ಬೋನಾಳ್ ಗ್ರಾಮ ನೀರಾವರಿ ಪ್ರದೇಶ. ಗ್ರಾಮದಲ್ಲಿರುವ ಪ್ರತಿಯೊಬ್ಬ ರೈತರು ವರ್ಷಕ್ಕೆ ಎರಡು ಬಾರಿ ಭತ್ತವನ್ನು ಬೆಳೆದು ಸಮೃದ್ಧರಾಗಿದ್ದಾರೆ. ಇಲ್ಲಿನ ಭೂಮಿಗೆ ಸಾಕಷ್ಟು ಬೇಡಿಕೆಯಿದೆ ಹೀಗಾಗಿಯೇ ಈ ಗ್ರಾಮಕ್ಕೆ ಆಂಧ್ರ ಮೂಲದ ಜನ ಎಂಟ್ರಿ ಕೊಟ್ಟಿದ್ದಾರೆ. ಆಂಧ್ರಪ್ರದೇಶ ಮೂಲದ ಪ್ರಭಾವಿಗಳು ಆರಂಭದಲ್ಲಿ ಗ್ರಾಮದಲ್ಲಿರುವ ಕೆಲ ರೈತರ ಅಲ್ಪ ಜಮೀನು ಖರೀದಿ ಮಾಡಿಕೊಂಡು ಕೃಷಿ ಕಾರ್ಯ ಆರಂಭಿಸಿದ್ದಾರೆ. ಬಳಿಕ ಜಾಲಿ ಕಂಟಿ ಬೆಳೆದು ಪಾಳು ಬಿದ್ದ ಜಮೀನು ಕಂಡು, ಅದಕ್ಕೂ ಬೇಲಿ ಹಾಕಿದ್ದಾರೆ.
ಗ್ರಾಮಸ್ಥರು ದಾಖಲೆಗಳನ್ನು ತೆಗೆದು ಪರಿಶೀಲನೆ ಮಾಡಿದಾಗ ಜಾಲಿ ಕಂಟಿ ಬೆಳೆದು ಪಾಳು ಬಿದ್ದಿದ್ದ ಜಮೀನು ಸರ್ಕಾರಿ ಜಮೀನು ಅಂತ ಗೊತ್ತಾಗಿದೆ. ಆದರೆ, ಆಂಧ್ರ ಮೂಲದ ಪ್ರಭಾವಿಗಳು ಸ್ಥಳೀಯ ಪ್ರಭಾವಿಗಳ ಜೊತೆ ಸೇರಿ ಸುಮಾರು 30 ಎಕರೆಗೂ ಅಧಿಕ ಸರ್ಕಾರಿ ಭೂಮಿಯನ್ನು ಲಪಾಟಿಯಿಸಿದ್ದಾರೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.