LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಮಾರ್ಚ್​ 9 ರಂದು ವಿಧಾನಸೌಧ ಸುತ್ತಮುತ್ತ ವಾಹನ ಸಂಚಾರ ಬಂದ್‌

ಬೆಂಗಳೂರು, ಮಾರ್ಚ್​ 08: ಕರ್ನಾಟಕ ರಾಜ್ಯ ಪೊಲೀಸ್  ಇಲಾಖೆಯ ವತಿಯಿಂದ 2ನೇ ಆವೃತ್ತಿಯ ರಾಜ್ಯ ಮಟ್ಟದ ಕರ್ನಾಟಕ ಪೊಲೀಸ್ ರನ್  ಕಾರ್ಯಕ್ರಮವನ್ನು ಭಾನುವಾರ (ಮಾ.09) ರಂದು ಬೆಂಗಳೂರಿನಲ್ಲಿ ಆಯೋಜಿಸಲಾಗಿದೆ. ಈ ಕಾರ್ಯಕ್ರಮದಲ್ಲಿ ಪೊಲೀಸ್ ಅಧಿಕಾರಿಗಳು, ಸಿಬ್ಬಂದಿಗಳು ಹಾಗೂ ಸಾರ್ವಜನಿಕರು ಭಾಗವಹಿಸಲಿದ್ದಾರೆ.






  1. ವಿಧಾನಸೌಧದ ಕಡೆಗೆ ಸಂಚರಿಸುವ ವಾಹನಗಳನ್ನು ಕೆ.ಆರ್ ಸರ್ಕಲ್‌ನಲ್ಲಿ ಮಾರ್ಗ ಬದಲಾಯಿಸಿ ಪೊಲೀಸ್‌ ಕಾರ್ನರ್ ಕಡೆಗೆ ಚಲಿಸಲು ಅವಕಾಶ ಕಲ್ಪಿಸಲಾಗಿದೆ ಹಾಗೂ ವಿಧಾನಸೌಧದ ಕಡೆಗೆ ಯಾವುದೇ ವಾಹನಗಳ ಪ್ರವೇಶಕ್ಕೆ ಬೆಳಗ್ಗೆ 06:00 ರಿಂದ 10:00 ಗಂಟೆಯವರೆಗೆ ಅವಕಾಶವಿರುವುದಿಲ್ಲ.

  2. ಬಾಳೇಕುಂದ್ರಿ ವೃತ್ತ ಮತ್ತು ಸಿಟಿಒ ಜಂಕ್ಷನ್‌ನಿಂದ ವಿಧಾನಸೌಧ ಕಡೆಗೆ ಹೋಗುವ ವಾಹನಗಳನ್ನು ಪೊಲೀಸ್ ತಿಮ್ಮಯ್ಯ ಜಂಕ್ಷನ್‌ನಲ್ಲಿ ರಾಜಭವನದ ಕಡೆಗೆ ಹಾಗೂ ಕನ್ನಿಂಗ್ ಹ್ಯಾಮ್ ರಸ್ತೆ ಕಡೆಗೆ ಕಳುಹಿಸಲಾಗುವುದು. ವಿಧಾನಸೌಧ ಕಡೆಗೆ ಯಾವುದೇ ವಾಹನಗಳ ಪ್ರವೇಶಕ್ಕೆ ಬೆಳಗ್ಗೆ 06:00 ರಿಂದ 10:00 ಗಂಟೆಯವರೆಗೆ ಅವಕಾಶವಿರುವುದಿಲ್ಲ.

  3. ಹಳೆ ಮದ್ರಾಸ್ ರಸ್ತೆ ಮತ್ತು ಹಳೆ ವಿಮಾನ ನಿಲ್ದಾಣ ರಸ್ತೆಯ ಕಡೆಗೆ ಹೋಗುವ ವಾಹನಗಳನ್ನು ಪಡ್ಲನ್ ಜಂಕ್ಷನ್‌ನಿಂದ ದೇವಾಂಗ ರಸ್ತೆ, ಶಾಂತಿನಗರ ಮತ್ತು ರಿಚ್ಮಂಡ್​ ವೃತ್ತಕ್ಕೆ ಕಳುಹಿಸಲಾಗುವುದು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸ್ವಚ್ಛತೆಯೇ ಸೇವೆ-2026' ಅಭಿಯಾನ ಆರಂಭ: ಸಾರ್ವಜನಿಕರ ಸಹಭಾಗಿತ್ವಕ್ಕೆ ಕರೆಸ್ವಚ್ಛತೆಯೇ ಸೇವೆ-2026' ಅಭಿಯಾನ ಆರಂಭ: ಸಾರ್ವಜನಿಕರ ಸಹಭಾಗಿತ್ವಕ್ಕೆ ಕರೆವಿ.ಶ್ರೀ.ಕೃ. ವಿಶ್ವವಿದ್ಯಾಲಯದಲ್ಲಿ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ: ಅಭಿವೃದ್ಧಿಗೆ ಎಲ್ಲರ ಸಹಭಾಗಿತ್ವ ಅಗತ್ಯಕರಕುಶಲತೆಯ ಜೊತೆ ಶಿಕ್ಷಣವೂ ಅನಿವಾರ್ಯ: ಲಿಡ್ಕರ್ ಅಧ್ಯಕ್ಷ ಮುಂಡರಗಿ ನಾಗರಾಜತಾಳಿಕೋಟೆ ತಾಲೂಕು ಕೂಡ ಶೀಘ್ರ ಬರಪೀಡಿತ ಪಟ್ಟಿಗೆ : ಶಾಸಕ ನಾಡಗೌಡತೇರದಾಳ ಹಾಗೂ ರಬಕವಿ /ಬನಹಟ್ಟಿ ತಾಲೂಕುಗಳು ಬರಗಾಲ ಪಟ್ಟಿಗೆ, ಸಿಎಂ ಡಿಕೆ ಶಿವಕುಮಾರ್ ಅವರಿಗೆ ಅಭಿನಂದನೆ.ರೋಗಿಗಳಿಗೆ ಹಾಲುಹಣ್ಣು ವಿತರಿಸಿ ಬಿಜೆಪಿ ಕಾರ್ಯಕರ್ತರಿಂದ ’ಸೇವಾ ಸಂಕಲ್ಪಹಕ್ಕುಪತ್ರ ಪಡೆದ ಫಲಾನುಭವಿಗಳಿಗೆ ಫಾರಂ-2 ಇ-ಖಾತಾ ಮಾಡಿಕೊಡಲು ಆಗ್ರಹಸೆ.20ರಂದು ಬಳ್ಳಾರಿಯಲ್ಲಿ ಹಿಂದೂ ಮಹಾ ಗಣಪತಿ ಭವ್ಯ ಶೋಭಾಯಾತ್ರೆಜನರ ಮನೆ ಬಾಗಿಲಿಗೆ ಸರ್ಕಾರದ ಸೇವೆ ಸಿಎಂ ಕನಸು; ಜನರಿಗೆ ತೊಂದರೆ ನೀಡಿದರೆ ಕ್ರಮ: ನಾರಾ ಭರತ್ ರೆಡ್ಡಿ