ಗಜಪಡೆ ದಾಳಿಯಿಂದ ಭತ್ತದ ಗದ್ದೆ ನಾಶ
ಮತ್ತೊಂದಡೆ ಕಾಡಾನೆ ದಾಳಿಗೆ ಅಪಾರ ಪ್ರಮಾಣದ ಭತ್ತ ನಾಶವಾಗಿದೆ. ಇದೇ ಸಕಲೇಶಪುರ ತಾಲೂಕಿನ ಮಲಗಳ್ಳಿ ಗ್ರಾಮದ ಭತ್ತದ ಗದ್ದೆಗಳಿಗೆ ಇಂದು (ಅ.17) ಮುಂಜಾನೆ ಕಾಡಾನೆಗಳ ಹಿಂಡು ನುಗ್ಗಿದೆ. ಆನೆಗಳು ಭತ್ತದ ಬೆಳೆಯನ್ನು ತುಳಿದು, ತಿಂದು ನಾಶ ಮಾಡಿವೆ. ಗ್ರಾಮದ ಹೂವಣ್ಣ, ರುದ್ರಯ್ಯ, ಚಿನ್ನಪ್ಪ, ಹೇಮಂತ್, ಉಮೇಶ್ ಎಂಬುವವರಿಗೆ ಸೇರಿದ ಭತ್ತದ ಗದ್ದೆಗಳು ಸಂಪೂರ್ಣ ನಾಶವಾಗಿವೆ.