Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಏ.27ಕ್ಕೆ ಗೋಮಾತೆಯ ಗೌರವದ ಅಭಿಯಾನ, ಸಹಿ ಸಂಗ್ರಹ ಅಭಿಯಾನಕ್ಕೆ ಚಾಲನೆ


ಬಳ್ಳಾರಿ: 10:..ಗೋಮಾತೆಯ ಗೌರವ ದಿನಾಚರಣೆಯನ್ನು ಏ.27 ರಂದು ಇಡೀ ದೇಶಾದ್ಯಂತ  ಆಚರಿಸಲಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ದೇಶದ ಗೋವು ಭಕ್ತರು ಹಮ್ಮಿಕೊಂಡಿರುವ ಸಹಿ ಸಂಗ್ರಹ ಅಭಿಯಾನಕ್ಕೆ ನಗರದ ಸತ್ಯನಾರಾಯಣ ಪೇಟೆ ಬಡಾವಣೆಯ ಶ್ರೀ ರಾಘವೇಂದ್ರ ಸ್ವಾಮಿ ಶ್ರೀಮಠದಲ್ಲಿ , ಶ್ರೀಮಠದ ಪ್ರಧಾನ ವ್ಯವಸ್ಥಾಪಕ ಪಂ.ಪ್ರಸನ್ನಾಚಾರ್ ಅವರು ಗುರುವಾರ ಚಾಲನೆ ನೀಡಿದರು. ನಂತರ ಮಾತನಾಡಿದ ಅವರು, ಏ.27 ರಂದು ಇಡೀ ವಿಶ್ವದಾತ್ಯಂತ ಗೋಮಾತಾ ಗೌರವ ದಿನವನ್ನು ಆಚರಿಸಲಾಗುತ್ತಿದೆ. ಇದರ ಭಾಗವಾಗಿ ಗೋಮಾತೆಯ ಸೌoರಕ್ಷಣೆಗೆ, ಸಹಿ ಸಂಗ್ರಹ ಅಭಿಯಾನವನ್ನು ಹಮ್ಮಿಕೊಂಡಿದೆ. ಈ ದಿನಾಂಕದಂದು ಭಾರತೀಯ ಎಲ್ಲ ಗೋವು ಭಕ್ತರು, ತಮ್ಮ ತಮ್ಮ ವ್ಯಾಪ್ತಿಯ ತಹಶೀಲ ಕಚೇರಿ, ಬ್ಲಾಕ್ ಕಚೇರಿಗಳಿಗೆ ತೆರಳಿ ತಹಸೀಲ್ದಾರ್ ಅಥವಾ ಬ್ಲಾಕ್ ಅಧಿಕಾರಿಗಳವರ ಮೂಲಕ ದೇಶದ ರಾಷ್ಟ್ರಪತಿಗಳು, ಪ್ರಧಾನ ಮಂತ್ರಿ ನರೇಂದ್ರ ಮೋದಿ, ರಾಜ್ಯದ ರಾಜ್ಯಪಾಲರಿಗೆ ಹಾಗೂ ಮುಖ್ಯಮಂತ್ರಿಗಳಿಗೆ ಮನವಿ ಪತ್ರವನ್ನು ಸಲ್ಲಿಸಬೇಕು ಎಂದರು.  ಗೋಮಾತೆಗೆ ರಾಷ್ಟ್ರೀಯ ತಾಯಿ, ರಾಷ್ಟ್ರೀಯ ದೇವರ, ರಾಷ್ಟ್ರೀಯ ದೇವತೆ, ರಾಷ್ಟ್ರೀಯ ಪರಂಪರೆ ಅಥವಾ ರಾಷ್ಟ್ರೀಯ ಗುರುತಿನ ಗೌರವಾನ್ವಿತ ಸ್ಥಾನವನ್ನು ನೀಡಬೇಕು, ಗೋವಿನ ಸೇವೆಗಾಗಿ ಕೇಂದ್ರ ಕಾನೂನು ರೂಪಿಸಬೇಕು, ಭಾರತದಲ್ಲಿ ಗೋಹತ್ಯೆಯನ್ನು ಸಂಪೂರ್ಣ ಕೊನೆಗೊಳಿಸಬೇಕು. ಆಯುರ್ವೇದ ಆಸ್ಪತ್ರೆಗಳಲ್ಲಿ ಪಂಚಗವ್ಯ ಔಷಧಿಯನ್ನು ಉಚಿತವಾಗಿ ವಿತರಿಸಬೇಕು. ಕೈಬಿಟ್ಟ ದನಗಳ ಸೇವೆಗಾಗಿ ಎಲ್ಲ ರಾಜ್ಯಗಳು ಗೋಶಾಲೆಗೆ ಅನುದಾನವನ್ನು ಒದಗಿಸಬೇಕು. ಸರ್ಕಾರಿ ನಿಯಂತ್ರಿತ ದೇವಾಲಯಗಳಲ್ಲಿ ನೈವೇದ್ಯ, ಆರತಿ, ಪೂಜೆ, ಪ್ರಸಾದಕ್ಕಾಗಿ ಕಡ್ಡಾಯವಾಗಿ ದೇಸಿ ಹಸುಗಳ ಹಾಲು, ಮೊಸರು ಹಾಗೂ ತುಪ್ಪವನ್ನು ಬಳಸಬೇಕು. ರಾಸಾಯನಿಕ ಕೃಷಿಯನ್ನು ನಿಯಂತ್ರಿಸಿ, ಗೋಮಯ ಆಧಾರಿತ ಕೃಷಿಯನ್ನು ಸರ್ಕಾರಗಳು ಉತ್ತೇಜಿಸಬೇಕು, ಪ್ರತಿಯೊಬ್ಬರೂ ಈ ಅಭಿಯಾನದಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕು ಎಂದು ಮನವಿ ಮಾಡಿದರು.

ಈ ಸಂದರ್ಭದಲ್ಲಿ ಶ್ರೀಮಠಕ್ಕೆ ಶ್ರೀ ಗುರುರಾಯರ ದರ್ಶನಕ್ಕೆ ಆಗಮಿಸಿದ ಭಕ್ತರು ಸಹಿ ಸಂಗ್ರಹ ಅಭಿಯಾನದಲ್ಲಿ ಭಾಗವಹಿಸಿ, ಗೋವು ಭಕ್ತರ ಈ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ನಿವೃತ್ತ ತಹಸೀಲ್ದಾರ್ ಅಜಿತ್ ಸಿಂಗ್, ಲೆಕ್ಕ ಪರಿಶೋಧಕ ಕೆ.ನರಸಿಂಹ ಮೂರ್ತಿ, ಗೋವು ಭಕ್ತರಾದ ಸೂರಜ್, ಸುಬ್ರಹ್ಮಣ್ಯ  ಸಿ.ವಿ.ಸೇರಿದಂತೆ ನೂರಾರು ಭಕ್ತರು ಇತರರಿದ್ದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ