LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣ: 2 ಅಧಿಕಾರಿಗಳು ಎಸ್​​ಐಟಿ ವಶಕ್ಕೆ

ಬೆಂಗಳೂರು, ಜೂ. 01: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದ ಹಗರಣ ಪ್ರಕರಣಕ್ಕೆ ಸಂಬಂಧ ಇಬ್ಬರು ಅಧಿಕಾರಿಗಳನ್ನು ವಿಶೇಷ ತನಿಖಾ ದಳ ವಶಕ್ಕೆ ಪಡೆದುಕೊಂಡಿದೆ. ವಾಲ್ಮೀಕಿ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಪದ್ಮನಾಭ, ನಿಗಮದ ಲೆಕ್ಕಾಧಿಕಾರಿ ಪರಶುರಾಮ್​ ಅವರನ್ನು ಎಸ್​ಐಟಿ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ. ಅಮಾನತುಗೊಂಡಿರುವ ವ್ಯವಸ್ಥಾಪಕ ನಿರ್ದೇಶಕ ಪದ್ಮನಾಭ ಸಚಿವ ನಾಗೇಂದ್ರ ಅವರಿಗೆ ತಲೆ ನೋವಾಗಿ ಪರಿಣಮಿಸಿದ್ದಾರೆ.

ವ್ಯವಸ್ಥಾಪಕ ನಿರ್ದೇಶಕ ಪದ್ಮನಾಭ ಎಸ್​ಐಟಿ ಅಧಿಕಾರಿಗಳ ಮುಂದೆ ಸಚಿವರ ಹೆಸರು ಹೇಳಿದರೇ, ಬಿ. ನಾಗೇಂದ್ರ ಅವರು ರಾಜೀನಾಮೆ ನೀಡುವುದು ನಿಶ್ಚಿತವಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಿ. ನಾಗೇಂದ್ರ ಅವರಿಗೆ “ಎಸ್​ಐಟಿ ಮುಂದೆ ನಿಮ್ಮ ಹೆಸರು ಪ್ರಸ್ತಾಪವಾದರೆ ರಾಜೀನಾಮೆ ಪಡೆಯುವುದಾಗಿ” ಹೇಳಿದ್ದಾರೆ ಎಂದು ಮೂಲಗಳಿಂದ ಮಾಹಿತಿ ದೊರೆತಿದೆ. ಹೀಗಾಗಿ ಸಚಿವ ನಾಗೇಂದ್ರ ಅವರಿಗೆ ವ್ಯವಸ್ಥಾಪಕ ನಿರ್ದೇಶಕ ಪದ್ಮನಾಭ ತಲೆ ನೋವಾಗಿದ್ದಾರೆ. ಈ ಪ್ರಕರಣದ ತನಿಖೆಯನ್ನು ಸರ್ಕಾರ ಸಿಬಿಐಗೆ ವಹಿಸುವ ಸಾಧ್ಯತೆ ಇದೆ ಇದೆ.

ರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಸುಮಾರು 80 ರಿಂದ 85 ಕೋಟಿ ಅನುದಾನ ದುರ್ಬಳಕೆಯಾಗಿದೆ. ಈ ಅವ್ಯವಹಾರದಿಂದ ಮನನೊಂದು ನಿಗಮದ ಅಧೀಕ್ಷಕ ಪ್ರಾಮಾಣಿಕ ಅಧಿಕಾರಿ ಚಂದ್ರಶೇಖರ್ ಡೆತ್​ನೋಟ್​ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದರು. ಡೆತ್​ನೋಟ್​ ನಲ್ಲಿ ಸಚಿವರ ಮೌಖಿಕ ಆದೇಶದಂತೆ ಅವ್ಯಹಾರ ನಡೆದಿದೆ ಎಂದು ಚಂದ್ರಶೇಖರ ನಮೂದಿಸಿದ್ದರು.

ಪ್ರಕರಣದ ತನಿಖೆಯನ್ನು ಎಸ್​ಐಟಿ ನಡೆಸುತ್ತಿದೆ. ಇತ್ತ ಯುನಿಯನ್ ಬ್ಯಾಂಕ್ ಆಫ್ ಇಂಡಿಯಾ ವ್ಯವಸ್ಥಾಪಕ ನಿರ್ದೇಶಕರು ಸಿಬಿಐ ಪ್ರಾದೇಶಿಕ ಕಚೇರಿಗೆ ದೂರು ನೀಡಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್