LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
National News

ಇಂಡಿಯಾ ಮೈತ್ರಿಕೂಟ ಸಂವಿಧಾನ ಬದಲಿಸಿ ಮುಸ್ಲಿಮರಿಗೆ ಮೀಸಲಾತಿ ನೀಡಲು ನಿರ್ಧಾರ: ಮೋದಿ

ಮಿರ್ಜಾಪುರ: ''ಇಂಡಿಯಾ(I.N.D.I.A) ಮೈತ್ರಿಕೂಟ ಕೋಮುವಾದಿ ಮತ್ತು ಜಾತಿವಾದಿಯಾಗಿದೆ. ಮುಸ್ಲಿಮರಿಗೆ ಮೀಸಲಾತಿ ನೀಡಲು ಅವರು ಸಂವಿಧಾನ ಬದಲಿಸಲು ನಿರ್ಧರಿಸಿದ್ದಾರೆ'' ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಟೀಕಿಸಿದರು.


ಮಿರ್ಜಾಪುರ ಲೋಕಸಭಾ ಕ್ಷೇತ್ರದಿಂದ ಎನ್‌ಡಿಎ ಮೈತ್ರಿಕೂಟದ ಪಾಲುದಾರ ಅಪ್ನಾ ದಳದ ಅಭ್ಯರ್ಥಿ ಅನುಪ್ರಿಯಾ ಪಟೇಲ್ ಮತ್ತು ರಾಬರ್ಟ್ಸ್‌ಗಂಜ್ ಕ್ಷೇತ್ರದ ಅಭ್ಯರ್ಥಿ ರಿಂಕಿ ಕೋಲ್ ಅವರ ಪರವಾಗಿ ಭಾನುವಾರ ಚುನಾವಣಾ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿದರು.


"ಇಂಡಿಯಾ ಮೈತ್ರಿಯ ನಾಯಕರು ಕಟ್ಟಾ ಕೋಮುವಾದಿ, ಜಾತಿವಾದಿ ಮತ್ತು ಕುಟುಂಬವಾದಿಗಳಾಗಿದ್ದಾರೆ. ಕೇಂದ್ರದಲ್ಲಿ ಅವರ ಸರ್ಕಾರ ರಚನೆಯಾದರೆ ಇದೇ ತತ್ವಗಳ ಆಧಾರದ ಮೇಲೆ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಾರೆ. ಸಮಾಜವಾದಿ ಪಕ್ಷವು ಯಾದವ ಸಮುದಾಯದ ಜನರ ಪ್ರತಿಭೆಯನ್ನು ಗುರುತಿಸುವುದರಲ್ಲಿ ನಿರ್ಲಕ್ಷ್ಯವೆಸಗಿದೆ. ಮುಲಾಯಂ ಸಿಂಗ್ ಯಾದವ್ ಅವರ ಕುಟುಂಬದ ಸದಸ್ಯರಿಗೆ ಮಾತ್ರ ಟಿಕೆಟ್ ನೀಡಿದ್ದಾರೆ'' ಎಂದು ದೂರಿದರು.


"ಸಮಾಜವಾದಿ ಪಕ್ಷ (ಎಸ್‌ಪಿ) ಮತ್ತು ಕಾಂಗ್ರೆಸ್‌ನ ಇಂಡಿಯಾ ಮೈತ್ರಿಕೂಟದ ಗೆಲುವಿಗಾಗಿ ಪಾಕಿಸ್ತಾನದಲ್ಲಿ ಪ್ರಾರ್ಥನೆ ಮಾಡಲಾಗುತ್ತಿದೆ. ಗಡಿಯಾಚೆಗಿನ ಜಿಹಾದಿಗಳು ಈ ಒಕ್ಕೂಟದವರನ್ನು ಬೆಂಬಲಿಸುತ್ತಿದ್ದಾರೆ. ಎಸ್‌ಪಿ ಮತ್ತು ಕಾಂಗ್ರೆಸ್ 'ವೋಟ್ ಜಿಹಾದ್'ಗೆ ಮನವಿ ಮಾಡುತ್ತಿವೆ'' ಎಂದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವಂದೇ ಮಾತರಂ ಮೊಟಕು ಖಂಡಿಸಿ ಬೀಳಗಿಯಲ್ಲಿ ಬಿಜೆಪಿ ಪ್ರತಿಭಟನೆ: ರಾಜ್ಯಪಾಲರಿಗೆ ಮನವಿಹೊಸಪೇಟೆ ಸಕ್ಕರೆ ಕಾರ್ಖಾನೆ ಆರಂಭಿಸಿ, ಇಲ್ಲದಿದ್ದರೆ ರಾಜೀನಾಮೆ ನೀಡಿ: ರೈತ ಸಂಘ ಎಚ್ಚರಿಕೆಇಂದು ಯರಗಟ್ಟಿಯಲ್ಲಿ ಜಿಲ್ಲಾ ಮಟ್ಟದ ಪ್ರಜಾಸೇವೆ ಅಂದೋಲನ ಸಭೆಕಾಗವಾಡದ ಮಲ್ಲಿಕಾರ್ಜುನ ವಿದ್ಯಾಲಯದಲ್ಲಿ ಡಿಜಿಟಲ್ ಸ್ಮಾರ್ಟ್ ಕ್ಲಾಸ್ ಉದ್ಘಾಟನೆವಿಕಾಸ ಯುವಕ ಮಂಡಳದ ತಿಲಕ ಪ್ರಶಸ್ತಿ ಪ್ರಕಟ. : ಸ್ಲಂ ನಲ್ಲಿ ಅರಳಿದ ತಿಲಕರ ಆಶಯ  ವಂದೇ ಮಾತರಂ ಗೀತೆಯನ್ನು ಮೊಟಕುಗೊಳಿಸಿರುವ ರಾಜ್ಯ ಸರ್ಕಾರದ ನಿಲುವನ್ನು ಖಂಡಿಸಿ ಪ್ರತಿಭಟನೆ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್ರನ್ನ ಅಜರಾಮರ: ಮಲ್ಲಿಕಾರ್ಜುನ ಅರಬಿ೧೦೦ ಮೀಟರ್ ಓಟದಲ್ಲಿ ದ್ವಿತೀಯ: ಜಿಲ್ಲಾ ಮಟ್ಟಕ್ಕೆ ಚೇತನ ನ್ಯಾಮಗೌಡಸ್ವಚ್ಛತೆಯೇ ಸೇವೆ-2026' ಅಭಿಯಾನ ಆರಂಭ: ಸಾರ್ವಜನಿಕರ ಸಹಭಾಗಿತ್ವಕ್ಕೆ ಕರೆ