Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕಾಲೇಜುಗಳಲ್ಲಿ ಸುರಕ್ಷತಾ ಕ್ರಮಗಳ ಅನುಷ್ಠಾನಕ್ಕೆ ಸೂಚನೆ

ಬೆಂಗಳೂರು: ಕಾಲೇಜು ಮತ್ತು ವಿಶ್ವವಿದ್ಯಾನಿಲಯಗಳ ಕ್ಯಾಂಪಸ್‌ಗಳಲ್ಲಿ ವಿದ್ಯಾರ್ಥಿಗಳ ಆತ್ಮಹತ್ಯೆ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಆಗ್ನೇಯ ವಿಭಾಗದ ಎಲ್ಲ ಶಿಕ್ಷಣ ಸಂಸ್ಥೆಗಳಿಗೆ ನಗರದ ಪೊಲೀಸರು ಸೂಚನೆಯನ್ನು ಕಳುಹಿಸಿದ್ದಾರೆ.

ಕಾಲೇಜುಗಳಲ್ಲಿ ಸುರಕ್ಷತಾ ಕ್ರಮಗಳ ಅನುಷ್ಠಾನ ಮತ್ತು ಬೆಂಬಲ ವ್ಯವಸ್ಥೆಗಳನ್ನು ಸ್ಥಾಪಿಸುವ ಅಗತ್ಯವನ್ನು ಒತ್ತಿಹೇಳುತ್ತಾ, ಆಗ್ನೇಯ ವಿಭಾಗದ ಪೊಲೀಸ್ ಉಪ ಆಯುಕ್ತ ಸಿಕೆ ಬಾಬಾ, ವಿದ್ಯಾರ್ಥಿಗಳು ಎದುರಿಸುತ್ತಿರುವ ಸಮಸ್ಯೆಗಳನ್ನು ಪರಿಣಾಮಕಾರಿಯಾಗಿ ಪರಿಹರಿಸಲು ಮಾನಸಿಕ ಆರೋಗ್ಯ ವೃತ್ತಿಪರರನ್ನು ಒದಗಿಸುವ ಮತ್ತು ಅಧ್ಯಾಪಕರಿಗೆ ತರಬೇತಿ ನೀಡುವ ಮೂಲಕ ಕ್ಯಾಂಪಸ್‌ಗಳನ್ನು ವಿದ್ಯಾರ್ಥಿ ಸ್ನೇಹಿಯಾಗಿಸುವ ಕ್ರಮಗಳನ್ನು ಕೈಗೊಳ್ಳಬೇಕು. ಸಂಕಷ್ಟದಲ್ಲಿರುವ ವಿದ್ಯಾರ್ಥಿಗಳ ನೆರವಿಗೆ ಸಹಾಯವಾಣಿಯನ್ನು ತೆರೆಯಬೇಕು ಎಂದು ಸೂಚಿಸಲಾಗಿದೆ.

ವಿದ್ಯಾರ್ಥಿ-ಸಮಾಲೋಚಕರ ಅನುಪಾತ 5:1 ರಷ್ಟಿರಬೇಕು. ನಿಯಮಿತ ಮಾನಸಿಕ ಆರೋಗ್ಯ ತಪಾಸಣೆ ಮತ್ತು ತೊಂದರೆಯಲ್ಲಿರುವ ವಿದ್ಯಾರ್ಥಿಗಳಿಗೆ ತಕ್ಷಣದ ಸಹಾಯ ಸಿಗುವಂತಾಗಬೇಕು. 24/7 ಸಹಾಯವಾಣಿ ಮತ್ತು ಮಾನಸಿಕ ಆರೋಗ್ಯದ ಕಾರ್ಯಕ್ರಮಗಳ ಹೊರತಾಗಿ ಬಿಕ್ಕಟ್ಟು ಮಧ್ಯಸ್ಥಿಕೆ ಸೇವೆಗಳ ಸ್ಥಾಪನೆ ಅಗತ್ಯವಿದ್ದು, ಇದು ವಿದ್ಯಾರ್ಥಿಗಳಲ್ಲಿ ಯಾತನೆ ಅಥವಾ ಆತ್ಮಹತ್ಯೆಯಂತ ಪ್ರವೃತ್ತಿಯನ್ನು ಗುರುತಿಸುತ್ತದೆ ಎಂದಿದೆ.

ತರಬೇತಿ ಪಡೆದ ವಿದ್ಯಾರ್ಥಿ ಸ್ವಯಂಸೇವಕರು ತಮ್ಮ ಸಹ ವಿದ್ಯಾರ್ಥಿಗಳಿಗೆ ಸಹಾಯ ಮತ್ತು ಮಾರ್ಗದರ್ಶನವನ್ನು ಒದಗಿಸುವ ನೆಟ್‌ವರ್ಕ್‌ಗಳನ್ನು ರಚಿಸುವುದು ಸೂಕ್ತವಾಗಿರುತ್ತದೆ. ಶೈಕ್ಷಣಿಕ ಸಂಸ್ಥೆಗಳು ಒತ್ತಡ ನಿರ್ವಹಣೆ ಮತ್ತು ಸಮಯ ನಿರ್ವಹಣೆ, ಅಧ್ಯಯನ ಕೌಶಲ್ಯಗಳು ಮತ್ತು ಆರೋಗ್ಯಕರ ಜೀವನಶೈಲಿಯ ಕುರಿತು ಕಾರ್ಯಾಗಾರಗಳಂತಹ ಸಮಗ್ರ ಉಪಕ್ರಮಗಳ ಮೂಲಕ ವಿದ್ಯಾರ್ಥಿಗಳ ಯೋಗಕ್ಷೇಮಕ್ಕೆ ಆದ್ಯತೆ ನೀಡಬೇಕು. ಅಂತರ್ಗತ ಮತ್ತು ಸಾಂಸ್ಕೃತಿಕವಾಗಿ ಸೂಕ್ಷ್ಮ ಸಮಾಲೋಚನೆ ಸೇವೆಗಳನ್ನು ಬಹು ಭಾಷೆಗಳಲ್ಲಿ ನೀಡಬೇಕು. ಇದರೊಂದಿಗೆ ಅಲ್ಪಸಂಖ್ಯಾತ ಮತ್ತು ಅಂತರರಾಷ್ಟ್ರೀಯ ವಿದ್ಯಾರ್ಥಿಗಳಿಗೆ ಅನುಗುಣವಾಗಿ ಅಗತ್ಯ ಸಹಾಯ ಮಾಡಬೇಕು ಎಂದು ಹೇಳಲಾಗಿದೆ.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ