Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ವ್ಯಕ್ತಿ ಜೀವಂತವಿದ್ದರು ಮರಣ ಪ್ರಮಾಣಪತ್ರ ನೀಡಿದ ಅಧಿಕಾರಿಗಳು


ಬೆಳಗಾವಿ : ಜಿಲ್ಲೆಯ ಸವದತ್ತಿ ತಾಲೂಕಿನ ಸುತಗಟ್ಟಿ ಗ್ರಾಮದಲ್ಲಿ, ವ್ಯಕ್ತಿಯೊಬ್ಬರು ಜೀವಂತವಿದ್ದರೂ ಅವರ ಮರಣ ಪ್ರಮಾಣಪತ್ರ ನೀಡಿದ ಘಟನೆಯೊಂದು ಬೆಳಿಕಿಗೆ ಬಂದಿದೆ.

ತುಂತುರು ಹನಿ ನೀರಾವರಿ ಯೋಜನೆಗೆ ಅರ್ಜಿ ಕೊಡಲು  ಮುರಗೋಡ  ಕೃಷಿ ಇಲಾಖೆಗೆ ಹೋದಾಗ ಈ ಘಟನೆ  ನಡೆದಿರುವುದು ಬೆಳಕಿಗೆ ಬಂದಿದೆ.  ಸವದತ್ತಿ ತಾಲೂಕಿನ ಸುತಗಟ್ಟಿ ಗ್ರಾಮದ ಈಶ್ವರ ನಾಗಪ್ಪ ಅಬ್ಬಾಯಿ ಎಂಬವರು ಜೀವಂತವಿದ್ದರೂ ಗ್ರಾಮಲೇಕ್ಕಾಧಿಕಾರಿ ನೀಲಾ ಮೂರಗೋಡ(ಬಾನಿ)  ಎಂಬುವರ ಎಡವಟ್ಟಿನಿಂದ ಇವರ ಮರಣ ಹೊಂದಿದ್ದಾರೆಂದು ತಹಶೀಲ್ದಾರ್ ಕಚೇರಿಯಲ್ಲಿ ದಾಖಲಾಗಿದೆ.  ಈ ನೊಂದ ವ್ಯಕ್ತಿ  ದೋಷ ಸರಿಪಡಿಸುವಂತೆ  ಮುರಗೋಡ ನಾಡ ಕಚೇರಿ ಹಾಗೂ ಸವದತ್ತಿ ತಹಶೀಲ್ದಾರ್ ಚೇರಿಗಳಿಗೆ 5  ತಿಂಗಳಿನಿಂದ ಅಲೆದಾಡುತ್ತಿದ್ದರೂ ಅಧಿಕಾರಿಗಳು ಮಾತ್ರ ಸ್ಪಂದಿಸುತ್ತಿಲ್ಲ ಎಂಬ ಆರೋಪ ಸಾರ್ವಜನಿಕ ವಲಯದಲ್ಲಿ ಕೇಳಿ ಬಂದಿದೆ.

ಸುತಗಟ್ಟಿ ಗ್ರಾಮದ ಈಶ್ವರ ನಾಗಪ್ಪ ಅಬ್ಬಾಯಿ ರೈತನ 2021 ರಲ್ಲಿ ಮರಣ ಪ್ರಮಾಣ ಪತ್ರವನ್ನು ನೀಡಿಲಾಗಿದೆ ಎನ್ನುವ ಮಾಹಿತಿ ಲಬ್ಯವಾಗಿದೆ. ತಾವು ಮಾತ್ರ ಈಗಲೂ ಕೃಷಿಯಲ್ಲಿ ಕೆಲಸ ಮಾಡುತ್ತಾ ಜೀವನ ಸಾಗಿಸುತ್ತಿದ್ದಾರೆ.  ಈ ವ್ಯಕ್ತಿ ಮರಣ ಹೊಂದಿದ್ದಾರೆ ಎಂದು 08-07-2021ರಂದು  ಮರಣ ಪ್ರಮಾಣಪತ್ರ ದಾಖಲು ಮಾಡಿ ಅಧಿಕಾರಿಗಳು ಯಡವಟ್ಟು ಮಾಡಿದ್ದಾರೆ. ಇಷ್ಟೇ ಅಲ್ಲದೆ ತಾವು ಮಾಡಿದ ಯಡವಟ್ಟುನ್ನು ಮುಚ್ಚಿ ಹಾಕಲು ಅಧಿಕಾರಿಗಳು ಈ ದಾಖಲೆಯನ್ನು ಸರಿ ಪಡಿಸಲಾಗುವುದು ಎಂದು ಹಾರಿಕೆ ಉತ್ತರ ನೀಡಿ ನೊಂದ ವ್ಯಕ್ತಿಗೆ ಕಳುಹಿಸಿ ಕೊಟ್ಟು ಕೈ ತೊಳೆದುಕೊಂಡಿದ್ದಾರೆ ಎಂದು ಗ್ರಾಮಸ್ಥರು ಅಧೀಕಾರಿಗಳ ವಿರುದ್ದ ಆಕ್ರೋಶವನ್ನು ವ್ಯಕ್ತ ಪಡಿಸುತ್ತಿದ್ದಾರೆ.

Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ