LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಗಾಂಧಿ ಕಾಂಗ್ರೆಸ್​ ನಾಯಕತ್ವಕ್ಕೆ 100 ವರ್ಷ; ಪಕ್ಷ ಮತ್ತು ಸರ್ಕಾರದಿಂದ ಗಾಂಧಿ ನಡಿಗೆ

ಬೆಂಗಳೂರು, ಸೆಪ್ಟೆಂಬರ್​ 30: ಕಾಂಗ್ರೆಸ್ ಪಕ್ಷಕ್ಕೆ ದೊಡ್ಡ ಇತಿಹಾಸವಿದೆ. ಮಹಾತ್ಮ ಗಾಂಧಿಯವರು  ಕಾಂಗ್ರೆಸ್ ನಾಯಕತ್ವ ವಹಿಸಿಕೊಂಡು ಈ ವರ್ಷಕ್ಕೆ 100 ವರ್ಷ ಆಗುತ್ತದೆ. ಮತ್ತು ಮಹಾತ್ಮಾ ಗಾಂಧೀಜಿ ಅವರು ಬೆಳಗಾವಿಯಲ್ಲಿ ಸ್ವಾತಂತ್ರ್ಯ ಸಂಗ್ರಾಮ ಆರಂಭಿಸಿ 100 ವರ್ಷಗಳು ತುಂಬಿದೆ. ಮಹಾತ್ಮ ಗಾಂಧಿಯವರು ಕಾಂಗ್ರೆಸ್​ನ  ನಾಯಕತ್ವ ವಹಿಸಿಕೊಂಡ ಮೇಲೆ ದೇಶಕ್ಕೆ ಹೊಸ ಹುರುಪು ಬಂತು. ಈ ಹಿನ್ನೆಲೆಯಲ್ಲಿ ಈ ವರ್ಷ ಸರ್ಕಾರ ಮತ್ತು ಪಕ್ಷದ ವತಿಯಿಂದ ವಿಶೇಷ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದೇವೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದರು.

ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಪಕ್ಷ ಮತ್ತು ಸರ್ಕಾರ ಪ್ರತ್ಯೇಕವಾಗಿ ಕಾರ್ಯಕ್ರಮ ನಡೆಸಲು‌ ತೀರ್ಮಾನ ಮಾಡಿದ್ದೇವೆ. ಮಹತ್ಮಾ ಗಾಂಧಿಯವರ ಜನ್ಮದಿನ ಅಕ್ಟೋಬರ್​ 2ರಂದು ಗಾಂಧಿ ನಡಿಗೆ ಹಮ್ಮಿಕೊಂಡಿದ್ದೇವೆ. ಅಂದು ಬೆಳಗ್ಗೆ 9 ಗಂಟೆಗೆ ಗಾಂಧಿ ಭವನದಿಂದ ಒಂದೂವರೆ ಕಿಮೀ ನಡೆಯುತ್ತೇವೆ. ಟೌನ್ ಹಾಲ್​​ನಲ್ಲಿ ಪ್ರತಿಜ್ಞಾ ವಿಧಿ ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ. ಪಕ್ಷದ ಎಲ್ಲಾ ಕಾರ್ಯಕರ್ತರು ಕಾರ್ಯಕ್ರಮದಲ್ಲಿ ಭಾಗಿಯಾಗಬೇಕು. ಶಿಕ್ಷಣ ಇಲಾಖೆ, ಸಂಸ್ಕೃತಿ ಇಲಾಖೆ ಮತ್ತು ಬಿಬಿಎಂಪಿ‌ ಒಟ್ಟಾಗಿ ಕಾರ್ಯಕ್ರಮ ಮಾಡುತ್ತೇವೆ. ಇದೇ ಕಾರ್ಯಕ್ರಮ ರಾಜ್ಯಾದ್ಯಂತ ನಡೆಯಲಿದೆ ಎಂದರು.

ಕಾರ್ಯಮಕ್ಕೆ ಪ್ರತಿಯೊಬ್ಬರು ಬಿಳಿ ಟೋಪಿ, ಬಿಳಿ‌ ಬಟ್ಟೆ ಧರಿಸಿಕೊಂಡು ಬರಬೇಕು. ಕಾರ್ಯಕ್ರಮದಲ್ಲಿ ರಾಷ್ಟ್ರ ಧ್ವಜವನ್ನು ಮಾತ್ರ ಬಳಸಬೇಕು. ಕನ್ನಡ ಧ್ವಜ, ಪಕ್ಷದ ಬಾವುಟ ಯಾವುದನ್ನೂ ಬಳಸಬಾರದು ಎಂದು ಸೂಚನೆ ನೀಡಿದರು.


Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್ರನ್ನ ಅಜರಾಮರ: ಮಲ್ಲಿಕಾರ್ಜುನ ಅರಬಿ೧೦೦ ಮೀಟರ್ ಓಟದಲ್ಲಿ ದ್ವಿತೀಯ: ಜಿಲ್ಲಾ ಮಟ್ಟಕ್ಕೆ ಚೇತನ ನ್ಯಾಮಗೌಡಸ್ವಚ್ಛತೆಯೇ ಸೇವೆ-2026' ಅಭಿಯಾನ ಆರಂಭ: ಸಾರ್ವಜನಿಕರ ಸಹಭಾಗಿತ್ವಕ್ಕೆ ಕರೆಸ್ವಚ್ಛತೆಯೇ ಸೇವೆ-2026' ಅಭಿಯಾನ ಆರಂಭ: ಸಾರ್ವಜನಿಕರ ಸಹಭಾಗಿತ್ವಕ್ಕೆ ಕರೆವಿ.ಶ್ರೀ.ಕೃ. ವಿಶ್ವವಿದ್ಯಾಲಯದಲ್ಲಿ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ: ಅಭಿವೃದ್ಧಿಗೆ ಎಲ್ಲರ ಸಹಭಾಗಿತ್ವ ಅಗತ್ಯಕರಕುಶಲತೆಯ ಜೊತೆ ಶಿಕ್ಷಣವೂ ಅನಿವಾರ್ಯ: ಲಿಡ್ಕರ್ ಅಧ್ಯಕ್ಷ ಮುಂಡರಗಿ ನಾಗರಾಜತಾಳಿಕೋಟೆ ತಾಲೂಕು ಕೂಡ ಶೀಘ್ರ ಬರಪೀಡಿತ ಪಟ್ಟಿಗೆ : ಶಾಸಕ ನಾಡಗೌಡತೇರದಾಳ ಹಾಗೂ ರಬಕವಿ /ಬನಹಟ್ಟಿ ತಾಲೂಕುಗಳು ಬರಗಾಲ ಪಟ್ಟಿಗೆ, ಸಿಎಂ ಡಿಕೆ ಶಿವಕುಮಾರ್ ಅವರಿಗೆ ಅಭಿನಂದನೆ.ರೋಗಿಗಳಿಗೆ ಹಾಲುಹಣ್ಣು ವಿತರಿಸಿ ಬಿಜೆಪಿ ಕಾರ್ಯಕರ್ತರಿಂದ ’ಸೇವಾ ಸಂಕಲ್ಪ