲೆಯಲ್ಲಿ ಓದಿ ಮೂರನೇ ಸ್ಥಾನ ಪಡೆದಿದ್ದು, ಈತನಿಗೆ 2 ಲಕ್ಷ ಉಡುಗೊರೆಯಾಗಿ ನೀಡುತ್ತಿದ್ದೇನೆ. ಇವರಿಗೆ ಒಳ್ಳೆಯದಾಗಲಿ ಎಂದು ಹಾರೈಸಿದರು.

Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ